ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ, ಅಲ್ಲಲ್ಲಿ ಧರೆಗುರುಳಿದ ಮರ, ರಸ್ತೆ ಮೇಲೆ ಹರಿದ ನೀರು

rainfall-in-Shimoga-and-sagara.

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ (Rainfall). ಹಲವೆಡೆ ಮರಗಳು ಧರೆಗುರುಳಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇನ್ನೊಂದೆಡೆ ಗುರುವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳಗೆ ನಗರದಲ್ಲಿ ಭಾರಿ ಮಳೆಯಾಯಿತು. ಅಲ್ಲಲ್ಲಿ ರಸ್ತೆಗಳ ಮೇಲೆ ನೀರು ಹರಿದಿತ್ತು. ತಾಲೂಕು ಕಚೇರಿ ಮುಂಭಾಗ ಮರ ಬಿದ್ದು ರಸ್ತೆ ಬದಿಯಲ್ಲಿದ್ದ ಶೆಡ್‌ಗಳಿಗೆ … Read more

ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್‌ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್‌ ಉದ್ಯೋಗಿಗಳಿಗೆ ಭರ್ಜರಿ ಆಫರ್‌

hakti-cars-pvt-ltd-shimoga-Toyota-showroom

ಶಿವಮೊಗ್ಗ : ಶಕ್ತಿ ಟೊಯೋಟ ವತಿಯಿಂದ ಜೂನ್ 13 ಮತ್ತು 14ರಂದು ‌ನಗರದ ಬಿ.ಹೆಚ್‌.ರಸ್ತೆಯಲ್ಲಿರುವ ಸೇಕ್ರೆಡ್‌ ಹಾರ್ಟ್‌ ಚರ್ಚ್‌ ಆವರಣದಲ್ಲಿ ಎಕ್ಸ್‌ಚೇಂಜ್‌ (car exchange) ಮೇಳ ಮತ್ತು ಪೂರ್ವ ಮಾಲಿಕಿತ್ವದ ಕಾರು (Car) ಮೇಳ ಆಯೋಜಿಸಲಾಗಿದೆ. ಎರಡು ದಿನವು ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮೇಳ ನಡೆಯಲಿದೆ. ಎಕ್ಸ್‌ಚೇಂಜ್‌ ಮೇಳ ಹೇಗಿರುತ್ತೆ? ಹಳೆಯ ಕಾರುಗಳನ್ನು ಹೊಚ್ಚ ಹೊಸ ಟೊಯೋಟ ಕಾರಿಗೆ ಎಕ್ಸ್‌ಚೇಂಜ್‌ ಮಾಡಿಕೊಳ್ಳಬಹುದಾಗಿದೆ. ಕೃಷಿಕರು ಮತ್ತು ಸ್ಪಾಟ್‌ ಬುಕ್ಕಿಂಗ್‌ ಮೇಲೆ ಆಕರ್ಷಕ ಆಫರ್‌ಗಳು, 50 ಸಾವಿರ ರೂ.ವರೆಗೆ ಎಕ್ಸ್‌ಚೇಂಜ್‌ ಬೆನಿಫಿಟ್‌, … Read more

ರಾತ್ರೋರಾತ್ರಿ ಕಾರಿನಲ್ಲಿ ಬಂದು ಫುಟ್‌ಪಾತ್‌ ಮೇಲಿದ್ದ ಮರಕ್ಕೆ ಗರಗಸ ಹಾಕಿದ ದುಷ್ಕರ್ಮಿಗಳು, ಒಬ್ಬ ಅರೆಸ್ಟ್‌

Tree-cuttion-row-in-Shimoga-city

ಶಿವಮೊಗ್ಗ: ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಡುರಾತ್ರಿ ರಸ್ತೆ ಬದಿಯ ಎರಡು ಮರಗಳಿಗೆ (Tree) ಗರಗಸ ಹಾಕಿದ್ದಾರೆ. ವಿಚಾರ ತಿಳಿದು ಪರಿಸರವಾದಿಗಳು ಸ್ಥಳದಲ್ಲಿ ಧರಣಿ ನಡೆಸಿದರು. ಇನ್ನೊಂದೆಡೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕೂಡ ಘಟನೆಗೆ ಬೇಸರ ವ್ಯಕ್ತಪಡಿಸಿದ್ದು, ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿದ್ದರು. ಇದರ ಬೆನ್ನಿಗೆ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಶಿವಮೊಗ್ಗ ಬಿ.ಹೆಚ್‌.ರಸ್ತೆಯ ಸೇಕ್ರೆಡ್‌ ಹಾರ್ಟ್‌ ಚರ್ಚ್‌ ಎದುರುಗಿರುವ ಹೊಟೇಲ್‌ ಮುಂಭಾಗ ಫುಟ್‌ಪಾತ್‌ ಮೇಲಿದ್ದ ಮರಗಳಿಗೆ ಕೊಡಲಿ ಹಾಕಲಾಗಿದೆ. ಒಂದು ಮರ ಧರೆಗುರುಳಿತ್ತು. ಮತ್ತೊಂದು … Read more

ಅಡಿಕೆ ಧಾರಣೆ | 11 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16158 30129 ಬೆಟ್ಟೆ 48400 59109 ರಾಶಿ 46009 58309 ಸರಕು 50109 88100 ‌ಇದನ್ನೂ ಓದಿ » ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

Tree-falls-to-Shimoga-Thirthahalli-Road-at-gajanuru

ಶಿವಮೊಗ್ಗ: ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ (Tree) ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ. ಚೆಕ್‌ ಪೋಸ್ಟ್‌ನ ಸಹಿನದಲ್ಲಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ. ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಈಗ ಹೆದ್ದಾರಿ ಪಕ್ಕದಲ್ಲಿರುವ … Read more

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

Rain-in-Shimoga-city-today

ಶಿವಮೊಗ್ಗ: ಸಿಟಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ಜೋರು ಮಳೆ (Rain) ಆರಂಭವಾಗಿದೆ. ವಿವಿಧೆಡೆ ಜೋರು ಗಾಳಿ ಸಹಿತ ವರ್ಷಧಾರೆಯಾಗುತ್ತಿದೆ. ಇವತ್ತು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಹೊತ್ತಿಗೆ ತುಸು ಬಿಸಿಲು ಕಾಣಿಸಿತ್ತು. ಆ ಬಳಿಕ ದಟ್ಟ ಮೋಡ ಕವಿದು, ಗಾಳಿ ಸಹಿತ ಮಳೆ ಆರಂಭಾಗಿದೆ. ಶಿವಮೊಗ್ಗ ನಗರ, ಶಿವಮೊಗ್ಗ ತಾಲೂಕಿನ ಕೂಡ್ಲಿ, ಬಿದರೆ, ಹಸೂಡಿ, ಅಬ್ಬಲಗೆರೆ, ಕುಂಚೇನಹಳ್ಳಿ, ರಾಮನಗರ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಆಯನೂರು, ಸಂತೆ ಕಡೂರು ಸುತ್ತಮುತ್ತ ಪ್ರಸ್ತುತ ಸಾಧಾರಣೆ ಮಳೆಯಾಗುತ್ತಿರುವ ವರದಿಯಾಗಿದೆ. ಉಳಿದಂತೆ … Read more

ಚಂದ್ರಗುತ್ತಿ ಹೋಬಳಿ, ಶ್ವಾನಗಳ ದಾಳಿಗೆ ಜಿಂಕೆ ಬಲಿ

SORABA-NEWS-UPDATE

ಸೊರಬ: ಶ್ವಾನಗಳ ದಾಳಿಗೆ ಜಿಂಕೆಯೊಂದು (Deer) ಮೃತಪಟ್ಟಿದೆ. ಆಹಾರ ಅರಸಿ ಕಾಡಿನಿಂದ ಬಂದ ಗಂಡು ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಚಂದ್ರಗುತ್ತಿ ಹೋಬಳಿಯಲ್ಲಿ ಶಿವಪುರ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ನಾಯಿಗಳು ದಾಳಿ ನಡೆಸಿದಾಗ ಗ್ರಾಪಂ ಸದಸ್ಯ ಸಲೀಂ ಮತ್ತಿತರರು ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಜಿಂಕೆಗೆ ಪಶುವೈದ್ಯರು ಚಿಕಿತ್ಸೆ ನೀಡಿದರೂ ಸಾವಿಗೀಡಾಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಜಿಂಕೆಯ ಕಳೇಬರ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ » ಸಿಗಂದೂರು ಸೇತುವೆ … Read more

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

Professor-Chandrshekar-felicitated-at-Shimoga

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಮೂಹದ ವತಿಯಿಂದ ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿವೃತ್ತ ಮುಖ್ಯಸ್ಥ ಪ್ರೊ.ಕೆ.ಚಂದ್ರಶೇಖರ್‌ ಅಭಿನಂದನಾ ಸಮಾರಂಭ (FELICITATION) ನಡೆಸಲಾಯಿತು. ಶಿವಮೊಗ್ಗದ ಪತ್ರಿಕಾ ಭವನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. [su_note note_color=”#f1f1f1″ text_color=”#000000″ radius=”0″] ಕಾರ್ಯಕ್ರಮದಲ್ಲಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ನಿವೃತ್ತ ಕುಲಸಚಿವ ಪ್ರೊ.ಶ್ರೀಕಂಠ ಕೂಡಿಗೆ ವಿಶ್ವವಿದ್ಯಾಲಯಗಳ ಪ್ರಸ್ತುತ ವ್ಯವಸ್ಥೆ ಕುರಿತು ಬೇಸರ ವ್ಯಕ್ತಪಡಿಸಿದರು. ಇಲ್ಲಿದೆ ಪ್ರೊ. ಶೀಕಂಠ ಕೂಡಿಗೆ ಅವರ ಹೇಳಿದ ಮೂರು ಪ್ರಮುಖ ಪಾಯಿಂಟ್‌ [su_divider top=”no” … Read more

ಸಿಗಂದೂರು ಸೇತುವೆ ಬಳಿ ಗೇಟ್‌ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

Siganduru-Bridge-in-sagara-taluk

ಸಾಗರ: ಸಿಗಂದೂರು ಸೇತುವೆಯ (Bridge) ಅಂಬಾರಗೋಡ್ಲು ಭಾಗದಲ್ಲಿ ಗೇಟ್‌ ಸಿಬ್ಬಂದಿಗೆ ಈಚೆಗೆ ಪ್ರವಾಸಿಗರೊಬ್ಬರು ಮಚ್ಚು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಪ್ರವಾಸಿಗನನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ಧಾರವಾಡ ಮೂಲದ ಪ್ರವಾಸಿಗನೊಬ್ಬ ಕುಟುಂಬ ಸಹಿತ ಕಾರಿನಲ್ಲಿ ಸಿಗಂದೂರಿಗೆ ಬಂದಿದ್ದರು. ಕಾರುಗಳನ್ನು ಸರದಿಯಲ್ಲಿ ಬಿಡುವ ವಿಚಾರದಲ್ಲಿ ಜಗಳವಾಗಿದೆ. ಈ ಸಂದರ್ಭ ಪ್ರವಾಸಿಗ ಮಚ್ಚು ತೋರಿಸಿ ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಗೇಟ್‌ ಸಿಬ್ಬಂದಿ ದೂರು ನೀಡದ ಹಿನ್ನೆಲೆ, ಪ್ರವಾಸಿಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, … Read more

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

VISL-Contract-Workers-union-meets-Pejavara-seer

ಶಿವಮೊಗ್ಗ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ (VISL) ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳ ನಿಯೋಗ ಪೇಜಾವರ ಮಠದ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ರಾಕೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಆನಂದ್, ನಿವೃತ್ತ ಕಾರ್ಮಿಕ ನರಸಿಂಹಾಚಾರ್ ಸೇರಿದಂತೆ ಹಲವರು ಶ್ರೀಗಳನ್ನು ಭೇಟಿಯಾಗಿ ಕಾರ್ಖಾನೆಯ ಪರಿಸ್ಥಿತಿ ವಿವರಿಸಿದರು. ಇದನ್ನೂ ಓದಿ » ಭದ್ರಾವತಿ VISLಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ, ಎಲ್ಲೆಲ್ಲಿ ಭೇಟಿ ನೀಡಿದರು? … Read more