ಕಟ್ಟಿಕನಾರು ಬಳಿ ಕಾಡು ಹಂದಿಗಳ ಹಾವಳಿ, ಅಡಿಕೆ ಸಸಿಗಳು ನಾಶ

Kattinakaru-wild-pig-menace

ಸಾಗರ: ಕಾಡು ಹಂದಿಗಳ ಹಾವಳಿಗೆ ಅಡಿಕೆ ಸಸಿ, ಬಾಳೆ ಗಿಡಗಳು ನಾಶವಾಗಿವೆ. ಕಟ್ಟಿನಕಾರು ಗ್ರಾಮದ ಹೆಮ್ಮಡೆ ಬೀರನಾಯ್ಕ ಎಂಬುವವರ ಅಡಿಕೆ ತೋಟಕ್ಕೆ ನುಗಿದ ಕಾಡು ಹಂದಿಗಳು (Pig) ಅಡಿಕೆ ಸಸಿಗಳಿಗೆ ಹಾನಿ ಮಾಡಿವೆ. ಫಸಲು ನೀಡಬೇಕಿದ್ದ ಸಸಿಗಳು ಹಾಳಾಗಿದ್ದು ರೈತರಿಗೆ ಸಮಸ್ಯೆಯಾಗಿದೆ. ಸಾಗರ ತಾಲೂಕಿನ ಚನ್ನಗೊಂಡ ಗ್ರಾಮದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದೆ. ಕಳೆದೆರಡು ವಾರದಲ್ಲಿ ಕಾಡು ಹಂದಿಗಳಿಂದ ಗ್ರಾಮದಲ್ಲಿ 80ಕ್ಕೂ ಹೆಚ್ಚು ಅಡಿಕೆ ಸಸಿಗಳು ನಾಶವಾಗಿವೆ. ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗುತ್ತಿರುವ ಕುರಿತು ಅರಣ್ಯ ಇಲಾಖೆ … Read more

ಅಡಿಕೆ ಧಾರಣೆ | 25 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಭದ್ರಾವತಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (adike rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 17099 31899 ಬೆಟ್ಟೆ 50399 59999 ರಾಶಿ 48291 57599 ಸರಕು 61299 98996 ಭದ್ರಾವತಿ ಮಾರುಕಟ್ಟೆ ಪುಡಿ 17000 17000 ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?

ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ ಯುವತಿ ಜೊತೆ ದೈಹಿಕ ಸಂಪರ್ಕ, ಶಿವಮೊಗ್ಗದಲ್ಲಿ ಕೇಸ್‌

Crime-News-General-Image

ಶಿವಮೊಗ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಬೇರೊಬ್ಬಳ ಜೊತೆಗೆ ವಿವಾಹಕ್ಕೆ (Marriage) ಸಿದ್ಧವಾಗಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ತಾಲೂಕು ಒಂದರ ಯುವತಿಗೆ (ಹೆಸರು ಗೌಪ್ಯ) ಆಕೆಯ ದೂರದ ಸಂಬಂಧಿಯೊಬ್ಬನ ಪರಿಚಯವಾಗಿ, ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಶಿವಮೊಗ್ಗದಲ್ಲಿಯೇ ಕೆಲಸ ಮಾಡುವಂತೆ ಮನವೊಲಿಸಿದ್ದ ಯುವಕ ಇಲ್ಲಿಗೆ ಕರೆಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಬಂದ ರಾತ್ರಿ ಎನ್‌.ಟಿ.ರಸ್ತೆಯ ಲಾಡ್ಜ್‌ ಒಂದರಲ್ಲಿ ರೂಂ ಮಾಡಿಕೊಟ್ಟಿದ್ದ … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

power cut mescom ELECTRICITY

ಶಿವಮೊಗ್ಗ: ನಗರ ಉಪ ವಿಭಾಗ-2 ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಜೂ.26ರ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯ ನಗರ, ಕೆಹೆಚ್‌ಬಿ ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಮಂಜಪ್ಪ ಬಸಪ್ಪ ಲೇಔಟ್, ಜಿಎಸ್ ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, … Read more

ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?

Load-Test-of-Sigandur-Bridge-at-Sagara.

ಸಾಗರ: ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾಗಿರುವ ಸಿಗಂದೂರು ಸೇತುವೆ (Bridge) ಕಾಮಗಾರಿ ಪೂರ್ಣಗೊಂಡಿದೆ. ಮೊದಲ ಹಂತದ ಲೋಡ್‌ ಟೆಸ್ಟಿಂಗ್‌ನಲ್ಲಿ ಸೇತುವೆ ಪಾಸ್‌ ಆಗಿದೆ. ಈ ಪರೀಕ್ಷೆಯ ಫೋಟೊ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕಳೆದ ಭಾನುವಾರದಿಂದ ಬುಧವಾರದವರೆಗೆ ಮೊದಲ ಹಂತದ ಲೋಡ್‌ ಟೆಸ್ಟಿಂಗ್‌ ನಡೆಸಲಾಯಿತು. ಲಾರಿಗಳಲ್ಲಿ ನೂರು ಟನ್‌ ಲೋಡ್‌ ತುಂಬಿ ಸೇತುವೆ ಮೇಲೆ ನಿಲ್ಲಿಸಿ ಪರೀಕ್ಷೆ ನಡೆಲಾಗಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಸಿಗಂದೂರು ಸೇತುವೆ ಪಾಸ್‌ ಆಗಿದೆ. ಏನಿದು ಲೋಡ್‌ ಟೆಸ್ಟ್‌? ಹೇಗೆ ನಡೆಯಲಿದೆ? ಹೊಳೆಬಾಗಿಲು … Read more

ಕೋಡಿ ಬಿತ್ತು ಅಂಜನಾಪುರ ಜಲಾಶಯ, ವಾಡಿಕೆಗೂ ಮೊದಲೇ ಭರ್ತಿ

Anjanapura-Dam-full-in-2025.

ಶಿಕಾರಿಪುರ : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಭರ್ತಿಯಾಗಿ ಕೋಡಿ ಬಿದ್ದಿದೆ. ವಾಡಿಕೆಗು ಮೊದಲೇ ಜಲಾಶಯ ಭರ್ತಿಯಾಗಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಭರ್ತಿಯಾಗಿದೆ. 23 ಅಡಿ ನೀರು ತುಂಬಿ ಜಲಾಶಯ ಕೋಡಿ ಬಿದ್ದಿದೆ. ವಾಡಿಕೆಗು ಮೊದಲೆ ಭರ್ತಿ ಅಂಜನಾಪುರ ಜಲಾಶಯ ಈ ಬಾರಿ ವಾಡಿಕೆಗಿಂತಲೂ ಮೊದಲೆ ಭರ್ತಿಯಾಗಿದೆ. ಸಾಮಾನ್ಯವಾಗಿ ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಭರ್ತಿಯಾಗುತಿತ್ತು. … Read more

ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?

Bhadra-Dam-General-Image

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ್ದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಏರಿಕೆಯಾಗಿದೆ. ಇವತ್ತು 16,039 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಭದ್ರಾ ಜಲಾಶಯದ ನೀರಿನ ಮಟ್ಟ 155 ಅಡಿಗೆ ತಲುಪಿದೆ. 1282 ಕ್ಯೂಸೆಕ್‌ ಹೊರ ಹರಿವು ಇದೆ. ಇದನ್ನೂ ಓದಿ » ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ? ಎಷ್ಟು ನೀರನ್ನು ಹೊರ ಬಿಡಲಾಗುತ್ತಿದೆ?

ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ? ಎಷ್ಟು ನೀರನ್ನು ಹೊರ ಬಿಡಲಾಗುತ್ತಿದೆ?

TUNGA-DAM-GAJANURU-SHIMOGA.

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಏರಿಕೆಯಾಗಿದೆ. ಇವತ್ತು 30,019 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಈಗಾಗಲೇ ಜಲಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. 29,070 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಇದನ್ನೂ ಓದಿ » ಆರಿದ್ರಾ ಮಳೆ, ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ಆರಿದ್ರಾ ಮಳೆ, ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-General-Image-youth-With-an-Umbrella

ಹೊಸನಗರ: ತಾಲೂಕಿನಲ್ಲಿ ಆರಿದ್ರಾ ಮಳೆ ಅಬ್ಬರಿಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜೂನ್‌ 25ರಂದು ರಜೆ (Holiday) ಘೋಷಿಸಲಾಗಿದೆ. ಹೊಸನಗರ ತಾಲೂಕಿನ ಅಂಗನವಾಡಿಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್‌ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇನ್ನು, ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮಾನಿ ಜಲಾಶಯದ ವ್ಯಾಪ್ತಿಯಲ್ಲಿ 128 ಮಿ.ಮೀ … Read more

ದಿನ ಭವಿಷ್ಯ | 25 ಜೂನ್‌ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ?

DINA-BHAVISHYA

DINA BHAVISHYA ಮೇಷ ರಾಶಿ: ಇಂದು ನಿಮ್ಮ ನಿರ್ಧಾರಗಳಲ್ಲಿ ಸ್ಪಷ್ಟತೆ ಇರುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ಸಿಗಲಿವೆ. ಆರ್ಥಿಕವಾಗಿ ಉತ್ತಮ ದಿನ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಗಮನವಿರಲಿ. ಶುಭ ಬಣ್ಣ: ನೀಲಿ, ಶುಭ ಸಂಖ್ಯೆ: 9 ವೃಷಭ ರಾಶಿ: ನಿಮ್ಮ ತಾಳ್ಮೆ ಮತ್ತು ಕಠಿಣ ಪರಿಶ್ರಮಕ್ಕೆ ಇಂದು ಫಲ ಸಿಗಲಿದೆ. ಆರ್ಥಿಕವಾಗಿ ಲಾಭದಾಯಕ ದಿನ. ಹೊಸ ಹೂಡಿಕೆಗಳಿಗೆ ಉತ್ತಮ ಸಮಯ. ಆರೋಗ್ಯ ಸುಧಾರಿಸುತ್ತದೆ. ಶುಭ ಬಣ್ಣ: ಹಸಿರು, ಶುಭ ಸಂಖ್ಯೆ: 6 ಮಿಥುನ … Read more