ಶಿವಮೊಗ್ಗದ ಜಲಾಶಯಗಳಿಗೆ ತಗ್ಗಿದ ಒಳ ಹರಿವು, ತುಂಗಾ, ಭದ್ರಾ, ಲಿಂಗನಮಕ್ಕಿಗೆ ಎಷ್ಟು ನೀರು ಬರ್ತಿದೆ?

linganamakki-dam-back-water

ಡ್ಯಾಮ್‌ ವಿವರ: ಶಿವಮೊಗ್ಗ ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಜಲಾಶಯಗಳ ಒಳ ಹರಿವು (Dam level) ಕಡಿಮೆಯಾಗಿದೆ. ಈಗಾಗಲೇ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳು ಭರ್ತಿಯಾಗಿ ನೀರು ಹೊರಗೆ ಬಿಡಲಾಗುತ್ತಿದೆ. ಆದರೆ ಒಳ ಹರಿವು ಕಡಿಮೆಯಾಗಿದ್ದು, ಹೊರ ಹರಿವು ಪ್ರಮಾಣವು ತಗ್ಗಿಸಲಾಗಿದೆ. ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು? ತುಂಗಾ ಜಲಾಶಯ: ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 34,903 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಒಟ್ಟು 26,443 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ ಕ್ರಸ್ಟ್‌ … Read more

ನೇಣು ಬಿಗಿದ ಸ್ಥಿತಿಯಲ್ಲಿ ಲಾರಿ ಮಾಲೀಕನ ಮೃತದೇಹ ಪತ್ತೆ

Truck-owner-succumbed-at-Thirthahalli

ತೀರ್ಥಹಳ್ಳಿ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಲಾರಿ ಮಾಲೀಕರೊಬ್ಬರ (Truck Owner) ಮೃತದೇಹ ಪತ್ತೆ ಆಗಿದೆ. ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮದ ಬಾವಿಕೇರಿ ನಿವಾಸಿ ಮಂಜುನಾಥ್ (42) ಮೃತರು. ಬುಧವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಮಾಲೀಕರಾಗಿದ್ದ ಮಂಜುನಾಥ್ ಅವಿವಾಹಿತರಾಗಿದ್ದರು. ತಾಯಿ ಜೊತೆ ವಾಸಿಸುತ್ತಿದ್ದರು. ಕುಟುಂಬದವರ ಜೊತೆಗೆ ತಾಯಿ ಧಾರ್ಮಿಕ ಕ್ಷೇತ್ರಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸೀರೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ … Read more

ಶಿವಮೊಗ್ಗದಲ್ಲಿ ಆಯುರ್ವೇದ ಯೋಗ, ಪ್ರಕೃತಿ ಚಿಕಿತ್ಸಾ ಸಂಸ್ಥೆಗೆ ಒತ್ತಾಯ, ಸಂಸದರ ಮನವಿಯಲ್ಲಿ ಏನೇನಿದೆ?

MP-BY-Raghavendra-memorandum-for-Ayurveda-center.

ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ ಜಾದವ್ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಅಖಿಲ ಭಾರತ ಆಯುರ್ವೇದ (Ayurveda) ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಸ್ಥಾಪಿಸುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌ Shimoga MP BY Raghavnendra memorandum … Read more

ಶಿವಮೊಗ್ಗದಲ್ಲಿ ಮೂರು ದಿನ ರಾಷ್ಟ್ರೀಯ ನೃತ್ಯ ಮಹೋತ್ಸವ, ಏನೆಲ್ಲ ಕಾರ್ಯಕ್ರಮ ಇರಲಿದೆ?

Sahana-Chetan-of-sahachetana-natyalaya

ಶಿವಮೊಗ್ಗ: ನಗರದ ಸಹಚೇತನ ನಾಟ್ಯಾಲಯ ಆ.22ರಿಂದ ಮೂರು ದಿನಗಳ ಕಾಲ ‘ನಾಟ್ಯಾರಾಧನಾ 14′ ರಾಷ್ಟ್ರೀಯ ನೃತ್ಯ (Dance) ಮಹೋತ್ಸವವನ್ನು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದೆ ಎಂದು ನಾಟ್ಯಾಲಯದ ಕಾರ್ಯದರ್ಶಿ ಸಹನಾ ಚೇತನ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹನಾ ಚೇತನ್, ಆ.22ರಂದು ಸಂಜೆ ನಾಟ್ಯಾಲಯದ ವಿದ್ಯಾರ್ಥಿಗಳು ಸಂತ ಕವಿಗಳ ಭಕ್ತಿ ಗೀತೆಗಳಿಗೆ ಭಕ್ತಿ ಸುಧಾರಸ ನೃತ್ಯ ಮಾಡಲಿದ್ದಾರೆ. ರಾತ್ರಿ 7ಕ್ಕೆ ಶ್ರೀ ಗುರುಗುಹ ಸಂಗೀತ ವಿದ್ಯಾಲಯದ ಶೃಂಗೇರಿ ಹೆಚ್. ಎಸ್.ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಾಟ್ಯಾಲಯದ ಗೌರವಾಧ್ಯಕ್ಷ ಶಾಸಕ … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಹೆಚ್ಚಿದ ಚಳಿ, ಇವತ್ತು ಎಲ್ಲೆಲ್ಲಿ ಹೇಗಿದೆ ಹವಾಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಥಂಡಿ ಹೆಚ್ಚಾಗಿದೆ. ಕನಿಷ್ಠ ತಾಪಮಾನ ಕುಸಿತ ಕಂಡಿದ್ದು, ಮೈಕೊರೆಯುವ ಚಳಿ ಇದೆ. (Weather) ಮಳೆ ಸಂಬಂಧ ರಾಜ್ಯಾದ್ಯಂತ ಯಾವುದೇ ಅಲರ್ಟ್‌ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಘಾ ಮಳೆ ಅಬ್ಬರವು ಕಡಿಮೆಯಾಗಿದೆ. ತಂಪು ವಾತಾವರಣ ಇದ್ದು, ರಾತ್ರಿ ವೇಳೆ ಚಳಿ ತೀವ್ರವಾಗಿದೆ. ಎಲ್ಲೆಲ್ಲಿ ಹೇಗಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more

ಕೈಮರ ಸರ್ಕಲ್‌ನಲ್ಲಿ ಅಪಘಾತ, ವ್ಯಕ್ತಿಯ ಎರಡು ಪಾದಗಳು ಅರ್ಧಕ್ಕೆ ಕಟ್‌, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ಭದ್ರಾವತಿ: ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ ಎರಡು ಪಾದಗಳು (Feet) ಅರ್ಧಕ್ಕೆ ಮುರಿದಿವೆ. ಯಡೇಹಳ್ಳಿ ಮತ್ತು ಕೈಮರ ಗ್ರಾಮಗಳ ಮಧ್ಯದ ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಿಪ್ಪೇರುದ್ರಸ್ವಾಮಿ ಎಂಬುವವರನ್ನು ಅಶೋಕ ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೇಗಾಯ್ತು ಘಟನೆ? ತಿಪ್ಪೇರುದ್ರಸ್ವಾಮಿ ಅವರು ಕೈಮರ ಸರ್ಕಲ್‌ನಲ್ಲಿರುವ ಅಂಗಡಿಯಲ್ಲಿ ಟೀ ಕುಡಿಯಲು ಬೈಕ್‌ ನಿಲ್ಲಿಸಿದ್ದರು. ಮೂತ್ರ ವಿಸರ್ಜನೆಗೆಂದು ರೆಸ್ತೆ ದಾಟಿ ಹೋಗಿದ್ದರು. ಟೀ ಅಂಗಡಿ ಬಳಿ ಮರಳಿ ಬರುವಾಗ ಶಿವಮೊಗ್ಗದಿಂದ ಚನ್ನಗಿರಿ … Read more

ಶುಭೋದಯ ಶಿವಮೊಗ್ಗ | 21 ಆಗಸ್ಟ್‌ 2025 | ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಮಹಾಭಾರತ ಯುದ್ದದ ವೇಳೆ ಅರ್ಜುನನು ಕೌರವರ ವಿರುದ್ಧ ಹೋರಾಡಲು ಹಿಂದೇಟು ಹಾಕುತ್ತಾನೆ. ಆಗ ಶ್ರೀ ಕೃಷ್ಣನು ಅರ್ಜುನನಿಗೆ ಯುದ್ದದ ಮಹತ್ವ ತಿಳಿಸಿದ. ಆ ಬಳಿಕ ಅರ್ಜುನ ಯುದ್ದಕ್ಕೆ ಸಜ್ಜಾಗಿ ನಿಂತ. ಕೌರವರನ್ನು ನಿರ್ನಾಮ ಮಾಡಿ, ಧರ್ಮ ಸ್ಥಾಪನೆ ಮಾಡಿದ. ಅರ್ಜುನನ ಗುರಿಯ ಕುರಿತು ಶ್ರೀಕೃಷ್ಣನು ಸ್ಪಷ್ಟತೆ ನೀಡಿದ. ಇದರ ಆಧಾರದಲ್ಲಿಯೇ ಎದ್ದು ನಿಂತ ಅರ್ಜನ ಗುರಿ ತಲುಪಿದ. ಇದನ್ನೂ ಓದಿ » ಬಾವಿಗೆ ಬಿದ್ದ ಹಸು ರಕ್ಷಣೆ, ಹೇಗಾಯ್ತು … Read more

ದಿನ ಪಂಚಾಂಗ | 21 ಆಗಸ್ಟ್‌ 2025 | ಇವತ್ತು ಯಾವ್ಯಾವ ಕಾಲ ಎಷ್ಟೊತ್ತಿಗೆ ಇರಲಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಗುರುವಾರ, 21 ಆಗಸ್ಟ್‌ 2025 –  ತ್ರಯೋದಶಿ ಸೂರ್ಯೋದಯ : 6.15 am ಸೂರ್ಯಾಸ್ತ : 6.46 pm ನಕ್ಷತ್ರ : ಪುಷ್ಯ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.15ರವರೆಗೆ ಅಭಿಜಿತ್‌ ಮಧ್ಯಾಹ್ನ 12.06 ರಿಂದ 12.56ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.36 ರಿಂದ 3.26ರವರಗೆ ಗೋಧೂಳಿ ಮುಹೂರ್ತ ಸಂಜೆ 6.46 ರಿಂದ 7.09ರವರೆಗೆ ಇದನ್ನೂ … Read more

ಬಾವಿಗೆ ಬಿದ್ದ ಹಸು ರಕ್ಷಣೆ, ಹೇಗಾಯ್ತು ಕಾರ್ಯಾಚರಣೆ?

Cow-Rescued-at-Hosapete-in-Soraba

ಸೊರಬ: ಬಾವಿಗೆ ಬಿದ್ದಿದ್ದ ಹಸುವನ್ನು (Cow) ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಸೊರಬದ ಹೊಸಪೇಟೆ ಬಡಾವಣೆಯ ಹುಚ್ಚಪ್ಪ ಎಂಬುವವರ 6 ವರ್ಷದ ಹಸು ಬಾವಿಗೆ ಬಿದ್ದಿತ್ತು. ಅಂದಾಜು 30 ಅಡಿ ಆಳದ ಬಾವಿಗೆ ಬಿದ್ದಿದ್ದ ಹಸುವನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಅದನ್ನು ರಕ್ಷಿಸಿದರು. ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು? ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ … Read more

ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು?

200125 Kuvempu University and Vice chancellor Prof Sharat ananthamurthy

ಶಂಕರಘಟ್ಟ: ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ‍್ಯಾಂಕಿಂಗ್‌ನಲ್ಲಿ (Ranking) ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ ಎಂದು ಕುವೆಂಪು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿ ರ‍್ಯಾಂಕಿಂಗ್‌ ನೀಡಲಾಗಿದೆ. ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ ವಿನಿಮಯಕ್ಕೆ 200 ಅಂಕಗಳು, ಮೂಲ ಸೌಕರ್ಯಗಳಿಗೆ 150 ಅಂಕಗಳು, ಆಡಳಿತ ಮತ್ತು ವಿಸ್ತರಣೆಗೆ 150 … Read more