ಪಿಳ್ಳಂಗಿರಿ, ಜಾವಳ್ಳಿ ಸೇರಿ ಸುತ್ತಮುತ್ತಲು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

power cut mescom ELECTRICITY

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್–7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್–8 ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. (Power Cut) ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಆದ್ದರಿಂದ ಮೇ 21ರಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಹೊಳೆಬೆನವಳ್ಳಿ, ದೊಡ್ಡ ತಾಂಡಾ, ಹೊಸಮನೆ ತಾಂಡಾ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡಾ, ಗೌಡನಾಯ್ಕನಹಳ್ಳಿ, … Read more

ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

stop-sand-mining-at-kudli-in-shimoga

ಶಿವಮೊಗ್ಗ: ಪವಿತ್ರ ಕ್ಷೇತ್ರ ಕೂಡ್ಲಿ ಬಳಿ ತುಂಗಾ ಭದ್ರಾ ನದಿಯಲ್ಲಿ ಮರಳುಗಾರಿಕೆ (Sand Mining) ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕರೆದಿರುವ ಟೆಂಡರ್‌ ಅನ್ನು ತಕ್ಷಣ ಕೈಬಿಡಬೇಕು ಎಂದು ಬಿಜೆಪಿ ಮುಖಂಡ ಗಿರೀಶ್ ಭದ್ರಾಪುರ ಆಗ್ರಹಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡ್ಲಿ ಕ್ಷೇತ್ರ ಹಾಗೂ ಭಕ್ತಾದಿಗಳ ಹಿತಕ್ಕಾಗಿ ಈ ಭಾಗದಲ್ಲಿ ಮರಳು ಗಣಿಗಾರಿಕೆಗೆ ಅವಕಾಶ … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ಸಿದ್ದಾಪುರ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌

ksrtc-news-update-thumbnail.webp

ಭದ್ರಾವತಿ: ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಗೆ ಸಿದ್ದಾಪುರ– ಮಿಲ್ಟ್ರಿಕ್ಯಾಂಪ್–ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳ‌ (KSRTC) ಸಂಚಾರ ಆರಂಭಿಸಿದೆ. ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ನಗರದ ಕಡದಕಟ್ಟೆಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕಾರಣ ಮೂರು ವರ್ಷಗಳಿಂದ ಸಿದ್ದಾಪುರದ ಮಾರ್ಗವಾಗಿ ಬಸ್‌ಗಳು ನಗರವನ್ನು ಪ್ರವೇಶಿಸುತ್ತಿದ್ದವು. ಇದರಿಂದ ಹುಡ್ಕೋ, ಕಾಗದ … Read more

ಆಯನೂರಿನಲ್ಲಿ ಚಿನ್ನಾಭರಣ, ಹಣ, ಮೊಬೈಲ್‌, ವೈಫೈ ಕನೆಕ್ಟರ್‌ ಕಳವು, ಎಲ್ಲಿ? ಹೇಗಾಯ್ತು?

Ayanur Graphics

ಆಯನೂರು: ಕುಟುಂಬದವರೆಲ್ಲ ಶಿಕಾರಿಪುರದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭ ಮನೆ ಬಾಗಿಲಿನ ಬೀಗ (Lock) ಮುರಿದು ನಗದು, ಚಿನ್ನಾಭರಣ ಸೇರಿ ಹಲವು ವಸ್ತುಗಳನ್ನು ಕಳವು ಮಾಡಲಾಗಿದೆ. ಆಯನೂರಿನ ಬಸವೇಶ್ವರ ದೇವಸ್ಥಾನದ ಮುಂಭಾಗದ ನೂರುಲ್ಲಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ನೂರುಲ್ಲಾ ಅವರು ಕುಟುಂಬದ ಸಹಿತ ಶಿಕಾರಿಪುರಕ್ಕೆ ತೆರಳಿದ್ದರು. ಬೆಳಗಿನ ಜಾವ ಪಕ್ಕದ ಮನೆಯವರು ಕರೆ ಮಾಡಿ ಮಾಹಿತಿ ನೀಡಿದ್ದರು. ಮನೆಗೆ ಹಿಂತಿರುಗಿ ಪರಿಶೀಲಿಸಿದಾಗ … Read more

ಸಾಗರದಲ್ಲಿ ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜ ಹೊತ್ತು ಸಾಗಿದ ಜನ, ಹೇಗಿತ್ತು ಮೆರವಣಿಗೆ?

Tiranaga-Yathre-at-sagara-BY-Raghavendra-and-Halappa - Indian Flag

ಸಾಗರ: ಆಪರೇಷನ್‌ ಸಿಂಧೂರ ಮತ್ತು ಭಾರತೀಯ ಯೋಧರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಸಾಗರದಲ್ಲಿ ತಿರಂಗ ಯಾತ್ರೆ ನಡೆಯಿತು. ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜ (Flag) ಹೊತ್ತು ದೊಡ್ಡ ಸಂಖ್ಯೆಯ ಜನರು ಮೆರವಣಿಗೆ ನಡೆಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಮಹಾಗಣಪತಿ ದೇವಸ್ಥಾನದಿಂದ ಆರಂಭವಾದ ತಿರಂಗಯಾತ್ರೆ ನಗರದ ಪ್ರಮುಖಬೀದಿಗಳಲ್ಲಿ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಹಲವರು ಧ್ವಜ ಹೊತ್ತು ಸಾಗಿದರು. ಮಾಜಿ … Read more

ಭದ್ರಾವತಿಯಲ್ಲಿ ಕೋಟೆ ಆಂಜನೇಯ ಸ್ವಾಮಿ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Kanchina-Bagilu-Kote-anjaneya-temple-ratotsava

ಭದ್ರಾವತಿ: ಕಂಚಿನ ಬಾಗಿಲು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ (Temple) 10ನೇ ವರ್ಷದ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡು ರಥೋತ್ಸವ ಕಣ್ತುಂಬಿಕೊಂಡರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸೋಮವಾರ ದೇವಸ್ಥಾನದ ಪ್ರಾಂಗಣದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಲಕ್ಷ್ಮಿನರಸಿಂಹ ದೇವಸ್ಥಾನಕ್ಕೆ ತೆರಳಿ ಪುನಃ ಹಿಂತಿರುಗಿ ದೇವಸ್ಥಾನದ ಮುಂಭಾಗದಲ್ಲಿ ಅಲಂಕೃತಗೊಂಡ ರಥದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.‌ ಮಧ್ಯಾಹ್ನ 1.30ರ ಸಮಯದಲ್ಲಿ ತಾಲೂಕು ಕಚೇರಿ ಸಮೀಪ … Read more

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

Poster-released-by-Araga-Jnanendra-at-BJP-Office

ಶಿವಮೊಗ್ಗ: ಶೂನ್ಯ ಸಾಧನೆ ಮಾಡಿರುವ ರಾಜ್ಯ ಸರ್ಕಾರ ಸಾಧನಾ ಸಮಾವೇಶ (convention) ನಡೆಸುತ್ತಿರುವುದು ವಿಪರ್ಯಾಸ ಎಂದು ಶಾಸಕ ಆರಗ ಜ್ಞಾನೇಂದ್ರ ಬೇಸರ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸರ್ಕಾರದ ವಿರುದ್ಧ ಪೋಸ್ಟರ್‌ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಆರಗ ಜ್ಞಾನೇಂದ್ರ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಸಿ.ಹೆಚ್.ಮಾಲತೇಶ್, ಹರಿಕೃಷ್ಣ ಮತ್ತಿತರರಿದ್ದರು. ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

Police-Jeep-With-Light-New.

ಶಿವಮೊಗ್ಗ: ATM ಮೆಷಿನ್‌ನಲ್ಲಿ ಡ್ರಾ ಮಾಡಿದ ಹಣ ಬಾರದೆ ಇರುವ ಕುರಿತು ಮೂರು ಪ್ರತ್ಯೇಕ ದೂರು ಬಂದ ಹಿನ್ನೆಲೆ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಗಮ್‌ ಟೇಪ್‌ ಮಾದರಿ ವಸ್ತು ಅಂಟಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ವಂಚಕನ ವಿರುದ್ಧ ಕೆನರಾ ಬ್ಯಾಂಕ್‌ ಸಿಬ್ಬಂದಿ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಮೇ 13ರಂದು ಮೂರು ಪ್ರತ್ಯೇಕ ಗ್ರಾಹಕರು ಪ್ರತ್ಯೇಕ ಸಮಯದಲ್ಲಿ ಎಟಿಎಂನಿಂದ ಹಣ ಬಿಡಿಸಿಕೊಳ್ಳಲು ಬಂದಿದ್ದರು. ಎಟಿಎಂನಿಂದ ಹಣ ಬಾರದಿದ್ದರು ಅಕೌಂಟ್‌ನಲ್ಲಿ ಹಣ ಕಡಿತವಾಗಿತ್ತು. ಈ ಸಂಬಂಧ ಕೆನರಾ ಬ್ಯಾಂಕ್‌ಗೆ … Read more

ಶಿವಮೊಗ್ಗದ JNN ಕಾಲೇಜಿನಲ್ಲಿ ಟೆಕ್‌ ಜೋನ್‌ ಸಮಾರೋಪ, ಯಾರೆಲ್ಲ ಏನೆಲ್ಲ ಸಲಹೆ ನೀಡಿದರು?

Tech-zone-at-Shimoga-JNNCE-college.

ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಅನನ್ಯ ಮಂಟಪದಲ್ಲಿ ರಾಜ್ಯಮಟ್ಟದ ಇಂಜಿನಿಯರಿಂಗ್ ಅಂತರ ಕಾಲೇಜುಗಳ ತಾಂತ್ರಿಕ ಸ್ಪರ್ಧೆ ‘ಟೆಕ್ ಜೋನ್’ (Tech Zone) ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಜಾನ್ವಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಯಾರೆಲ್ಲ ಏನೆಲ್ಲ ಹೇಳಿದರು?‌ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ಆಜೀವ ಸದಸ್ಯ … Read more

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

crime name image

ಶಿವಮೊಗ್ಗ: ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ (jewels) ಕಳ್ಳತನ ಮಾಡಲಾಗಿದೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಡಿ ಬ್ಲಾಕ್‌ನಲ್ಲಿರುವ ಪ್ರವೀಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಪ್ರವೀಣ ತಮ್ಮ ಪತ್ನಿಯೊಂದಿಗೆ ಶಿಕಾರಿಪುರದಲ್ಲಿರುವ ತಮ್ಮ ಸಂಬಂಧಿಯ ಮನೆಯಲ್ಲಿ ಪೂಜೆಗೆ ತೆರಳಿದ್ದರು. ಮರುದಿನ ಬೆಳಗ್ಗೆ 6 ಗಂಟೆ ಹೊತ್ತಿಗೆ ಅಕ್ಕಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲಿನ … Read more