ಭದ್ರಾವತಿಯಲ್ಲಿ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Bear-attack-on-a-person-at-mavinakere-in-Bhadravathi

ಭದ್ರಾವತಿ: ತೋಟಕ್ಕೆ ನಡೆದು ಹೋಗುತ್ತಿದ್ದ ವ್ಯಕ್ತಿ ಮೇಲೆ ಕರಡಿ (Bear) ದಾಳಿ ನಡೆಸಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಮಾವಿನಕೆರೆ ಬಳಿ ಘಟನೆ ಸಂಭವಿಸಿದೆ. ಮಧುಸೂದನ್‌ (38) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ. ಬಂಡಿಗುಡ್ಡದ ಮಾವಿನಕೆರೆ ಬಳಿ ಮಧುಸೂದನ್‌, ತೋಟಕ್ಕೆ ನಡೆದು ಹೋಗುತ್ತಿದ್ದರು. ಈ ಸಂದರ್ಭ ಅವರ ಮೇಲೆರಗಿದೆ. ತೀವ್ರ ಗಾಯಗೊಂಡಿದ್ದ ಮಧುಸೂದನ್‌ ಕರಡಿಯಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಇದನ್ನೂ ಓದಿ »ಶಿವಮೊಗ್ಗದಲ್ಲಿ ಆನೆಗಳ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯ … Read more

ಶಿವಮೊಗ್ಗದಲ್ಲಿ ಆನೆಗಳ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಗ್ರಾಮಸ್ಥರು ಗರಂ

Youth-Falls-to-Trench-at-adinakottige-village

ಶಿವಮೊಗ್ಗ: ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಟ್ರಂಚ್‌ಗೆ (Trench) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ದೇವಸ್ಥಾನದಿಂದ ಮನೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರಾಜ್‌ (32) ಎಂಬುವವರು ಮೃತಪಟ್ಟಿದ್ದಾರೆ. ದೇವಸ್ಥಾನದಿಂದ ಮನೆಗೆ ಬಂದಿರಲಿಲ್ಲ ಊರಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನೆ ಬಳಿಕ ಆಡಿಕೊಟ್ಟಿಗೆ ಗ್ರಾಮದ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿದರು. ಗಣೇಶೋತ್ಸವದ ಹಣಕಾಸು ವಿಚಾರವಾಗಿ ಚರ್ಚಿಸಿ ಮನೆಗೆ ತೆರಳಿದ್ದರು. ಇಂದು … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಹೆಚ್ಚಿದ ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಕಳೆದ ಮೂರ್ನಾಲ್ಕು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಇಂದಿನಿಂದ ತಗ್ಗಲಿದೆ. ಹವಾಮಾನ ಇಲಾಖೆ ಜಿಲ್ಲೆಗೆ ಇವತ್ತು ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ. (Weather) ಶಿವಮೊಗ್ಗ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನದಿಂದ ಭಾರಿ ಮಳೆಯಾಗಿತ್ತು. ಶುಕ್ರವಾರದಿಂದ ಮಳೆ ಕಡಿಮೆಯಾಗಿದ್ದು, ಇವತ್ತು ಮಳೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಆ.30ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಶಿವಮೊಗ್ಗ ತಾಲೂಕಿನ ಹಲವು ಕಡೆ ಆಗಸ್ಟ್‌ 30ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಬೀರನಕೆರೆ, ಬಿಕ್ಕೋನಹಳ್ಳಿ, ಕುಂಚೇನಹಳ್ಳಿ ಮೇಲಿನ/ಕೆಳಗಿನ ತಾಂಡ, ಕಲ್ಲಾಪುರ, ಗೋಂದಿಚಟ್ನಹಳ್ಳಿ, ಮೇಲಿನಹನಸವಾಡಿ, ಹೊಳೆಹನಸವಾಡಿ, ಬೆಳಲಕಟ್ಟೆ, … Read more

ಶಿವಮೊಗ್ಗ ಸಿಟಿ, ಆಯನೂರು, ಹಾರನಹಳ್ಳಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ, ಯಾವ್ಯಾವ ದಿನ ಎಲ್ಲೆಲ್ಲಿ ಡ್ರೈ ಡೇ?

Alcohol-sale-ban-in-Shimoga

ಶಿವಮೊಗ್ಗ: ಜಿಲ್ಲೆಯ ಪ್ರಮುಖ ಮತ್ತು ಅತಿ ಸೂಕ್ಷ್ಮ ಗಣಪತಿಗಳ ವಿಸರ್ಜನೆ ಸಂದರ್ಭ ಆಯಾ ವ್ಯಾಪ್ತಿಯಲ್ಲಿ ಮದ್ಯ ತಯಾರಿಕೆ, ಮಾರಾಟ, ಸರಬರಾಜು ಮತ್ತು ಸಾಗಾಟ ನಿಷೇಧಿಸಲಾಗಿದೆ. ಆಯಾ ವ್ಯಾಪ್ತಿಯಲ್ಲಿ ಡ್ರೈ ಡೇ (Dry Day) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಎಲ್ಲೆಲ್ಲಿ ಯಾವಾಗ ಡ್ರೈ ಡೇ? ಶಿವಮೊಗ್ಗ ಸಿಟಿ » ಹಿಂದೂ ಮಹಾಸಭಾ ಗಣಪತಿ – ಸೆ.6ರಂದು ಮೆರವಣಿಗೆ – ಸೆ.5ರ ಸಂಜೆ 6 ಗಂಟೆಯಿಂದ ಸೆ.7ರ ಬೆಳಗ್ಗೆ 6 ಗಂಟೆವರೆಗೆ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮದ್ಯ … Read more

ಅಡಿಕೆ ಧಾರಣೆ | 29 ಆಗಸ್ಟ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಹೊಸನಗರ ಮತ್ತು ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರಕಟ್ಟೆ ಗೊರಬಲು 19010 36280 ಬೆಟ್ಟೆ 56599 65499 ರಾಶಿ 46099 60399 ಸರಕು 62099 98196 ಹೊಸನಗರ ಮಾರುಕಟ್ಟೆ ಕೆಂಪುಗೋಟು 18899 35011 ಚಾಲಿ 32300 32399 ರಾಶಿ 40899 60679 ಭದ್ರಾವತಿ ಮಾರುಕಟ್ಟೆ ಪುಡಿ 11700 11700 ರಾಶಿ 51199 59099 ಸಿಪ್ಪೆಗೋಟು 11000 11000     ಇದನ್ನೂ ಓದಿ » ಶಿವಮೊಗ್ಗದ 100 ಅಡಿ … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಬಲೆಗೆ

Lokayuktha-Raid-General-Image

ಶಿವಮೊಗ್ಗ: ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ನೆಹರು ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆ‍ಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ₹10,000 ನಗದು ಮತ್ತು ಅಧಿಕಾರಿ ಎ.ಪಿ.ಶಶಿಧರ್‌ನನ್ನು ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ಮೊಹಮ್ಮದ್‌ ಆಸಿಫ್‌ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು … Read more

ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ಧರೆಗುರುಳಿದ ಮರ, ತಪ್ಪಿತು ಅನಾಹುತ, ಲಕ್ಷ್ಮೀ ಟಾಕೀಸ್‌ ಬಳಿ ಟ್ರಾಫಿಕ್‌ ಜಾಮ್‌

Tree-falls-near-lakshmi-talkies-in-Shimoga-city

ಶಿವಮೊಗ್ಗ: 100 ಅಡಿ ರಸ್ತೆಗೆ ಅಡ್ಡಲಾಗಿ ಬೃಹತ್‌ ಮರವೊಂದು (Tree) ಧರೆಗುರುಳಿದೆ. ಅದೃಷ್ಟವಶಾತ್‌ ಅನಾಹುತ ತಪ್ಪಿದೆ. ಲಕ್ಷ್ಮೀ ಟಾಕೀಸ್‌ ಸಮೀಪ ಫ್ರೀಡಂ ಪಾರ್ಕ್‌ನ ಕಾಂಪೌಂಡ್‌ ಪಕ್ಕದಲ್ಲಿಯೆ ಇದ್ದ ಮರ ಧರೆಗುರುಳಿದೆ. ಗಾಳಿ, ಮಳೆಯಿಂದಾಗಿ ಮರ ಉರುಳಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಟ್ರಾಫಿಕ್‌ ಸಿಗ್ನಲ್‌ ಬಿಟ್ಟ ಕೆಲವೇ ಕ್ಷಣದಲ್ಲಿ ಮರ ಉರುಳಿದೆ. ಹಾಗಾಗಿ ರಸ್ತೆಯಲ್ಲಿ ವಾಹನಗಳು ಇರಲಿಲ್ಲ. ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ » ಲಿಂಗನಮಕ್ಕಿ ಡ್ಯಾಂಗೆ ಹೆಚ್ಚಿದ ಒಳ ಹರಿವು, ತುಂಗಾ, ಭದ್ರಾಗೆ ಎಷ್ಟು ನೀರು ಹರಿದು … Read more

BREAKING NEWS – ಭಾರಿ ಮಳೆ, ಆ.29ರಂದು ರಜೆ ಕುರಿತು ತೀರ್ಥಹಳ್ಳಿ ತಹಶೀಲ್ದಾರ್‌ ಆದೇಶ

THIRTHAHALLI-BREAKING-NEWS

ಮಳೆ ವರದಿ: ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತೀರ್ಥಹಳ್ಳಿ ತಾಲೂಕಿನ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.29ರಂದು ರಜೆ (Holiday) ಘೋಷಣೆ ಮಾಡಲಾಗಿದೆ. ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜೆ ಅವಧಿಯನ್ನು ಮುಂದಿನ ರಜೆ ದಿನದಲ್ಲಿ ಸರಿಹೊಂದಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ಆದೇಶಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಅಲರ್ಟ್‌ ಪ್ರಕಟ, ಕೊನೆ ದಿನವು ಅಬ್ಬರಿಸುತ್ತಾ ಮಘಾ ಮಳೆ? ಇಲ್ಲಿದೆ ಡಿಟೇಲ್ಸ್‌ … Read more

ಶಿವಮೊಗ್ಗ ಜಿಲ್ಲೆಗೆ ಅಲರ್ಟ್‌ ಪ್ರಕಟ, ಕೊನೆ ದಿನವು ಅಬ್ಬರಿಸುತ್ತಾ ಮಘಾ ಮಳೆ? ಇಲ್ಲಿದೆ ಡಿಟೇಲ್ಸ್‌

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದೂ ಮಳೆ ಮುಂದುವರೆಯಲಿದೆ. ಸದ್ಯಕ್ಕೆ ಹವಾಮಾನ ಇಲಾಖೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಜೋರು ಮಳೆ ಮತ್ತು ವೇಗದ ಮೇಲ್ಮೈ ಗಾಳಿ ಇರಲಿದೆ ಎಂದು ತಿಳಿಸಲಾಗಿದೆ. (Weather) ಕಳೆದ ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಘಾ ಮಳೆ ಅಬ್ಬರಿಸುತ್ತಿದೆ. ಇವತ್ತು ಈ ಮಳೆಯ ಕೊನೆಯ ದಿನ. ಇಂದೂ ಜೋರು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ಕಡಿಮೆಯಾಗಿದೆ. ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟಿದೆ ಉಷ್ಣಾಂಶ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ … Read more