ಶಿವಮೊಗ್ಗದಲ್ಲಿ ಹಣ್ಣು ಮೇಳ, ಅಪರೂಪದ ಮಾವು, ಹಲಸು ಮಾರಾಟ, ಯಾವೆಲ್ಲ ವೆರೈಟಿಯ ಹಣ್ಣುಗಳಿವೆ?

240525 Fruits mela by Hopcoms in Shimoga city

ಶಿವಮೊಗ್ಗ: ಜಿಲ್ಲಾ ಹಾಪ್‌ಕಾಮ್ಸ್‌, ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದಿಂದ ವಿನೋಬನಗರದ ಎಪಿಎಂಸಿ ಆವರಣದ ಪಕ್ಕದಲ್ಲಿ ಹಣ್ಣು ಮೇಳ ಆಯೋಜಿಸಲಾಗಿದೆ. ಇಲ್ಲಿ ಅಪರೂಪದ ತಳಿಯ ಮಾವು, ಹಲಸು ಮತ್ತು ಇತರೆ ಹಣ್ಣುಗಳ (Fruits Mela) ಮಾರಾಟ ಮತ್ತು ಪ್ರದರ್ಶನಕ್ಕೆ ಮಾಡಲಾಗುತ್ತಿದೆ. ವಿವಿಧ ಹಣ್ಣುಗಳ ಮಾರಾಟಕ್ಕೆ ಹತ್ತು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಿದರು. ಮೇ 24 ಮತ್ತು 25ರಂದು ಹಣ್ಣು ಮೇಳ … Read more

BREAKING NEWS – ಕುವೆಂಪು ವಿವಿ, ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು, ಕನ್ನಡ ಪರೀಕ್ಷೆ ದಿಢೀರ್‌ ರದ್ದು, ಏನಿದು ಪ್ರಕರಣ?

Kuvempu-University-File-Image

ಶಿವಮೊಗ್ಗ: ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲದಿಂದಾಗಿ ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ (Examination) ದಿಢೀರ್‌ ರದ್ದಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಹಿಂಪಡೆದು ಕಳುಹಿಸಲಾಗಿದೆ.   ಬಿ.ಎ. 6ನೇ ಸೆಮಿಸ್ಟರ್‌ ಐಚ್ಛಿಕ ಕನ್ನಡ ಪರೀಕ್ಷೆ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಇವತ್ತು ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಬದಲಾದ ಹಿನ್ನೆಲೆ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಲಕೋಟೆ ತೆರೆದಾಗ ಪ್ರಶ್ನೆ ಪತ್ರಿಕೆಯಲ್ಲಿನ ಸಮಸ್ಯೆ ಗೊತ್ತಾಗಿದೆ. ಆತಂಕ, ಗೊಂದಲದಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯಿಂದ … Read more

ಫೈನಾನ್ಸ್‌ ಸಿಬ್ಬಂದಿ ಕಿರುಕುಳದ ಆರೋಪ, ಶಿವಮೊಗ್ಗದಲ್ಲಿ ವಿಷ ಸೇವಿಸಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು

Police-Jeep-at-Shimoga-General-Image

ಶಿವಮೊಗ್ಗ: ಫೈನಾನ್ಸ್‌ ಸಂಸ್ಥೆಯ ಕಿರುಕುಳಕ್ಕೆ ಮನನೊಂದು ವಿಷ ಸೇವಿಸಿದ್ದ ಆಟೋ ಚಾಲಕ (Driver) ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಜ್ಯೋತಿ ನಗರ ನಿವಾಸಿ ರಂಜಿತ್‌ (39) ಮೃತರು. ಪೇಂಟಿಂಗ್‌ ಕೆಲಸ ಮಾಡುತ್ತಿದ್ದ ರಂಜಿತ್‌ಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಆಟೋ ಚಲಾಯಿಸುತ್ತಿದ್ದರು. ಫೈನಾನ್ಸ್‌ ಸಂಸ್ಥೆಯೊಂದರಿಂದ 3 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ವಿಚಾರವಾಗಿ ಫೈನಾನ್ಸ್‌ ಸಂಸ್ಥೆಯವರು ಮನೆ ಬಳಿ ಬಂದು ಅವಾಚ್ಯವಾಗಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ. ಮನನೊಂದ ರಂಜಿತ್‌ ಮೇ 20ರಂದು ಸಂಜೆ ವಿಷ ಸೇವಿಸಿದ್ದರು. … Read more

ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ವ್ಯತ್ಯಯ, ಯಾವಾಗ?

Drinking-Water-Tap

ಶಿವಮೊಗ್ಗ: ಮೆಸ್ಕಾಂನಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಸ್ಥಗಿತ ಮಾಡಲಾಗುತ್ತಿದೆ. ಈ ಕಾರಣಕ್ಕೆ ಮೇ 25 ಮತ್ತು 26 ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

ಶಿವಮೊಗ್ಗಕ್ಕೆ ಇವತ್ತು ಶಿಕ್ಷಣ ಸಚಿವರ ಭೇಟಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

Minister-Madhu-Bangarappa

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. (tour) ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ಹಣ್ಣು– ತರಕಾರಿ ಮೇಳ ಉದ್ಘಾಟಿಸುವರು. 11.30ಕ್ಕೆ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ (ಗೋಪಿ ವೃತ್ತ) ಮಹಾನಗರ ಪಾಲಿಕೆಯ ವಲಯ ಕಚೇರಿ ಉದ್ಘಾಟಿಸುವರು. ಮಧ್ಯಾಹ್ನ 12ಕ್ಕೆ ಬೊಮ್ಮನಕಟ್ಟೆಯಲ್ಲಿ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ … Read more

ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

Crime-News-General-Image

ಶಿವಮೊಗ್ಗ: ಲಕ್ಷಾಂತರ ರೂ. ಮೌಲ್ಯದ ಅಡಿಕೆ (Adike) ಹೊತ್ತು ಶಿವಮೊಗ್ಗದಿಂದ ಉತ್ತರ ಪ್ರದೇಶಕ್ಕೆ ತೆರಳಿದ್ದ ಲಾರಿ ನಾಪತ್ತೆಯಾಗಿದೆ. ಲಾರಿ ಮಾಲೀಕ ಮತ್ತು ಡ್ರೈವರ್‌ ತಮ್ಮ ಮೊಬೈಲ್‌ ಫೋನ್‌ಗಳನ್ನು ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಅಡಿಕೆ ಮಂಡಿಯೊಂದರಿಂದ 82 ಲಕ್ಷ ರೂ. ಮೌಲ್ಯದ 430 ಚೀಲ ಅಡಿಕೆಯನ್ನು ಉತ್ತರ ಪ್ರದೇಶದ ಕಾನ್ಪುರದ ಕಾರ್ಖಾನೆಯೊಂದಕ್ಕೆ ಕಳುಹಿಸಲಾಗಿತ್ತು. ಮೇ 13ರಂದು ಶಿವಮೊಗ್ಗದಿಂದ ಲಾರಿ ಹೊರಟಿದೆ. ಆದರೆ ಕಾನ್ಪುರದಲ್ಲಿ ಕಾರ್ಖಾನೆಗೆ ತಲುಪಿಲ್ಲ ಎಂದು ಆರೋಪಿಸಲಾಗಿದೆ. ಲಾರಿ ಚಾಲಕ ಮತ್ತು ಮಾಲೀಕನಿಗೆ … Read more

ಗಾಜನೂರಿನ ತುಂಗಾ ಡ್ಯಾಮ್‌ನಿಂದ ಯಾವುದೇ ಸಂದರ್ಭ ನೀರು ಹೊರಕ್ಕೆ ಬಿಡುವ ಸಾಧ್ಯತೆ

Tunga-River-Dam

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ಜೋರು ಮಳೆಯಾಗುತ್ತಿದೆ. ಒಳ ಹರಿವು ಹೆಚ್ಚಳವಾದಲ್ಲಿ ಯಾವುದೇ ಸಂದರ್ಭ ತುಂಗಾ ಜಲಾಶಯದಿಂದ ನೀರು ಹೊರಗೆ ಬಿಡಬಹುದು ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (Alert) ತುಂಗಾ ಜಲಾಶಯದ ಕೆಳ ಭಾಗದಲ್ಲಿ ನದಿ ಪಾತ್ರದಲ್ಲಿ ದನಕರುಗಳನ್ನು ಮೇಯಲು ಬಿಡಬಾರದು, ಯಾವುದೇ ಚಟುವಟಿಕೆ ಮಾಡಬಾರದು. ನದಿ ಪಾತ್ರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ » ಅಧಿಕಾರಿಗಳಿಗೆ 10 ದಿನದ … Read more

ಶಿವಮೊಗ್ಗದ ಹವಾಮಾನ | 24 ಮೇ 2025 | ಇವತ್ತೂ ಬರಲಿದೆ ಮಳೆ, ತಂಪಾಯ್ತು ಇಳೆ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಇದರಿಂದ ತಂಪು ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report) ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ … Read more

ದಿನ ಭವಿಷ್ಯ | 24 ಮೇ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಯಾರಿಗೆಲ್ಲ ಶುಭ ಸುದ್ದಿ ಇದೆ?

DINA-BHAVISHYA

DINA BHAVISHYA ಇದನ್ನೂ ಓದಿ » ಅಧಿಕಾರಿಗಳಿಗೆ 10 ದಿನದ ಗಡುವು ನೀಡಿದ MLA, ತಪ್ಪಿದರೆ ಶಿವಮೊಗ್ಗಕ್ಕೆ ಉಳಿಗಾಲವಿಲ್ಲ ಅಂತಾ ಎಚ್ಚರಿಕೆ

ದಿನ ಪಂಚಾಂಗ | 24 ಮೇ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶನಿವಾರ, 24 ಮೇ 2025 ಸೂರ್ಯೋದಯ : 5.59 am ಸೂರ್ಯಾಸ್ತ : 6.50 pm ನಕ್ಷತ್ರ : ರೇವತಿ ರಾಹು ಕಾಲ ಬೆಳಗ್ಗೆ 9 ರಿಂದ 10.30ರವರೆಗೆ ಗುಳಿಕ ಕಾಲ ಬೆಳಗ್ಗೆ 6 ರಿಂದ 7.30ರವರೆಗೆ ಯಮಗಂಡ ಕಾಲ ಮಧ್ಯಾಹ್ನ 1.30 ರಿಂದ 3ರವರೆಗೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.30 ರಿಂದ 5.15ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.52 ರಿಂದ 5.59ರವರೆಗೆ ಅಭಿಜಿತ್‌ ಬೆಳಗ್ಗೆ … Read more