ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

power cut mescom ELECTRICITY

ಶಿವಮೊಗ್ಗ: ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಜೂ.24ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂಆರ್‌ಎಸ್ ವಾಟರ್ ಸಪ್ಲೇ, ಎಂಆರ್‌ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, … Read more

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

Traffic-Police-checks-School-vans-in-Shimoga-city

ಶಿವಮೊಗ್ಗ: ನಗರದ ವಿವಿಧೆಡೆ ಸಂಚಾರ ಪೊಲೀಸರು ಶಾಲಾ ವಾಹನಗಳನ್ನು (School Vans) ತಡೆದು ದಿಢೀರ್‌ ತಪಾಸಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಸೋಮವಾರ ಬೆಳಗ್ಗೆ ನಗರದ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ಏಕಕಾಲಕ್ಕೆ ತಪಾಸಣೆ ನಡೆಸಿದರು. ಶಾಲೆ, ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳನ್ನು ತಡೆದು ಪರಿಶೀಲಿಸಿದರು. ನಿಗದಿಗಿಂತಲು ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 17 ಪ್ರಕರಣಗಳು ದಾಖಲು ಮಾಡಲಾಗಿದೆ. ವಾಹನದ ಫಿಟ್ನೆಸ್‌ ಅವಧಿ ಮುಕ್ತಾಯಗೊಂಡಿದ್ದ 3 ಪ್ರಕರಣಗಳು ಪತ್ತೆಯಾಗಿವೆ. … Read more

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

Former-Minister-MP-Renukacharya-at-Shimoga-DAR-Police-ground

ಶಿವಮೊಗ್ಗ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ನಡೆಸುತ್ತಿರುವ ಕಾಮಗಾರಿಯನ್ನು ಕೂಡಲೆ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಜೂನ್‌ 28ರಂದು ದಾವಣಗೆರೆ ನಗರ ಬಂದ್‌ (Bandh) ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಶಿವಮೊಗ್ಗದ ಡಿ.ಎ.ಆರ್‌ ಮೈದಾನದಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಬಲದಂಡೆ ನಾಲೆಯಲ್ಲಿ ಕಾಮಗಾರಿ ನಡೆಸುತ್ತಿರುವುರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಕೂಡಲೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾ ಜಲಾಶಯದ ಮುಂಭಾಗ ಹೋರಾಟ ನಡೆಸಿದೆವು. ಬುಧವಾರ ಬೆಳಗ್ಗೆ ದಾವಣಗೆರೆಯ ಬಾಡಾ ಕ್ರಾಸ್‌ನಲ್ಲಿ ಹೆದ್ದಾರಿ ತಡೆದು … Read more

ಅಡಿಕೆ ಧಾರಣೆ | 23 ಜೂನ್‌ 2025 | ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 19116 30199 ಬೆಟ್ಟೆ 50009 59719 ರಾಶಿ 40009 57011 ಸರಕು 55169 96596 ಸಾಗರ ಮಾರುಕಟ್ಟೆ ಕೆಂಪುಗೋಟು 21419 28399 ಕೋಕ 8100 21822 ಚಾಲಿ 13214 36219 ಬಿಳೆ ಗೋಟು 7666 24170 ರಾಶಿ 23099 56799 ಸಿಪ್ಪೆಗೋಟು 6899 17811 ಇದನ್ನೂ ಓದಿ » ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್‌ ಬಳಿ … Read more

ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌

Prohibition-at-Bhadra-Dam-ahead-of-farmers-protest.

ಭದ್ರಾವತಿ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ಜಲಜೀವನ್‌ ಕಾಮಗಾರಿ ನಡೆಸುತ್ತಿರುವುದನ್ನು ಖಂಡಿಸಿ ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇನ್ನೊಂದೆಡೆ ಭದ್ರಾ ಜಲಾಶಯದ ಬಲದಂಡೆ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದ 1 ಕಿಲೋ ಮೀಟರ್‌ವರೆಗೆ ನಿಷೇಧಾಜ್ಞೆ (Prohibition) ಜಾರಿಗೊಳಿಸಲಾಗಿದೆ. ಜೂನ್‌ 23ರ ಬೆಳಗ್ಗೆ 8 ಗಂಟೆಯಿಂದ ಜೂನ್‌ 25ರ ರಾತ್ರಿ 8 ಗಂಟೆವರೆಗೆ ಬಲದಂಡೆ ಕಾಮಗಾರಿ ಸ್ಥಳದ ಸುತ್ತಲು ನಿಷೇಧಾಜ್ಞೆ ವಿಧಿಸಿ ತರೀಕೆರೆ ತಹಶೀಲ್ದಾರ್‌ ಆದೇಶಿಸಿದ್ದಾರೆ. ಬಿಗಿ ಪೊಲೀಸ್‌ ಬಂದೋಬಸ್ತ್‌ ಇನ್ನೊಂದೆಡೆ ರೈತರು ಕಾಮಗಾರಿ ಸ್ಥಳಕ್ಕೆ ತೆರಳದಂತೆ … Read more

‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

Beluru-Gopalakrishna-Speaks-to-media-about-BJP-Leaders

ಶಿವಮೊಗ್ಗ: ರಾಜ್ಯದಲ್ಲಿ ಹಾಲು, ವಿದ್ಯುತ್‌ ದರ ಸಣ್ಣ ಮಟ್ಟಿಗೆ ಏರಿಕೆಯಾದಾಗ ಬಿಜೆಪಿ ನಾಯಕರು ಬೀದಿಗಿಳಿದು ರಂಪಾಟ ಮಾಡಿದ್ದರು. ಈಗ ಗೊಬ್ಬರ (Fertilizers) ದರ ಪ್ರತಿ ಚೀಲಕ್ಕೆ ₹180ರವರೆಗೆ ಏರಿಕೆಯಾಗಿದೆ. ಈಗ ಬಿಜೆಪಿ ನಾಯಕರ ಬಾಯಿ ಒಣಗಿ ಹೋಗಿದೆಯೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅ‍ಧ್ಯಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪ್ರತಿ ಮೂಟೆ ಗೊಬ್ಬರ ₹1800ರವರೆಗೆ ತಲುಪಿದೆ. ಸಣ್ಣ ರೈತರಿಗೆ ಇದರಿಂದ ಹೊರೆಯಾಗಿದೆ. ಭತ್ತ ಬೆಳೆಯೋದೆ ಕಷ್ಟವಾಗಿದೆ. ಗೊಬ್ಬರದ … Read more

‘ಮಿನಿಸ್ಟರ್‌ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿʼ, ಬೇಳೂರು ಗೋಪಾಲಕೃಷ್ಣ ಸಲಹೆ, ಕಾಂಗ್ರೆಸ್‌ನಲ್ಲಿ ಸಂಚಲನ

Beluru-Gopalakrishna-speaks-to-media-in-Shimoga

ಶಿವಮೊಗ್ಗ: ವಸತಿ ಇಲಾಖೆಯಲ್ಲಿ (Housing) ಭ್ರಷ್ಟಾಚಾರವಾಗಿದೆ ಎಂದು ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್‌ ಆರೋಪಿಸಿದ್ದರು. ಇದರ ಆಡಿಯೋ ಬಹಿರಂಗವಾಗಿದ್ದು, ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಇದರ ಬೆನ್ನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸಿವುಂತೆ ಸಲಹೆ ನೀಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಸತಿ ಇಲಾಖೆಯಲ್ಲಿನ ಸಮಸ್ಯೆ ಕುರಿತು ಹಿರಿಯ ಸದಸ್ಯರೊಬ್ಬರು … Read more

ದುಬಾರಿಯಾಯ್ತು ಗೊಬ್ಬರ, ಯುವ ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶ, ಸಾಲ ಮನ್ನಾಗೆ ಒತ್ತಾಯ

Youth-Congress-protest-against-fertilizers-price-hike

ಶಿವಮೊಗ್ಗ: ಕೇಂದ್ರ ಸರ್ಕಾರ ಗೊಬ್ಬರದ (Fertilizer) ಬೆಲೆ ಹೆಚ್ಚಳ ಮಾಡಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ನ ಗ್ರಾಮಾಂತರ ಘಟಕದ ವತಿಯಿಂದ ಶಿವಮೊಗ್ಗ ಕೃಷಿ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಗೊಬ್ಬರದ ಬೆಲೆ ಹೆಚ್ಚಳ ಮಾಡಿ, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ವರ್ಷ ಇಫ್ಕೊ ರಸಗೊಬ್ಬರ ಪ್ರತಿ ಚೀಲಕ್ಕೆ ₹1250 ಇತ್ತು. ಈ ವರ್ಷ ₹1650ಕ್ಕೆ ಏರಿಕೆಯಾಗಿದೆ. ಆರ್‌ಸಿಎಫ್‌ ಗೊಬ್ಬರ ₹1470 ರಿಂದ ₹1650ಕ್ಕೆ ಏರಿಕೆಯಾಗಿದೆ. ಹೀಗೆ ಪ್ರತಿ ಮಾದರಿಯ ಗೊಬ್ಬರದ … Read more

‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

MLA-SN-Channabasappa-Press-Meet-at-Shimoga-BJP-Office

ಶಿವಮೊಗ್ಗ: ಸ್ವಾತಂತ್ರ್ಯಕ್ಕು ಮೊದಲು ಧರ್ಮದ ಆಧಾರದಲ್ಲಿ ದೇಶವನ್ನು ವಿಭಜನೆ ಮಾಡಿದರು. ಇಷ್ಟಾದರು ಕಾಂಗ್ರೆಸ್‌ ಪಕ್ಷ ಮುಸ್ಲಿಮರ ತುಷ್ಠೀಕರಣ ನೀತಿ ಬಿಟ್ಟಿಲ್ಲ. ಬಡವರಿಗೆ ಹಂಚುವ ಮನೆಗಳಲ್ಲಿಯು ಶೇ.15ರಷ್ಟು ಮೀಸಲಾತಿ (Reservation) ನೀಡಲಾಗಿದೆ. ಇದು ಅತ್ಯಂತ ಘೋರ ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಎನ್.ಚನ್ನಬಸಪ್ಪ, ಮುಸ್ಲಿಮರಿಗೆ ವಸತಿ ನೀಡಬಾರದು ಎಂದು ನಾವು ಹೇಳುತ್ತಿಲ್ಲ. ಎಲ್ಲಾ ಬಡವರಿಗೆ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ವಸತಿ ಯೋಜನೆಗಳನ್ನು ರೂಪಿಸಲಾಗಿದೆ. ಆದರೆ ಇದರಲ್ಲಿಯು ಮುಸ್ಲಿಮರಿಗೆ ಶೇ.15ರಷ್ಟು ಮೀಸಲಾತಿ … Read more

ಗಾಜನೂರಿನ ತುಂಗಾ ಜಲಾಶಯದ ಒಳ, ಹೊರ ಇರುವು ಇಳಿಕೆ, ಇವತ್ತು ಎಷ್ಟಿದೆ?

Tunga-Dam-Gajanuru.

ಶಿವಮೊಗ್ಗ: ಗಾಜನೂರಿನ ತುಂಗಾ ಜಲಾಶಯದ (Dam) ಒಳ ಹರಿವು ಇಳಿಕೆಯಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯಕ್ಕೆ ಇವತ್ತು 14,791 ಕ್ಯೂಸೆಕ್‌ ಒಳ ಹರಿವು ಇದೆ. 13,645 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಒಳ, ಹೊರ ಹರಿವು ಕಡಿಮೆಯಾಗಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ತಗ್ಗಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.10 ಅಡಿ ಹೆಚ್ಚಳ, ಇವತ್ತು … Read more