ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

Kimmane-Rathnakar-General-Image

ಶಿವಮೊಗ್ಗ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ಅಹಿತಕರ ಘಟನೆಗಳ ಕುರಿತು ಸತ್ಯಾಸತ್ಯತೆ ತಿಳಿಯಲು ಕೆಪಿಸಿಸಿ ವತಿಯಿಂದ ನಿಯೋಗ (Delegation) ರವಾನಿಸಲಾಗುತ್ತಿದೆ. ಜೂ.4ರಿಂದ ಮೂರು ದಿನ ಈ ನಿಯೋಗದ ಸದಸ್ಯರು ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ. ನಿಯೋಗದಲ್ಲಿ ಏಳು ಸದಸ್ಯರು ನಿಯೋಗದಲ್ಲಿ ಏಳು ಸದಸ್ಯರಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್‌ ನಾಸೀರ್‌ ಹುಸೇನ್‌, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಎನ್‌.ಎ.ಹ್ಯಾರಿಸ್‌, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್‌, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌.ಸುದರ್ಶನ್‌, ಮಾಜಿ ಸಚಿವ … Read more

25 ಮನೆಗಳ ಫೋಟೊ ಕ್ಲಿಕ್‌ ಮಾಡಿದ ಯುಕವನ ಖಾತೆಗೆ ಬಂತು ಹಣ, ಆಮೇಲೆ ಕಾದಿತ್ತು ಬಿಗ್‌ ಶಾಕ್

Online-Fraud-Case-image

ಶಿವಮೊಗ್ಗ: ಮನೆಗಳ ಫೋಟೊ ಕ್ಲಿಕ್ ಮಾಡಿ ರಿವ್ಯು (review) ನೀಡಿದರೆ ಲಾಭಾಂಶ ನೀಡುವುದಾಗಿ ನಂಬಿಸಿ ಶಿವಮೊಗ್ಗದ ಎಲೆಕ್ಟ್ರೀಷಿಯನ್‌ ಒಬ್ಬರಿಗೆ 12.72  ಲಕ್ಷ ರೂ. ಹಣ ವಂಚಿಸಲಾಗಿದೆ. ಪಾರ್ಟ್‌ ಟೈಮ್‌ ಉದ್ಯೋಗ ಕುರಿತು ಎಲೆಕ್ಟ್ರೀಷಿನ್‌ಗೆ ವಾಟ್ಸಪ್‌ಗೆ ಮೆಸೇಜ್‌ ಬಂದಿತ್ತು. ಅದನ್ನು ಕ್ಲಿಕ್‌ ಮಾಡಿದಾಗ ಮನೆಗಳಿಗೆ ರಿವ್ಯು ನೀಡಿದರೆ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ಅಂತೆಯೇ ಮೊದಲು 25 ಮನೆಗಳ ಫೋಟೊಗಳ ಮೇಲೆ ಕ್ಲಿಕ್‌ ಮಾಡಿ ರಿವ್ಯು ಬರೆಯುತ್ತಿದ್ದಂತೆ ಎಲೆಕ್ಟ್ರೀಷಿಯನ್‌ ಬ್ಯಾಂಕ್‌ ಖಾತೆಗೆ 800 ರೂ. ಹಣ ವರ್ಗಾಯಿಸಿದ್ದರು. … Read more

ಅಡಿಕೆ ಧಾರಣೆ | 3 ಜೂನ್‌ 2025 | ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 31599 ಬೆಟ್ಟೆ 51009 58399 ರಾಶಿ 46099 58599 ಸರಕು 56159 99710 ಸಾಗರ ಮಾರುಕಟ್ಟೆ ಕೆಂಪುಗೋಟು 22989 26200 ಕೋಕ 15300 17099 ಚಾಲಿ 33469 37729 ಬಿಳೆ ಗೋಟು 17369 25599 ರಾಶಿ 25699 57019 ಸಿಪ್ಪೆಗೋಟು 8959 18399 ಇದನ್ನೂ ಓದಿ » ಕಮಲ್‌ ಹಾಸನ್‌ ನಟನೇ ಅಲ್ಲ, ಆರಗ ಆಕ್ರೋಶ, ಕಿಮ್ಮನೆಗು ತಿರುಗೇಟು … Read more

ಕಮಲ್‌ ಹಾಸನ್‌ ನಟನೇ ಅಲ್ಲ, ಆರಗ ಆಕ್ರೋಶ, ಕಿಮ್ಮನೆಗು ತಿರುಗೇಟು ನೀಡಿದ ಮಾಜಿ ಮಿನಿಸ್ಟರ್‌, ಏನಂದ್ರು?

Araga-Jnanendra-speaks-to-media-in-Shimoga

ಶಿವಮೊಗ್ಗ: ಕಮಲ್‌ ಹಾಸನ್‌ ನಟನಲ್ಲ (Actor). ಅವರೊಬ್ಬ ರಾಜಕಾರಣಿ. ಅವರಿಗೆ ಹೆಚ್ಚು ಪ್ರಾಶಸ್ತ್ಯ ಕೊಡುವುದು ಸೂಕ್ತವಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ, ಕಮಲ್‌ ಹಾಸನ್‌ರನ್ನು ನಿರ್ಲಕ್ಷಿಸುವುದೇ ಸೂಕ್ತ. ಕನ್ನಡಕ್ಕೆ ಅದರದ್ದೆ ಆದ ತೂಕವಿದೆ. ಕಮಲ್‌ ಹಾಸನ್‌ರಿಂದ ಕನ್ನಡಕ್ಕೆ ಏನು ಮಾಡಲು ಸಾಧ್ಯವಿಲ್ಲ ಎಂದರು. ಹತ್ತು ವರ್ಷ ರೈಲು ಬಿಟ್ಟಿದ್ದಾರೆ ಹತ್ತು ವರ್ಷ ಕಿಮ್ಮನೆ ರತ್ನಾಕರ್‌ ಅವರು ರೈಲು ಬಿಟ್ಟಿದ್ದಾರೆ. ಭಾಷಣ ಮಾಡುವುದು ಬಿಟ್ಟರೆ ಬೇರಾವ ಕೆಲಸವು ಮಾಡಿಲ್ಲ. ಅವರು ಏನಾದರು … Read more

ಶಿವಮೊಗ್ಗದಲ್ಲಿ ಆರ್‌ಸಿಬಿ ಹವಾ, ಗೆಲುವಿಗಾಗಿ ಪ್ರಾರ್ಥನೆ, ರಕ್ತದಾನ, ಹಾಲಿನ ಅಭಿಷೇಕ

Special-Pooja-and-Blood-donation-for-RCB

ಶಿವಮೊಗ್ಗ: ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಕಪ್‌ ಗೆಲ್ಲಲಿ ಎಂದು ಶಿವಮೊಗ್ಗದಲ್ಲಿ ಪೂಜೆ, ರಕ್ತದಾನ, ಹಾಲಿನ ಅಭಿಷೇಕ ನಡೆಯುತ್ತಿದೆ. ಇಂದು ಪಂದ್ಯಾವಳಿ ವೀಕ್ಷಣೆಗೆ ವಿವಿಧೆಡೆ ಬೃಹತ್‌ ಪರದೆಗಳನ್ನು ಹಾಕುವ ಸಾಧ್ಯತೆ ಇದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್‌ಚೇಂಜ್‌ ಮೇಳ, ಯಾವಾಗ? ಎಲ್ಲಿದೆ? ಇದನ್ನೂ ಓದಿ » ಕಾರು, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಮತ್ತೊಂದೆಡೆ ಹೊಟೇಲ್‌, ಚಾಟ್ಸ್‌ ಸ್ಟಾಲ್‌ಗಳಲ್ಲಿ ಆರ್‌ಸಿಬಿ ಗೆದ್ದರೆ ಆಫರ್‌ಗಳನ್ನು … Read more

14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿ ಅರೆಸ್ಟ್‌

Shikaripura-police-nab-thief

ಶಿಕಾರಿಪುರ: ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು (Thief) ಬಂಧಿಸಿರುವ ಶಿಕಾರಿಪುರ ಠಾಣೆ ಪೊಲೀಸರು ಆತನಿಂದ 14.70 ಲಕ್ಷ ರೂ. ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.  ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ. ಶಿಕಾರಿಪುರದ ಮಹಿಳೆಯೊಬ್ಬರು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಜ. 24ರಂದು ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು. ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್‌ಐ … Read more

ಭದ್ರಾವತಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ, ಗೋಪುರದ ಮೇಲೆ ಬೆಳೆದಿದ್ದ ಅರಳಿ ಗಿಡಗಳು ಕಟ್‌

Bhadravathi-Lakshmi-Narasimha-temple-cleaning.

ಭದ್ರಾವತಿ: ಪುರಾಣ ಪ್ರಸಿದ್ಧ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದ (temple) ಗೋಪುರಗಳ ಮೇಲೆ ಯಥೇಚ್ಛವಾಗಿ ಬೆಳೆದು ಬೇರು ಬಿಟ್ಟಿದ್ದ ಅರಳಿ ಗಿಡಗಳನ್ನು ಪುರಾತತ್ವ ಇಲಾಖೆಯ ಸಿಬ್ಬಂದಿ ತೆರವುಗೊಳಿಸಿದರು.  ದೇವಾಲಯದ ಮೇಲೆ ಬೆಳೆದಿದ್ದ ಅರಳಿ ಗಿಡಗಳನ್ನು ಕೀಳುವ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿ ರಾಂಪ್ರಕಾಶ್, ನಾರಾಯಣಪ್ಪ ಅವರೊಂದಿಗೆ ಸಾರ್ವಜನಿಕರು ಕೈಜೋಡಿಸಿದರು. ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮಾರುತಿ, ಮಾಜಿ ಸದಸ್ಯ ವಿಶ್ವನಾಥ್, ಸ್ಥಳೀಯರಾದ ನರಸೇಗೌಡ, ಸುಬ್ರಹ್ಮಣ್ಯ, ವೈಶಾಖ್, ನಿಖಿಲ್, ಹರ್ಷ, ಪ್ರವೀಣ್ ಗಿಡಗಳನ್ನು ಕಿತ್ತು ಬೇರಿಗೆ ರಾಸಾಯನಿಕ ಔಷಧಿ ಸಿಂಪಡಿಸಲು ಸಹಕರಿಸಿದರು. ಇದನ್ನೂ … Read more

ಶಿವಮೊಗ್ಗದಲ್ಲಿ 9 ವಾಹನಗಳು ಬಹಿರಂಗ ಹರಾಜು

Shimoga-News-update

ಶಿವಮೊಗ್ಗ: ಜಿಲ್ಲಾ ಅಬಕಾರಿ ಇಲಾಖೆಯು ಮುಟ್ಟುಗೋಲು (Auction) ಹಾಕಿಕೊಂಡಿರುವ 9 ದ್ವಿಚಕ್ರ ವಾಹನ ಹಾಗೂ 3 ನಾಲ್ಕು ಚಕ್ರದ ವಾಹನಗಳನ್ನು ಜೂನ್ 4ರಂದು ಬೆಳಿಗ್ಗೆ 11ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ ನಂ-1 ಕಚೇರಿಯ ಆವರಣದಲ್ಲಿ ಯಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಕಚೇರಿ ವೇಳೆಯಲ್ಲಿ ವಾಹನ ವೀಕ್ಷಿಸಬಹುದಾಗಿದೆ ಎಂದು ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, … Read more

ರಾಮ ಮಂದಿರದ ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಕಳವು

030625 Hundi theft at Rechikoppa village in Shimoga taluk

ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಇಂದು ಬೆಳಗ್ಗೆ ಪೂಜೆಗೆ ತೆರಳಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದ ರಾಮ ಮಂದಿರದಲ್ಲಿ ಕಳ್ಳತನವಾಗಿದೆ. ದೇಗುಲವು ಊರಿನಿಂದ ಸ್ವಲ್ಪ ಹೊರಭಾಗದಲ್ಲಿದೆ. ಕಳೆದ ರಾತ್ರಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು, ಹುಂಡಿ ಒಡೆದು ಹಣ ಕಳ್ಳತನ ಮಾಡಲಾಗಿದೆ. ಸುಮಾರು 10 ಸಾವಿರ ರೂ.ನಷ್ಟು ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಕುಂಸಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ … Read more

ಕಾರು, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Car-and-Truck-mishap-near-hosanagara

ಹೊಸನಗರ: ಲಾರಿ ಮತ್ತು ಕಾರು ಡಿಕ್ಕಿಯಾಗಿ (Mishap) ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಸನಗರ ತಾಲ್ಲೂಕಿನ ನಗರ ಸಮೀಪದ ಶಾಂತಿಕೆರೆ ಬಳಿಯ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 766 ಸಿ ಮಾರ್ಗದಲ್ಲಿ ಡಿಕ್ಕಿ ಸಂಭವಿಸಿದೆ. ಕುಂದಾಪುರ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಕಾರಗಡಿಯಿಂದ ಚಕ್ಕಾರಿನೆಡೆ ಮದುವೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ತಲನೇರಿ ಶೇಖರಪ್ಪ ಗೌಡ ಮತ್ತು ನವೀನಾ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ … Read more