ಶಿವಮೊಗ್ಗದ 21 ವರ್ಷದ ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ₹10,000 ದಂಡ

azgar-sentenced-for-7-years.

ಶಿವಮೊಗ್ಗ: 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರ ಸಂಬಂಧ, ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿಗೆ ಏಳು ವರ್ಷಗಳ (7 Years) ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ತೀರ್ಪು ನೀಡಿದೆ. 2021ರ ಆಗಸ್ಟ್‌ 9ರಂದು ಶಿವಮೊಗ್ಗದ ಬಾಪೂಜಿನಗರದ ನಿವಾಸಿ ರಾಹಿಲ್ (21) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಟ್ಯಾಂಕ್‌ ಮೊಹಲ್ಲಾದ ಅಜ್ಗರ್ ಖಾನ್ (21) ಮತ್ತು ಅತೀಖ್ ಪಾಷಾ (36) ಎಂಬುವವರನ್ನು … Read more

ನಾಳೆ ಶಿಕಾರಿಪುರ ಬಂದ್‌, ಯಾಕಾಗಿ ಬಂದ್‌? ಹೇಗಿರಲಿದೆ ಹೋರಾಟ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

081025-Shikaripura-Bandh-against-kutralli-toll-plaza.webp

ಶಿಕಾರಿಪುರ: ಕುಟ್ರಳ್ಳಿ ಟೋಲ್‌ (Toll Gate) ವಿರೋಧಿಸಿ ಅ.9ರಂದು ಶಿಕಾರಿಪುರ ಬಂದ್‌ಗೆ ಕರೆ ನೀಡಲಾಗಿದೆ. ಈಗಾಗಲೇ ವರ್ತಕರು, ರೈತರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ. ಶಿಕಾರಿಪುರ – ಶಿರಾಳಕೊಪ್ಪ ನಡುವೆ ಕುಟ್ರಳ್ಳಿಯಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಟೋಲ್‌ ನಿರ್ಮಿಸಲಾಗಿದೆ. ಇದರಿಂದ ರೈತರು, ಉದ್ಯೋಗಿಗಳು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ ಎಂದು ಆರೋಪಿಸಿ ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಒಂದು ವರ್ಷದಿಂದ ಹೋರಾಟ ನಡೆಸುತ್ತಿದೆ. ಆದರು ಸರ್ಕಾರ ಟೋಲ್‌ ಗೇಟ್‌ ತೆರವು ಮಾಡದ್ದಕ್ಕೆ ಶಿಕಾರಿಪುರ … Read more

ಶಿವಮೊಗ್ಗದಲ್ಲಿ ಆನೆ ಮೇಲೆ ಸ್ವಾಮೀಜಿಯ ಅಂಬಾರಿ ಮೆರವಣಿಗೆ, ಯಾವಾಗ? ಎಲ್ಲೆಲ್ಲಿ ಸಾಗಲಿದೆ ಮೆರವಣಿಗೆ?

Ballekere-Santosh-Press-meet about Kedara Peeta

ಶಿವಮೊಗ್ಗ: ನಗರದ ಶಿವಶಕ್ತಿ ಸಮಾಜದಿಂದ ಅ.11ರಂದು ಸಮಾಜದ ಅಧ್ಯಕ್ಷೆ ಎನ್‌ಟಿ ರಸ್ತೆಯಲ್ಲಿನ ಹೆಚ್.ಪಾರ್ವತಮ್ಮ ಅವರ ಘಂಟಾಕರಣ ನಿವಾಸಕ್ಕೆ ಉತ್ತರಾಖಂಡ ಕೇದಾರಪೀಠದ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ (Kedara Peeta) ಆಗಮಿಸಲಿದ್ದಾರೆ ಎಂದು ಸಂತೋಷ್ ಬಳ್ಳೆಕೆರೆ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತೋಷ್‌ ಬಳ್ಳೆಕೆರೆ, ಅ.10 ರಂದು ಸಂಜೆ 4ಕ್ಕೆ ಶಿವಪ್ಪನಾಯಕ ವೃತ್ತದಿಂದ ಸ್ವಾಮೀಜಿಯವರನ್ನು ಬೀರನಕೆರೆ ಮಠದ ಆನೆಯ ಅಂಬಾರಿ ಮೇಲೆ ಮೆರವಣಿಗೆ ಮೂಲಕ ಪಾರ್ವತಮ್ಮ ಅವರ ಮನೆಗೆ ಕರೆತಲಾಗುವುದು.ಇದಕ್ಕಾಗಿ ಅರಣ್ಯ ಇಲಾಖೆ ಅನುಮತಿ ಪಡೆಯಲಾಗಿದೆ ಎಂದರು. … Read more

ನಿದಿಗೆಯಲ್ಲಿ ಬೈಕ್‌ ಕದ್ದುಕೊಂಡು ಹೋಗುವಾಗಲೇ ಸಿಕ್ಕಿಬಿದ್ದ ಕಳ್ಳ ರಂಗ

NIDIGE-NEWS-1.jpg

ಶಿವಮೊಗ್ಗ: ಮನೆ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳವು ಮಾಡಿ ತಳ್ಳಿಕೊಂಡು ಹೋಗುತ್ತಿದ್ದಾಗ ಜನರು ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗದ ನಿದಿಗೆ ಗ್ರಾಮದ ಶರತ್‌ ಎಂಬುವವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike) ಕಳ್ಳತನ ಮಾಡಿಕೊಂಡು ಹೋಗುವಾಗ ಕಳ್ಳ ಸಿಕ್ಕಿಬಿದ್ದಿದ್ದಾನೆ. ಶರತ್‌ ತಮ್ಮ ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದ ಬೈಕನ್ನ ವ್ಯಕ್ತಿಯೊಬ್ಬ ಹೊರಗೆ ಕೊಂಡೊಯ್ದು ಸ್ವಲ್ಪ ದೂರದವರೆಗೆ ತಳ್ಳಿಕೊಂಡು ಹೋಗುತ್ತಿದ್ದ. ಶರತ್‌ ಅವರ ತಂದೆ ಇದನ್ನು ಗಮನಿಸಿ ಜೋರಾಗಿ ಜನರನ್ನು ಕೂಗಿದ್ದಾರೆ. ಕಳ್ಳನನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೈಕ್‌ … Read more

ಶಿವಮೊಗ್ಗದಲ್ಲಿ ಅಕ್ಬರ್‌ ಕಾಲಿಗೆ ಗುಂಡೇಟು, ಜಿಲ್ಲಾ ರಕ್ಷಣಾಧಿಕಾರಿ ಫಸ್ಟ್‌ ರಿಯಾಕ್ಷನ್‌, ಏನಂದ್ರು ಎಸ್‌ಪಿ?

081025 Akbar Nabbed in Amjad case SP Mithun Kumar spoke to media at Mc Gann Hospital

ಶಿವಮೊಗ್ಗ: ಅಮ್ಜದ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ಬರ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ (Arrest). ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌ ಬಂಧಿತ ಆರೋಪಿ ಅಕ್ಬರ್ ಮೇಲೆ ಈಗಾಗಲೇ ಕೊಲೆ ಯತ್ನ ಮತ್ತು ಸುಲಿಗೆಯಂತಹ ನಾಲ್ಕು ಗಂಭೀರ ಪ್ರಕರಣಗಳು ದಾಖಲಾಗಿವೆ. ಕೆಲ ದಿನಗಳ ಹಿಂದೆ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮ್ಜದ್ … Read more

ಶಿವಮೊಗ್ಗದಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಯಾರದು ರೌಡಿ ಶೀಟರ್‌? ಆಗಿದ್ದೇನು?

Rowdysheeter-incident-in-Shimoga-

ಶಿವಮೊಗ್ಗ: ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ (Rowdy Sheeter) ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿಶೀಟರ್‌ ಅಕ್ಬರ್‌ (21) ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಶಿವಮೊಗ್ಗ ನಗರ ಹೊರವಲಯದ ಪುರಲೆ ಬಳಿ ನಡೆದಿದೆ. ನ್ಯೂಮಂಡ್ಲಿಯ ನಿವಾಸಿ ಅಕ್ಬರ್ ಮೇಲೆ ಈಗಾಗಲೇ ನಾಲ್ಕಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, … Read more

ಶಿವಮೊಗ್ಗ ಏರ್‌ಪೋರ್ಟ್‌ ಬಳಿ ಶಾಪಿಂಗ್‌ ಮಾಲ್‌, ಹೊಟೇಲ್‌, KSIIDC ಅಧ್ಯಕ್ಷರು ಏನೆಲ್ಲ ಹೇಳಿದರು? ಇಲ್ಲಿದೆ ಹೈಲೈಟ್ಸ್‌

KSIIDC-President-Nanjayanamata-speaks-about-shimoga-airport

ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ (Airport) ಬಳಕೆಯಾಗಿ ಉಳಿದಿರುವ 111 ಎಕರೆ ಪ್ರದೇಶದಲ್ಲಿ ಶಾಪಿಂಗ್‌ ಮಾಲ್‌, ಹೊಟೇಲ್‌ ನಿರ್ಮಿಸುವ ಯೋಚನೆ ಇದೆ ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ಜಿ.ನಂಜಯ್ಯನಮಠ ತಿಳಿಸಿದರು. ಮಲ್ನಾಡ್‌ ಶೈರ್‌ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಜಿ.ನಂಜಯ್ಯನಮಠ, ಶಿವಮೊಗ್ಗ ವಿಮಾನ ನಿಲ್ದಾಣದ ಬಳಕೆಗೆ 780 ಎಕರೆ ಜಾಗವಿದೆ. ಉಳಿಕೆ 111 ಎಕರೆ ಜಾಗವನ್ನು ಲೀಸ್‌ಗೆ ನೀಡುವ ಯೋಚನೆ ಇದೆ. ಅಲ್ಲಿ ಶಾಪಿಂಗ್‌ ಮಾಲ್‌ ಅಥವಾ ಹೊಟೇಲ್‌ ಸೇರಿ ಸಾರ್ವಜನಿಕ ಬಳಕೆಗೆ … Read more

ಈ ರಸ್ತೆಯಲ್ಲಿ ಹೆಡ್‌ಲೈಟ್‌ ಗಟ್ಟಿ ಇದ್ದರಷ್ಟೆ ಜೀವಕ್ಕೆ ಗ್ಯಾರಂಟಿ, ರಾತ್ರಿಯು ಜನ ಓಡಾಡುವ ರೋಡಲ್ಲಿ ಇದೆಂಥಾ ದುಸ್ಥಿತಿ?

No-Street-lights-at-sarvajna-circle-in-shimoga-city.webp

ಶಿವಮೊಗ್ಗ: ಸಮುದ್ರದ ನೆಂಟಸ್ತನ, ಉಪ್ಪಿಗೆ ಬಡತನ ಎನ್ನುವಂತಿದೆ ಈ ರಸ್ತೆಯ ಡಿವೈಡರ್‌ ಮೇಲಿರುವ ಬೀದಿ ದೀಪಗಳ (Street Light) ಸ್ಥಿತಿ. ಮೆಸ್ಕಾಂನ ಕಾರ್ಯ ಮತ್ತು ಪಾಲನ ಕಚೇರಿ ಮುಂಭಾಗದಲ್ಲಿಯೆ ಇರುವ ಬೀದಿ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಶಿವಮೊಗ್ಗದ ಸರ್ವಜ್ಞ ವೃತ್ತದಲ್ಲಿ ಬೀದಿ ದೀಪ ಬೆಳಗದೆ ತಿಂಗಳುಗಳೆ ಉರುಳಿವೆ. ವಾಹನಗಳ ಹೆಡ್‌ಲೈಟ್‌ನಿಂದಷ್ಟೆ ಈ ರಸ್ತೆಯಲ್ಲಿ ಬೆಳಕು ಕಾಣುತ್ತಿದೆ. ಹಗಲು ರಾತ್ರಿ ವಾಹನ ಸಂಚಾರ ಸರ್ವಜ್ಞ ವೃತ್ತ ಶಿವಮೊಗ್ಗದ ರೈಲ್ವೆ ನಿಲ್ದಾಣ, ಬಾಲರಾಜ ಅರಸ್‌ ರಸ್ತೆ, ಹೊನ್ನಾಳಿ ರಸ್ತೆ, ಶಂಕರಮಠ ರಸ್ತೆಗೆ … Read more

ಶಿವಮೊಗ್ಗದ ವಿದ್ಯಾನಗರ ಮೇಲ್ಸೇತುವೆ ಸರ್ಕಲ್‌ಗೆ ನಾಮಕರಣ, ನಾಮಫಲಕ ಅನಾವರಣ

071025-Valmiki-circle-board-inaugurated-at-vidyanagra-bridge-in-Shimoga.webp

ಶಿವಮೊಗ್ಗ: ವಿದ್ಯಾನಗರದ ಮೇಲ್ಸೇತುವೆ ಸಂಪರ್ಕಿಸುವ ಸರ್ಕಲ್‌ಗೆ ಮಹರ್ಷಿ ವಾಲ್ಮೀಕಿ ವೃತ್ತ (Valmiki Circle) ಎಂದು ಹೆಸರಿಡಲಾಗಿದೆ. ವಾಲ್ಮೀಕಿ ಜಯಂತಿಯನ್ನು ಶಾಸಕ ಎಸ್‌.ಎನ್.ಚನ್ನಬಸಪ್ಪ, ಮಹರ್ಷಿ ವಾಲ್ಮೀಕಿ ವೃತ್ತದ ನಾಮಫಲಕ ಅನಾವರಣಗೊಳಿಸಿದರು. ಸೈನ್ಸ್‌ ಮೈದಾನದವರೆಗೆ ಮೆರವಣಿಗೆ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದ ಸೈನ್ಸ್‌ ಮೈದಾನದಿಂದ ವಾಲ್ಮೀಕಿ ಸಭಾಭವನದವರೆಗೆ ಮೆರವಣಿಗೆ ನಡೆಸಲಾಯಿತು. ವಾಲ್ಮೀಕಿ ಭಾವಚಿತ್ರವನ್ನು ವಾಹನದಲ್ಲಿ ಇರಿಸಿ ಸಮುದಾಯದವರು ಮೆರವಣಿಗೆಯಲಿ ಪಾಲ್ಗೊಂಡಿದ್ದರು. ವಾಲ್ಮೀಕಿ ಸಭಾ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶಾಸಕ ಎಸ್‌.ಎನ್‌. ಚನ್ನಸಬಪ್ಪ ಉದ್ಘಾಟಿಸಿದರು. … Read more

ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಮುನ್ಸೂಚನೆ, ಹವಾಮಾನ ಇಲಾಖೆಯಿಂದ ಅಲರ್ಟ್‌ ಪ್ರಕಟ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿ ಬಿಸಿಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿತ್ತು. ಆದರೆ ಇವತ್ತು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ (Weather) ಯಲ್ಲೋ ಅಲರ್ಟ್‌ ಘೋಷಿಸಿದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ … Read more