ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು?

BJP-Mahila-Morcha-protest-against-CM-Siddaramaiah

ಶಿವಮೊಗ್ಗ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಏಕವಚನ ಮತ್ತು ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು, ಸಿದ್ದರಾಮಯ್ಯ ಅವರು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. ತಕ್ಷಣ ಅವರು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್‌ ಅವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್ … Read more

ಸಿಎಂ ಸಿದ್ದರಾಮಯ್ಯ ಬಗ್ಗೆ ಫೇಸ್‌ಬುಕ್‌ನಲ್ಲಿ ಕಾಮೆಂಟ್‌, ಭದ್ರಾವತಿಯಲ್ಲಿ ದಾಖಲಾಯ್ತು ಕೇಸ್‌

facebook-general-image.webp

ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್‌ (Comment) ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ವಿಡಿಯೋಗೆ ಷಡಾಕ್ಷರಿ ಎಂಬ ಫೇಸ್‌ಬುಕ್‌ ಖಾತೆಯಿಂದ ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ » ಅಪಘಾತಕ್ಕೀಡಾದ ಕಾರಿನಲ್ಲಿ ಫೋನ್‌ಗಳು, ಪರ್ಸ್‌, ನಗದು ಕಳ್ಳತನ

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

041221 Siddaramaiah At Shimoga MLC election campaign

ಶಿವಮೊಗ್ಗ: ಮುಖ್ಯಮಂತ್ರಿ (CM) ಸಿದ್ದರಾಮಯ್ಯ ಮೇ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸಿದ್ದರಾಮಯ್ಯ ಅವರು ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.20ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗ ವಿಮಾನ … Read more

ಮುಸ್ಲಿಮ್‌ ಬಜೆಟ್‌ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು, ಏನಂದ್ರು? ಇಲ್ಲಿದೆ ನಾಲ್ಕು ಪಾಯಿಂಟ್‌

Minister-Madhu-Bangarappa-Press-meet.

ಶಿವಮೊಗ್ಗ : ರಾಜ್ಯ ಸರ್ಕಾರದ್ದು ಮುಸ್ಲಿಂ (Muslim) ಸಮುದಾಯದ ತುಷ್ಠೀಕರಣದ ಬಜೆಟ್‌ ಎಂದು ಬಿಜೆಪಿ ಆರೋಪಿಸಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಮಿನಿಸ್ಟರ್‌ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌ ಗ್ಯಾರಂಟಿ ಯೋಜನೆಗಾಗಿ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ 230 ಕೋಟಿ ರೂ. ಹಣ ಸಂದಾಯವಾಗುತ್ತದೆ. ಯಾವುದೇ ಕಮಿಷನ್‌ ಇಲ್ಲೆ ಹಣ ಫಲಾನುಭವಿಗಳಿಗೆ ತಲುಪಿಸಿ, ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ. ಬಡವರ ಕೈಗೆ ಹಣ ಕೊಟ್ಟರೆ ಮಾರುಕಟ್ಟೆಯಲ್ಲಿ ಹಣದ ಚಲನೆ ಇರುತ್ತದೆ. … Read more

ಮಂಗನ ಕಾಯಿಲೆ ನಿಯಂತ್ರಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ, ಏನದು?

MONKEY-FEVER-KFD-IN-SHIMOGA

ಬೆಂಗಳೂರು : ಮಲೆನಾಡು ಭಾಗವನ್ನು ಬಾಧಿಸುತ್ತಿರುವ ಮಂಗನ ಕಾಯಿಲೆ (ಕ್ಯಾಸನೂರು ಕಾಡಿನ ಕಾಯಿಲೆ) ನಿಯಂತ್ರಣಕ್ಕೆ ಬಜೆಟ್‌ನಲ್ಲಿ (Budget) ಅನುದಾನ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಸಾಂಕ್ರಾಮಿಕ ಕಾಯಿಲೆಗಳಾದ ಚಿಕೂನ್‌ಗುನ್ಯ, ಡೆಂಗ್ಯೂ ಮತ್ತು ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕೆಎಫ್‌ಡಿ ನಿಯಂತ್ರಣಕ್ಕಾಗಿ 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಾಗುತ್ತದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ » ರಾಜ್ಯದಲ್ಲಿ ANF ವಿಸರ್ಜನೆ, ನಕ್ಸಲ್‌ ಪೀಡಿತ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ

ಅಡಿಕೆ ಎಲೆ ಚುಕ್ಕೆ ರೋಗ, ಬಜೆಟ್‌ನಲ್ಲಿ ಮಹತ್ವದ ಪ್ರಸ್ತಾಪ, ಏನದು?

Areca-Farm-Adike-tota-in-Shimoga

ಶಿವಮೊಗ್ಗ : ಎಲೆ ಚುಕ್ಕೆ ರೋಗದಿಂದ ಲಕ್ಷಾಂತರ ಅಡಿಕೆ ಬೆಳೆಗಾರರು (ADIKE) ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆ ಸಸ್ಯ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ಎಲೆ ಚುಕ್ಕೆ ರೋಗದ ಕುರಿತು ಪ್ರಸ್ತಾಪಿಸಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತಲು ಹೆಚ್ಚು ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ರೋಗ ನಿಯಂತ್ರಿಸಿ ಸಸ್ಯ ಸಂರಕ್ಷಣೆಗೆ 62 ಕೋಟಿ ರೂ. ಒದಗಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ತೋಟಗಾರಿಕೆ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಿಂದ 50 ಲಕ್ಷ ರೂ. ಚೆಕ್‌ ಹಸ್ತಾಂತರ

DCC-Bank-president-manjunatha-gowda-50-lakh-to-cm-relief-fund

SHIVAMOGGA LIVE NEWS, 28 NOVEMBER 2024 ಬೆಂಗಳೂರು : ಶಿವಮೊಗ್ಗ ಸಹಕಾರ ಕೇಂದ್ರ ಬ್ಯಾಂಕ್‌ (DCC BANK) ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಲಾಗಿದೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಚೆಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಯಿತು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಇದ್ದರು. ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, … Read more

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಶಾಸಕರ ಖರೀದಿಗೆ ಕಾಂಗ್ರೆಸ್‌ ಪಕ್ಷದೊಳಗೆ ಪೈಪೋಟಿ’

BY-Vijayendra-in-Shimoga-speaks-about-Operation.

SHIMOGA NEWS, 18 NOVEMBER 2024 : ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯ ಕಾರಣಕ್ಕೆ ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ (Operation) ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಆಪರೇಷನ್‌ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಶಾಸಕ ರವಿ ಗಾಣಿಗ ಮಾತ್ರವಲ್ಲದೆ ಮುಖ್ಯಮಂತ್ರಿಯವರು ಕೂಡ ಶಾಸಕರ ಖರೀದಿಯ ಕುರಿತು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಮಯ ಹತ್ತಿರವಾಗಿದೆ. ಹಾಗಾಗಿ ಕಾಂಗ್ರೆಸ್‌ ಪಕ್ಷದೊಳಗೇ ಕುದುರೆ … Read more

‘ಸಾಧು, ಸಂತರ ನೇತೃತ್ವದಲ್ಲಿ ರಕ್ತ ಕ್ರಾಂತಿ’, ಸರ್ಕಾರಕ್ಕೆ ಈಶ್ವರಪ್ಪ ವಾರ್ನಿಂಗ್

KS-Eshwarappa-Press-meet-in-Shimoga

SHIMOGA NEWS, 4 NOVEMBER 2024 : ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ಕೂಡಲೆ ರದ್ದು ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿ ಸಾಧು, ಸಂತರ (Priest) ನೇತೃತ್ವದಲ್ಲಿ ರಕ್ತ ಕ್ರಾಂತಿ ಆಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ವಕ್ಫ್ ಆಸ್ತಿ ಎಂದು ರೈತರಿಗೆ ನೀಡಿರುವ ನೊಟೀಸ್ ಹಿಂಪಡೆಯಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ‌‌. ನೊಟೀಸ್ ಹಿಂಪಡೆಯುವುದು ಮುಖ್ಯವಲ್ಲ. ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು‌. ಸಿದ್ದರಾಮಯ್ಯ ಜಮೀರ್ ಅಹಮದ್ ಬಾಲ ಹಿಡಿದುಕೊಂಡು … Read more

ಗ್ಯಾರಂಟಿ ಯೋಜನೆ, ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್‌ಗೆ ದಿನಾಂಕ ಫಿಕ್ಸ್‌

guarantee-scheme-meeting-in-Shimoga

SHIMOGA NEWS, 28 SEPTEMBER 2024 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ (Guarantee) ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಅಕ್ಟೋಬರ್‌ 1ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರಭೂಪಾಲ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಹೆಚ್‌.ಎಂ.ರೇವಣ್ಣ, … Read more