‘ಸರಿಯಾಗಿ ಕರೆಂಟ್‌ ಕೊಡ್ತಿಲ್ಲʼ, ಮೆಸ್ಕಾಂ ಕಚೇರಿ ಮುಂದೆ ಕುಳಿತು ಬಳಕೆದಾರರ ಆಕ್ರೋಶ

Protest-for-electricity-in-Sagara.

ಸಾಗರ : ಅಸಮರ್ಪಕ ವಿದ್ಯುತ್ (Power) ಪೂರೈಕೆ ಖಂಡಿಸಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿಯ ವತಿಯಿಂದ ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಗರದ 13 ಸಾವಿರ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಮೆಸ್ಕಾಂ, ಆವಿನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಾಂತರ ವಿದ್ಯುತ್ ಮಾರ್ಗದ ಮೂಲಕ ಅನುಷ್ಠಾನ ಗೊಳಿಸಲು ಮುಂದಾಗಿದೆ. ಇದರಿಂದ ಅನಿಯಮಿತ ಲೋಡ್ ಶೆಡ್ಡಿಂಗ್‌ ಉಂಟಾಗುತ್ತಿದೆ. ಆವಿನಹಳ್ಳಿ ಹೋಬಳಿಯ ಗ್ರಾಮೀಣ ವಿದ್ಯುತ್ ಬಳಕೆದಾರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಆವಿನಹಳ್ಳಿ ಹೋಬಳಿಯ ಗ್ರಾಮಾಂತರ ಪ್ರದೇಶದ … Read more

ಹೊಂಬುಜದಲ್ಲಿ ವಿಜೃಂಭಣೆಯ ರಥೋತ್ಸವ, ಹೇಗಿತ್ತು ವೈಭವ?

Hombuja-temple-ratotsava-in-ripponpete

ರಿಪ್ಪನ್‌ಪೇಟೆ : ಹೊಂಬುಜ (Hombuja) ಕ್ಷೇತ್ರದ ಶ್ರೀ ಪದ್ಮಾವತಿ ದೇವಿ ಹಾಗೂ ಶ್ರೀ ಪಾರ್ಶ್ವನಾಥ ತೀರ್ಥಂಕರರ ವಾರ್ಷಿಕ ಮಹಾರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಶನಿವಾರ ಮುಂಜಾನೆಯಿಂದ ಕ್ಷೇತ್ರ ದೇವತೆಗಳಿಗೆ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾಹ್ನ 12.53ಕ್ಕೆ ಶ್ರೀ ಪದ್ಮಾವತಿ ದೇವಿ ಮತ್ತು ಶ್ರೀ ಪಾರ್ಶ್ವನಾಥ ಸ್ವಾಮಿ ಉತ್ಸವ ಮೂರ್ತಿಗಳ ಮಹಾರಥೋತ್ಸವ ನಡೆಯಿತು. ರಾಜ್ಯ ಹೊರರಾಜ್ಯಗಳಿಂದ ಆಗಮಿಸಿದ ಸಾವಿರಾರು ಭಕ್ತರು ದೇವಿಯ ಜಯಘೋಷದೊಂದಿಗೆ ಭಾವಪರವಶರಾದರು. ಜಾತ್ರಾ ಮಹೋತ್ಸವದಲ್ಲಿ ಶ್ರೀ 108 ಕುಂಥುಸಾಗರ ಮಹಾರಾಜ್, ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ … Read more

ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್‌, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?

Cow-theives-escaped-in-a-car-in-gajanuru

ಶಿವಮೊಗ್ಗ : ನಡುರಾತ್ರಿ ದನಗಳ್ಳತನಕ್ಕೆ ಯತ್ನಿಸುತ್ತಿದ್ದ ಗ್ಯಾಂಗ್‌ (Gang) ಒಂದು ಸ್ಥಳೀಯರು ಬರುತ್ತಿದ್ದಂತೆ ಕಾರಿನಲ್ಲಿ ಪರಾರಿಯಾಗಿದೆ. ಈ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವಮೊಗ್ಗದ ತಾಲೂಕು ಗಾಜನೂರಿನ ಬಸವೇಶ್ವರ ಬೀದಿಯಲ್ಲಿ ನಡೆದಿದೆ. ಮಾ.20ರಂದು ರಾತ್ರಿ 3 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ನಡುರಾತ್ರಿ ಶಬ್ದ, ಹೊರಗೆ ನಿಂತಿತ್ತು ಕಾರು ಬಸವೇ‍ಶ್ವರ ಬೀದಿಯಲ್ಲಿ ನಡುರಾತ್ರಿ ಶಬ್ದವಾಗುತ್ತಿತ್ತು. ನಾಯಿಗಳು ಜೋರಾಗಿ ಬೊಗಳುತ್ತಿದ್ದವು. ಅಕ್ಕಪಕ್ಕದ ಮನೆಯವರು ಎಚ್ಚರಗೊಂಡಿದ್ದಾರೆ. ಹೊರ ಬಂದಾಗ ರಸ್ತೆ ಬದಿ ನಿಂತಿದ್ದ ಹಸುವೊಂದನ್ನು ಸ್ಯಾಂಟ್ರೋ ಕಾರಿಗೆ ತುಂಬಿಕೊಳ್ಳುವ ಪ್ರಯತ್ನ … Read more

ನಗರ ಪೊಲೀಸರ ಕಾರ್ಯಾಚರಣೆ, ಬೈಕು, ಚಿನ್ನದ ಸಹಿತ ಸಿಕ್ಕಿಬಿದ್ದ ಆರೋಪಿ, ಏನಿದು ಕೇಸ್‌?

Nagara-Police-nab-house-thief

ಹೊಸನಗರ : ಮನೆಯಲ್ಲಿ ಕಳವು ಮಾಡುತ್ತಿದ್ದ ಆರೋಪಿಯನ್ನು (Thief) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟ್ಟಿನಹೊಳೆ ಗ್ರಾಮದ ಕೆ.ಆರ್. ಶರತ್ (26) ಬಂಧಿತ. ಈತನಿಂದ 1 ಲಕ್ಷ ರೂ. ಮೌಲ್ಯದ 12 ಗ್ರಾಂನ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಈಚೆಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಆಗ ಮನೆಯ ಬೀಗ ಮುರಿದು 12 ಗ್ರಾಂನ ಚಿನ್ನದ ಸರ ಹಾಗೂ 15 ಸಾವಿರ ರೂ. ನಗದು ಕಳ್ಳತನವಾಗಿತ್ತು. … Read more

ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್‌ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?

M-Srikanth-Birthday-in-Shimoga-minister-madhu-bangarappa-wishes

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಜನ್ಮದಿನವನ್ನು (Birthday) ಅವರ ಅಭಿಮಾನಿಗಳು ವಿಜೃಂಭಣೆಯಿಂದ ಆಚರಿಸಿದರು. ನಗರದ ಬಂಜಾರ ಕನ್ವೆನ್ಷನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಎಂ.ಶ್ರೀಕಾಂತ್‌ ಕೇಕ್‌ ಕತ್ತರಿಸಿ ಜನ್ಮದಿನ ಆಚರಿಸಿಕೊಂಡರು. ಇದಕ್ಕೂ ಮುನ್ನ ಬಂಜಾರ ಕನ್ವೆನ್ಷನ್‌ ಹಾಲ್‌ಗೆ ಎಂ.ಶ್ರೀಕಾಂತ್‌ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಮೆರವಣಿಗೆ ಮೂಲಕ ಅವರನ್ನು ಸಭಾಂಗಣಕ್ಕೆ ಕರೆತರಲಾಯಿತು. ಬಳಿಕ ನಟ ಪುನಿತ್‌ ರಾಜ್‌ಕುಮಾರ್‌ ಅಭಿನಯದ ರಾಜಕುಮಾರ ಸಿನಿಮಾದ ಹಾಡಿನ ಮೂಲಕ ಅಭಿಮಾನಿಗಳು ಜನ್ಮದಿನದ ಶುಭಕೋರಿದರು. ಯಾರೆಲ್ಲ ಏನೆಲ್ಲ ಹೇಳಿದರು? ನಮ್ಮ ತಂದೆ ಬಂಗಾರಪ್ಪ … Read more

ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್‌ಗೆ ಮಿನಿಸ್ಟರ್‌ ಚಾಲನೆ, ಯಾವ ಮಾರ್ಗ?

green-flag-for-Ashwamedha-KSRTC-Bus-by-Madhu-Bangarappa

ಸೊರಬ : ಸಾಗರ-ಹಾನಗಲ್ ಮಾರ್ಗದ ಸರ್ಕಾರಿ ಬಸ್ (KSRTC) ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು‌ ಬಂಗಾರಪ್ಪ‌ ಶನಿವಾರ ಚಾಲನೆ ನೀಡಿದರು. ಪಟ್ಟಣದ ಕೆಎಸ್ಆರ್‌ಟಿಸಿ ಘಟಕದಿಂದ ಅಶ್ವಮೇಧ ಬಸ್‌ ಸೌಲಭ್ಯಕ್ಕೆ ಅವರು ಹಸಿರು ನಿಶಾನೆ ತೋರಿದರು. ಈ ಬಸ್‌ ಸಾಗರ-ಸೊರಬ- ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು. ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್‌ ಮೇಲಿದ್ದ ಟ್ರಾಫಿಕ್‌ ಪೊಲೀಸ್‌ ರಿಫ್ಲೆಕ್ಟರ್‌ ಕಟೌಟ್‌ ಕದ್ದೊಯ್ದ ದುಷ್ಕರ್ಮಿಗಳು

ಕಾರಿನಲ್ಲಿ ಬಂದು ಡಿವೈಡರ್‌ ಮೇಲಿದ್ದ ಟ್ರಾಫಿಕ್‌ ಪೊಲೀಸ್‌ ರಿಫ್ಲೆಕ್ಟರ್‌ ಕಟೌಟ್‌ ಕದ್ದೊಯ್ದ ದುಷ್ಕರ್ಮಿಗಳು

Traffic-Police-Reflector-cut-out-theft

ಶಿವಮೊಗ್ಗ : ರಸ್ತೆಯ ಡಿವೈಡರ್‌ ಮೇಲೆ ಸಂಚಾರ ಪೊಲೀಸ್‌ ಸಿಬ್ಬಂದಿ ನಿಂತಿರುವಂತಿದ್ದ ರಿಫ್ಲೆಕ್ಟರ್‌ ಕಟೌಟ್‌ (Cut Out) ಅನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ರಿಫ್ಲೆಕ್ಟರ್‌ ಕಟೌಟ್‌ ಕಳವು ಮಾಡಿದ್ದಾರೆ. ಇದು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ಮಹೇಂದ್ರ ಶೋ ರೂಂ ಮುಂಭಾಗ, ಪೊಲೀಸ್‌ ಸಿಬ್ಬಂದಿಯೊಬ್ಬರು ನಿಧಾನವಾಗಿ ಚಲಿಸಿ ಎಂಬ ಬೋರ್ಡ್‌ ಹಿಡಿದು ನಿಂತಿರುವಂತಹ ರಿಫ್ಲೆಕ್ಟರ್‌ ಕಟೌಟ್‌ (Cut Out)  ಹಾಕಲಾಗಿತ್ತು. ಮಾ.16ರ ರಾತ್ರಿ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು … Read more

ಸಾಗರದ ಮಹಾಗಣಪತಿ ಜಾತ್ರೆಗೆ ಸಿದ್ಧತೆ ಜೋರು, ಮಹತ್ವದ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

Meeting-about-Ganapathi-Jathre-in-Sagara.

ಸಾಗರ : ಮಾ.30 ರಿಂದ ಏ.5ರವರೆಗೆ ಸಾಗರದ ಇತಿಹಾಸ ಪ್ರಸಿದ್ಧ ಮಹಾಗಣಪತಿ ದೇವರ ಜಾತ್ರಾ (Jathre) ಮಹೋತ್ಸವ ನಡೆಯಲಿದೆ. ಇದರ ಸಿದ್ಧತೆಗಾಗಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಜನಪ್ರತಿನಿಧಿಗಳು, ಅಧಿಕಾರಿಗಳು, ದೇವಸ್ಥಾನ ಸಮಿತಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪ್ರಭಾರ ಉಪ ವಿಭಾಗಾಧಿಕಾರಿ ರಶ್ಮಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಪೂರ್ವ ಸಿದ್ಧತೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು? ಈ ಬಾರಿಯು ಅದ್ಧೂರಿಯಾಗಿ ಮಹಾಗಣಪತಿ ದೇವರ ಜಾತ್ರೆ ನಡೆಯಲಿದೆ. ಏ.1ರಂದು ದೇವರ ಮಹಾಸ್ಯಂದನ ರಥೋತ್ಸವ ನಡೆಯಲಿದೆ. ಜಾತ್ರೆ ಅಂಗವಾಗಿ ದೇವಸ್ಥಾನದ … Read more

ಶಿವಮೊಗ್ಗದಲ್ಲಿ ಬೈಕಿನಲ್ಲಿ ಅಕ್ಕಿ ಮೂಟೆ ಇಟ್ಟುಕೊಂಡು ಹೋಗುವಾಗ ಅಪಘಾತ, ಕೇರಳದ ವ್ಯಕ್ತಿ ಸಾವು

ACCIDENT-NEWS-GENERAL-IMAGE.

ಶಿವಮೊಗ್ಗ : ಬೈಕ್‌ನ ಮುಂಭಾಗದಲ್ಲಿ ಅಕ್ಕಮೂಟೆ (Rice Bag) ಇಟ್ಟುಕೊಂಡು ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಪಿಇಎಸ್‌ ಕಾಲೇಜು ಹಿಂಭಾಗ ಕಿಮ್ಮನೆ ಗಾಲ್ಫ್‌ ಕ್ಲಬ್‌ಗೆ ತೆರಳುವ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೇರಳ ಮೂಲದ ಎರ್ನಾಕುಲಂನ ಜೋಬಿ ಪೌಲ್‌ (45) ಮೃತ ಬೈಕ್‌ ಸವಾರ. ಇಲ್ಲಿನ ಫಾರಂ ಒಂದರಲ್ಲಿ ಜೋಬಿ ಪೌಲ್‌ ಕೆಲಸ ಮಾಡುತ್ತಿದ್ದರು. ಸಾಗರ ರಸ್ತೆಯ ಅಂಗಡಿಯೊಂದರಲ್ಲಿ ಅಕ್ಕಿ ಮೂಟೆ (Rice Bag) ಖರೀದಿಸಿ, ಅದನ್ನು ಬೈಕಿನ ಮುಂಭಾಗದಲ್ಲಿ … Read more

ಭದ್ರಾವತಿ MPM ಕುರಿತು ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್‌, ಏನೇನು ಚರ್ಚೆಯಾಯ್ತು?

Minister-Eshwar-Khandre-and-Sangameshwara-Meeting-about-MPM

ಭದ್ರಾವತಿ : ಮೈಸೂರು ಪೇಪರ್‌ ಮಿಲ್ಸ್‌ (MPM) ಕಾರ್ಖಾನೆ ಪುನಾರಂಭ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ MPM ಪುನಾರಂಭ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಶಾಸಕ ಸಂಗಮೇಶ್ವರ ತಿಳಿಸಿದ್ದಾರೆ. ಸದನದಲ್ಲಿ ಚರ್ಚೆ ಬಳಿಕ ಮೀಟಿಂಗ್‌ ಎಂ.ಪಿ.ಎಂ ಕಾರ್ಖಾನೆ ಪುನಾರಂಭ ಕುರಿತು ಸದನಲ್ಲಿ ಚರ್ಚೆ ನಡೆಸಲಾಯಿತು. … Read more