ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಬುಧವಾರ, 7 ಮೇ 2025 ಸೂರ್ಯೋದಯ : 6.03 am ಸೂರ್ಯಾಸ್ತ : 6.45 pm ನಕ್ಷತ್ರ : ಹುಬ್ಬಾ ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಪ್ರಥಮ ರ‍್ಯಾಂಕ್‌ ಪಡೆದ ವಿದ್ಯಾರ್ಥಿನಿಗೆ ಉಚಿತ ಸೀಟ್‌, ಪಿಯುಸಿಯ ಟಾಪರ್‌ಗಳಿಗೆ ಅಮೆರಿಕ ಟೂರ್‌

ಎಸ್ಸೆಸ್ಸೆಲ್ಸಿ ಪ್ರಥಮ ರ‍್ಯಾಂಕ್‌ ಪಡೆದ ವಿದ್ಯಾರ್ಥಿನಿಗೆ ಉಚಿತ ಸೀಟ್‌, ಪಿಯುಸಿಯ ಟಾಪರ್‌ಗಳಿಗೆ ಅಮೆರಿಕ ಟೂರ್‌

sslc-first-rank-holder-namana-at-arya-pu-college

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ (Rank) ಪಡೆದ ವಿದ್ಯಾರ್ಥಿನಿ ನಮನಾ.ಕೆ ಅವರಿಗೆ ಆರ್ಯ ಪಿ.ಯು. ಕಾಲೇಜಿನಲ್ಲಿ ಉಚಿತ ಸೀಟ್‌ ನೀಡಲಾಗಿದೆ. ಅಲ್ಲದೆ ದ್ವಿತೀಯ ಪಿ.ಯು ಕಾಲೇಜಿನಲ್ಲಿ ಟಾಪರ್‌ ಆಗುವವರಿಗೆ ಅಮೆರಿಕಾ ಪ್ರವಾಸಕ್ಕೆ ಕಳುಹಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಮನಾ.ಕೆ 625 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಇಂದು ಆರ್ಯ ಪಿ.ಯು ಕಾಲೇಜಿನಲ್ಲಿ ನಮನಾ ಅವರಿಗೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಶಾಲೆ ಆರಂಭಿಸಿ 18 ವರ್ಷವಾಗಿದೆ. … Read more

BREAKING NEWS – ಭದ್ರಾವತಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

BREAKING-NEWS-GENERAL-

ಭದ್ರಾವತಿ: ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಯೊಬ್ಬನ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ರಾತ್ರಿ ಕ್ರಿಕೆಟ್ ವಿಚಾರವಾಗಿ ನಡೆದ ಜಗಳದಲ್ಲಿ ಅರುಣ್ ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಅರುಣ್ ಕುಮಾರ್ ಆರೋಪಿಯಾಗಿದ್ದ. ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ … Read more

ಎಟಿಎನ್‌ಸಿಸಿ ಸಂಜೆ ಕಾಲೇಜಿಗೆ ದಾಖಲಾತಿ ಆರಂಭ, ಏನೆಲ್ಲ ಸೌಲಭ್ಯವಿದೆ?

Atncc-college-shimoga

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ ಪ್ರತಿಷ್ಠಿತ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ (Admission) ಆರಂಭವಾಗಿದೆ. ಡೊನೇಷನ್‌ ಇಲ್ಲದೆ ಬಿ.ಕಾಂ ಪದವಿ ಪ್ರವೇಶಾತಿ ಕಲ್ಪಿಸಲಾಗುತ್ತದೆ ಎಂದು ಕಾಲೇಜು ಪ್ರಾಂಶುಪಾಲ ಘನಶ್ಯಾಮ ತಿಳಿಸಿದ್ದಾರೆ. ಎಟಿಎನ್‌ಸಿಸಿ ಸಂಜೆ ಕಾಲೇಜಿನಲ್ಲಿ ನುರಿತ ಅಧ್ಯಾಪಕರಿಂದ ಸಿ.ಎ, ಐಎಎಸ್‌, ಐಬಿಪಿಎಸ್‌ ಪರೀಕ್ಷೆಗಳ ಕುರಿತು ಮಾಹಿತಿ ದೊರೆಯಲಿದೆ. ವಿದ್ಯಾರ್ಥಿ ವೇತನದ ಸೌಲಭ್ಯವಿದೆ. ಕಂಪ್ಯೂಟರ್‌ ಲ್ಯಾಬ್‌, ಡಿಜಿಟಲ್‌ ಲೈಬ್ರರಿ, ಆಡಿಯೋ ವಿಷುಯಲ್‌ ಸಭಾಂಗಣ, ಸ್ಪರ್ಧಾತ್ಮಕ ಪರೀಕ್ಷಗಳ ಮಾಹಿತಿ, ಕಾಲೇಜು ಆವರಣದಲ್ಲಿ ಸಿಸಿಟಿವಿ ಸೌಲಭ್ಯವಿದೆ. … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ.7ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (Power Cut) ಎಲ್ಲೆಲ್ಲಿ ಕರೆಂಟ್‌ ಇರಲ್ಲ? ವಿನೋಬನಗರ ಪೊಲೀಸ್ ಚೌಕಿ, ಅರವಿಂದ ನಗರ, ಸೂರ್ಯ ಲೇಔಟ್, ಮೈತ್ರಿ ಅಪಾರ್ಟ್‌ಮೆಂಟ್, ಶಾರದಮ್ಮ ಲೇಔಟ್,  ಪಿ ಅಂಡ್ ಟಿ ಕಾಲೋನಿ, ಬೊಮ್ಮನಕಟ್ಟೆ ರಸ್ತೆ, ವೀರಣ್ಣ ಲೇಔಟ್, ಹುಚ್ಚರಾಯ ಸ್ವಾಮಿ ಕಾಲೋನಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. … Read more

ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಬೈಕ್‌ ಡಿಕ್ಕಿ, ವೃದ್ಧನಿಗೆ ಗಂಭೀರ ಗಾಯ, ತಡವಾಗಿ ದಾಖಲಾಯ್ತು ಕೇಸ್‌

ACCIDENT-NEWS-GENERAL-IMAGE.

ಶಿವಮೊಗ್ಗ: ಬೈಕ್‌ ಡಿಕ್ಕಿಯಾಗಿ (Mishap) ರಸ್ತೆ ದಾಟುತ್ತಿದ್ದ ವೃದ್ಧ ಗಂಭೀರ ಗಾಯಗೊಂಡಿದ್ದಾರೆ. ಚಿಕಿತ್ಸೆ ವೆಚ್ಚ ಭರಿಸುವುದಾಗಿ ತಿಳಿಸಿದ್ದ ಬೈಕ್‌ ಸಾವರ ಮಾತಿನಂತೆ ನಡೆದುಕೊಳ್ಳದ ಹಿನ್ನೆಲೆ ದೂರು ದಾಖಲಾಗಿದೆ. ಶಿವಮೊಗ್ಗ ತಾಲೂಕು ಕೆಳಗಿನ ಕುಂಚೇನಹಳ್ಳಿಯ ಮಂಜಪ್ಪ ಎಂಬುವವರು ಗ್ರಾಮದ ಅಂಗಡಿಯಿಂದ ಮನೆ ಕಡೆಗೆ ತೆರಲು ರಸ್ತೆ ದಾಟುವಾಗ ಅಪಘಾತವಾಗಿತ್ತು. ಶಿವಮೊಗ್ಗ ಕಡೆಯಿಂದ ಸವಳಂಗ ರಸ್ತೆಗೆಯಲ್ಲಿ ತೆರಳುತ್ತಿದ್ದ ಬೈಕ್‌ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಂಜಪ್ಪ ಅವರ ತಲೆ, ಕೈಗಳಿಗೆ ಗಂಭೀರ ಗಾಯವಾಗಿತ್ತು. ಅಪಘಾತದ ಸಂದರ್ಭ ಆಸ್ಪತ್ರೆ ಖರ್ಚು-ವೆಚ್ಚ ಭರಿಸುವುದಾಗಿ ತಿಳಿಸಿದ್ದ … Read more

ಅಡಿಕೆ ಧಾರಣೆ | 6 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 19229 33119 ಬೆಟ್ಟೆ 50109 59199 ರಾಶಿ 47399 56509 ಸರಕು 61129 98610 ‌ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವ ನಾಯಕತ್ವ ಸಮಾವೇಶ, ಧ್ವಜ ಪಡೆದು, ಪ್ರಮಾಣ ವಚನ ಸ್ವೀಕರಿಸಿದ ಯುವ ಕಾಂಗ್ರೆಸಿಗರು

ಶಿವಮೊಗ್ಗದಲ್ಲಿ ಯುವ ನಾಯಕತ್ವ ಸಮಾವೇಶ, ಧ್ವಜ ಪಡೆದು, ಪ್ರಮಾಣ ವಚನ ಸ್ವೀಕರಿಸಿದ ಯುವ ಕಾಂಗ್ರೆಸಿಗರು

Youth-Congress-New-President-Harshith-Gowda-takes-oath

ಶಿವಮೊಗ್ಗ: ಯುವ ಕಾಂಗ್ರೆಸ್‌ನ (Youth Congress) ನೂತನ ಜಿಲ್ಲಾಧ್ಯಕ್ಷ ಹರ್ಷಿತ್‌ ಗೌಡ ಮತ್ತು ಪದಾಧಿಕಾರಿಗಳು ಇವತ್ತು ಅಧಿಕಾರ ಸ್ವೀಕರಿಸಿದರು. ಯುವ ಕಾಂಗ್ರೆಸ್‌ ಧ್ವಜ ಪಡೆದು, ಪ್ರಮಾಣ ವಚನ ಸ್ವೀಕರಿಸಿ ನೂತನ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ನಗರದ ಬಂಜಾರ ಕನ್ವೆನಷನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಯುವ ನಾಯಕತ್ವ ಸಮಾವೇಶದಲ್ಲಿ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮಂಜುನಾಥ ಗೌಡ ಜಿಲ್ಲಾಧ್ಯಕ್ಷ ಹರ್ಷಿತ್‌ ಗೌಡ ಅವರಿಗೆ ಯುವ ಕಾಂಗ್ರೆಸ್‌ ಧ್ವಜ ಹಸ್ತಾಂತರಿಸಿದರು. ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್‌ ಪ್ರಮಾಣವಚನ ಬೋಧಿಸಿದರು. ಯಾರೆಲ್ಲ ಏನೆಲ್ಲ ಮಾತನಾಡಿದರು? … Read more

ಶಿವಮೊಗ್ಗದಲ್ಲಿ ವಕ್ಫ್‌ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ದೂರು, ಕ್ರಿಮಿನಲ್‌ ಕೇಸ್‌ ದಾಖಲಿಸಲು ಪಟ್ಟು

BJP-urges-to-file-criminal-case-against-protestors.

ಶಿವಮೊಗ್ಗ: ವಕ್ಫ್‌ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಿಮಿನಲ್‌ ಮೊಕದಮೆ (Criminal Case) ದಾಖಲಿಸಬೇಕು ಎಂದು ಆಗ್ರಹಿಸಿ ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರ ನಿಯೋಗ ಜಿಲ್ಲಾ ರಕ್ಷಣಾಧಿಕಾರಿಗೆ ದೂರು ಸಲ್ಲಿಸಿದರು. ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರನ್ನು ಭೇಟಿಯಾದ ಬಿಜೆಪಿ ಮುಖಂಡರು, ಉಚ್ಛ ನ್ಯಾಯಾಲಯದ ಆದೇಶ ಧಿಕ್ಕರಿಸಿ ಸರ್ಕಾರದ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಿಮಿನಲ್‌ ಮೊಕದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು. ನ್ಯಾಯಾಲಯದ … Read more

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

car-truck-mishap-at-hubli-five-member-succumbed

ಹುಬ್ಬಳ್ಳಿ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಾಗರ ತಾಲೂಕಿನ ಐವರು (Five) ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಜಿಲ್ಲೆ ಕುಸುಗಲ್‌ ಸಮೀಪದ ಇಂಗಳಹಳ್ಳಿ ಕ್ರಾಸ್‌ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ವೇತಾ (29), ಅಂಜಲಿ (26), ಸಂದೀಪ್‌ (26), ವಿಠ್ಠಲ (55), ಶಶಿಕಲಾ (40) ಮೃತರು. ಹೊಟೇಲ್‌ ವ್ಯಾಪಾರಕ್ಕೆಂದು ಕುಟುಂಬದವರು ಬಾಗಲಕೋಟೆಗೆ ತೆರಳುತ್ತಿದ್ದು ಎನ್ನಲಾಗಿದೆ. ಈ ವೇಳೆ ಹುಬ್ಬಳ್ಳಿ – ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ … Read more