ಶಿವಮೊಗ್ಗ ತಾಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 7 DECEMBER 2024 ಶಿವಮೊಗ್ಗ : ಶಿವಮೊಗ್ಗದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಡಿ.7ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರಗೆ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಲಕ್ಷ್ಮೀಪುರ, ಹೊಸಳ್ಳಿ, ಹರಕೆರೆ, ಹೊಸ/ಹಳೆ ಹೊನ್ನಾಪುರ, ಅನುಪಿನಕಟ್ಟೆ, ಪುರದಾಳು, ಆಗಸವಳ್ಳಿ, ಕಲ್ಲೂರು, ಗೋವಿಂದಪುರ, ಹನುಮಂತಾಪುರ, ಶಾಂತಿಪುರ, … Read more

ಪಿಡಿಒ ನೇಮಕಾತಿ, ಶಿವಮೊಗ್ಗದಲ್ಲಿ ಇವತ್ತಿನಿಂದ ಎರಡು ದಿನ ಬಿಗಿ ಭದ್ರತೆಯಲ್ಲಿ ಪರೀಕ್ಷೆ

Shimoga-ADC-Siddalinga-reddy-meeting-about-pdo-exam.

SHIVAMOGGA LIVE NEWS, 7 DECEMBER 2024 ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗಾಗಿ ಡಿ.7ರಂದು ಜಿಲ್ಲೆಯ 34 ಕೇಂದ್ರಗಳಲ್ಲಿ ಹಾಗೂ 8ರಂದು 41 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ (Exam) ನಡೆಸಲಾಗುವುದು ಎಂದು ಎಡಿಸಿ ಸಿದ್ದಲಿಂಗರೆಡ್ಡಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಸಿದ್ಧತೆ ಸಭೆ ನಡೆಸಿದ ಅವರು, 2 ದಿನ ನಡೆಯುವ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ಹಾಗೂ ಪರೀಕ್ಷಾ ಕೇಂದ್ರಗಳ … Read more

ಶಿವಮೊಗ್ಗದಲ್ಲಿ ಹೆಚ್ಚಿದ ಧಗೆ, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ?

WEATHER-REPORT-SHIMOGA-

WEATHER REPORT, 7 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪರಿಣಾಮ ಮೂರ್ನಾಲ್ಕು ದಿನದಿಂದ ಜಿಲ್ಲೆಯಲ್ಲಿ ಮಳೆಯಾಗಿತ್ತು. ಇವತ್ತು ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದ್ದು ಧಗೆ ಹೆಚ್ಚಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. … Read more

ಕೇಂದ್ರ ಸಂಪುಟ ಸಭೆ, ಶಿವಮೊಗ್ಗ ಕೇಂದ್ರಿಯ ವಿದ್ಯಾಲಯ ಕುರಿತು ಮಹತ್ವದ ನಿರ್ಧಾರ

Kendriya-Vidyalaya-Shivamogga-sante-kadur.

SHIVAMOGGA LIVE NEWS, 7 DECEMBER 2024 ನವದೆಹಲಿ : ರಾಜ್ಯದಲ್ಲಿ ಮೂರು ಹೊಸ ಕೇಂದ್ರಿಯ ವಿಶ್ವವಿದ್ಯಾಲಯ ಸ್ಥಾಪನೆ, ಶಿವಮೊಗ್ಗ ಕೇಂದ್ರೀಯ ವಿದ್ಯಾಲಯವನ್ನು (Kendriya Vidyalaya) ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್, ಕರ್ನಾಟಕದಲ್ಲಿ ಮೂರು ಸೇರಿದಂತೆ ದೇಶದಾದ್ಯಂತ 85 ಕೇಂದ್ರೀಯ ವಿದ್ಯಾಲಯಗಳು ಮತ್ತು ರಾಜ್ಯದಲ್ಲಿ ಒಂದು ಸೇರಿದಂತೆ 28 ನವೋದಯ ವಿದ್ಯಾಲಯಗಳನ್ನು ತೆರೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು. … Read more

ದಿನ ಭವಿಷ್ಯ | 7 ಡಿಸೆಂಬರ್‌ 2024 | ಯಾವ್ಯಾವ ರಾಶಿಗೆ ಹೇಗಿದೆ ಈ ದಿನ?

DINA-BHAVISHYA

DINA BHAVISHYA, 7 DECEMBER 2024 ಮೇಷ ಆರೋಗ್ಯದ ಬಗ್ಗೆ ಎಚ್ಚರವಿರಲಿ. ಆರೈಕೆಯ ಅಗತ್ಯವಿದೆ. ಹಣದ ಚಲನೆ ಹೆಚ್ಚಾಗಿರುತ್ತದೆ ವೃಷಭ ಸಮಸ್ಯೆಯಿಂದ ಹೊರಬರಬೇಕಿದ್ದರೆ ಹೊಂದಾಣಿಕೆ ಬೇಕು. ನಿಜ ತನದಿಂದ ಇರಿ. ಹಿತ ಶತೃಗಳು ಹೆಚ್ಚಾಗುವ ಸಾಧ್ಯತೆ. ಮಿಥುನ ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತೀರಿ. ಕರ್ಕಾಟಕ ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ. ಸಿಂಹ ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲು … Read more

ಅಡಿಕೆ ಧಾರಣೆ | 6 ಡಿಸೆಂಬರ್‌ 2024 | ಶಿವಮೊಗ್ಗ, ಭದ್ರಾವತಿಯಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 6 DECEMBER 2024 ಶಿವಮೊಗ್ಗ : ಇಲ್ಲಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 35009 56899 ಗೊರಬಲು 17319 32519 ನ್ಯೂ ವೆರೈಟಿ 45399 50399 ರಾಶಿ 30000 50399 ಸರಕು 40400 88296 ಭದ್ರಾವತಿ ಮಾರುಕಟ್ಟೆ ರಾಶಿ 33599 50790 ಇತರೆ 24500 27000 ಇದನ್ನೂ ಓದಿ » ಅಡಿಕೆ ಧಾರಣೆ | 5 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ಭದ್ರಾವತಿ ನಗರಸಭೆ ಮಾಜಿ ಸದಸ್ಯನ ತಲೆಗೆ ಮಚ್ಚಿನೇಟು

Crime-News-General-Image

SHIVAMOGGA LIVE NEWS, 6 DECEMBER 2024 ಭದ್ರಾವತಿ : ಮದ್ಯ ಸೇವಿಸಿ ವಿದ್ಯುತ್‌ ದೀಪಗಳ ವಯರ್‌ ತುಂಡು ಮಾಡಿ, ರಸ್ತೆಯಲ್ಲಿ ಓಡಾಡುತ್ತಿದ್ದವರಿಗೆ ಅವಾಚ್ಯವಾಗಿ ನಿಂದಿಸುತ್ತಿದ್ದ ವ್ಯಕ್ತಿಗೆ ಬುದ್ದಿ ಹೇಳಿದ ನಗರಸಭೆ ಮಾಜಿ ಸದಸ್ಯನ (Member) ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ಘಟನೆಯಾಗಿದೆ. ನಗರಸಭೆ ಮಾಜಿ ಸದಸ್ಯ ಅನಿಲ್‌ ಕುಮಾರ್‌ ತಲೆಗೆ ಮಚ್ಚಿನೇಟು ಬಿದ್ದಿದೆ. ರಾತ್ರಿ ವ್ಯಕ್ತಿಯೊಬ್ಬ ಮದ್ಯ ಸೇವಿಸಿ ವಿದ್ಯುತ್‌ ದೀಪಗಳ ವಯರ್‌ ತುಂಡು ಮಾಡುತ್ತಿದ್ದ. ಆಗ ಅನಿಲ್‌ ಕುಮಾರ್‌ ಅವರು … Read more

ಶಿವಮೊಗ್ಗ ಜಿಲ್ಲೆಗೆ ಹೊಸ ಪೊಲೀಸ್‌ ಠಾಣೆ, ಯಾವುದು? ಎಷ್ಟು ಸಿಬ್ಬಂದಿ ಇರ್ತಾರೆ?

himoga-DC-office-and-Police-jeep-in-front-of-office

SHIVAMOGGA LIVE NEWS, 6 DECEMBER 2024 ಶಿವಮೊಗ್ಗ : ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಾಗರಿಕ ಹಕ್ಕು ನಿರ್ದೆಶನಾಲಯದ (ಡಿಸಿಆರ್‌ಇ) ವಿಶೇಷ ಪೊಲೀಸ್‌ ಠಾಣೆಗಳನ್ನು (STATION) ಸ್ಥಾಪನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಗು ಒಂದು ಡಿಸಿಆರ್‌ಇ ವಿಶೇಷ ಪೊಲೀಸ್‌ ಠಾಣೆ ಮಂಜೂರಾಗಿದೆ. ಏನಿದು ಡಿಸಿಆರ್‌ಇ ಪೊಲೀಸ್‌ ಠಾಣೆ? ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿರ್ವಹಿಸಲು ನಾಗರಿಕ ಹಕ್ಕು ನಿರ್ದೇಶನಾಲಯ ವಿಶೇಷ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಜೂನ್‌ ತಿಂಗಳಲ್ಲಿ ನಡೆದ ಸಚಿವ … Read more

ಇನ್‌ಸ್ಟಾಗ್ರಾಂ ಪೋಸ್ಟ್‌ನಿಂದ ಗೃಹಿಣಿಗೆ ಸಂಕಷ್ಟ, ಆಗಿದ್ದೇನು?

SMS-Fraud-Shimoga-CEN-Police-Station.

SHIVAMOGGA LIVE NEWS, 6 DECEMBER 2024 ಶಿವಮೊಗ್ಗ : ಇನ್‌ಸ್ಟಾಗ್ರಾಂನಲ್ಲಿ ಪ್ರಕಟವಾಗಿದ್ದ ಪಾರ್ಟ್‌ ಟೈಮ್‌ ಜಾಬ್‌ ಜಾಹೀರಾತು (POST) ನಂಬಿ ಗೃಹಿಣಿಯೊಬ್ಬರು 8.20 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಜಾಹೀರಾತಿನಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದಾಗ, ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಸೂಚಿಸಲಾಗಿತ್ತು. ಇದೇ ಬಗೆಯ ಎಂಟು ಟಾಸ್ಕ್‌ ಪೂರೈಸಿದಾಗ ಗೃಹಿಣಿಯ ಖಾತೆಗೆ 150 ರೂ. ಹಣ ವರ್ಗಾಯಿಸಲಾಗಿತ್ತು. ನಂತರ ಹಣ ಪಾವತಿಸಿ ಟಾಸ್ಕ್‌ ಪೂರೈಸುವಂತೆ ಸೂಚಿಸಲಾಗಿತ್ತು. ಹೆಚ್ಚುವರಿ ಲಾಭದ ಆಸೆಯಲ್ಲಿ … Read more

ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ

WEATHER-REPORT-SHIMOGA-

WEATHER REPORT, 6 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪ್ರಭಾವ ಇನ್ನು ಕಡಿಮೆಯಾಗಿಲ್ಲ. ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ. ಆಗುಂಬೆ ಭಾಗದಲ್ಲಿ ಜೋರು ಮಳೆಯಾದ ವರದಿಯಾಗಿದೆ. ಇವತ್ತೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಲ್ಲಲ್ಲೆ ಹೇಗಿದೆ ವಾತಾವರಣ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ … Read more