ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

wild-elephants-at-Soraba-ulavi-hobli

ಸೊರಬ: ಕಳೆದ ಎರಡು ದಿನಗಳ ಹಿಂದೆ ಸೊರಬ ತಾಲೂಕಿನ ಉಳವಿ ಹೋಬಳಿ (Uluvi Hobli) ಸುತ್ತಮುತ್ತಲಿನ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು (Wild Elephants) ಲಗ್ಗೆ ಇಟ್ಟಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಎಲ್ಲೆಲ್ಲಿ ಕಾಡಾನೆ ಲಗ್ಗೆ? ಕಾನಹಳ್ಳಿ, ಕಣ್ಣೂರು ಮತ್ತು ಮೈಸಾವಿ ಗ್ರಾಮಗಳ ಸುತ್ತಮುತ್ತ ಬೆಳೆ ಕಟಾವು ಮಾಡಿದ ರೈತರ ಜಮೀನಿನಲ್ಲಿ (farmland) ಆನೆಗಳು ಸಂಚರಿಸಿರುವ ಬಗ್ಗೆ ಹೆಜ್ಜೆ ಗುರುತು ಹಾಗೂ ಲದ್ದಿ ಕಾಣಿಸಿದೆ. ಅಲ್ಲದೇ ಕೆಲವು ತೋಟದಲ್ಲಿ ಬಾಳೆಗಿಡಗಳನ್ನು ಕಿತ್ತು ತಿಂದು ಹಾನಿ ಮಾಡಿವೆ. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಚಳಿ ಜೋರು, ಎಲ್ಲೆಲ್ಲು ತಂಪು ತಂಪು ವಾತಾವರಣ, ತಾಲೂಕುಗಳಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಥಂಡಿ ಜೋರಾಗಿದೆ. ದಟ್ಟ ಮಂಜು, ಮೈ ಕೊರೆಯುವ ಚಳಿ ಆವರಿಸಿದೆ. ಇದರ ಜೊತೆಗೆ ಬಿಸಿಲಿನ ಅಬ್ಬರವು ಜೋರಾಗಿದೆ. ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ಸಂಜೆಯಿಂದಲೆ ವಾತಾವರಣ ತಂಪೇರುತ್ತಿದ್ದು ಬೆಳಗ್ಗೆ ಬಹು ಹೊತ್ತಿನವರೆಗೆ ಇದೇ ವಾತಾವರಣ ಇರುತ್ತದೆ. ಇನ್ನ, ಬಿಸಿಲು ಕೂಡ ಜೊರಾಗಿದೆ. ಇದರಿಂದ ಮಧ್ಯಾಹ್ನದ ವೇಳೆ ಶಿವಮೊಗ್ಗ ನಗರದಲ್ಲಿ ಜನ ಸಂಚಾರವೇ ಕಡಿಮೆಯಾಗುತ್ತಿದೆ. ಇದನ್ನು ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? … Read more

ಚಂದ್ರಗುತ್ತಿಯಲ್ಲಿ ಇವತ್ತು ಲಕ್ಷ ದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

Chandragutti-Temple-Soraba.

ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ನ.20 ರಂದು ಲಕ್ಷ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ  ಪ್ರಮೀಳಾ ಕುಮಾರಿ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಕೊನೆಯ ಕಾರ್ತಿಕ ಅಮಾವಾಸ್ಯೆಯಂದು ಲಕ್ಷ ದೀಪೋತ್ಸವವನ್ನು ಆಚರಿಸಲಾಗುವುದು. ದೇವಸ್ಥಾನದಲ್ಲಿ  ದೀಪಲಂಕಾರ ಸೇರಿದಂತೆ ಪ್ರಧಾನ ಅರ್ಚಕರಾದ ಅರವಿಂದ್ ಭಟ್ ಅವರ ನೇತೃತ್ವದಲ್ಲಿ ಪೂಜಾ ಧಾರ್ಮಿಕ ಕಾರ್ಯಗಳು ನಡೆಯಲಿವೆ.   ಪರಿವಾರ ದೇವರುಗಳಾದ ನಾಗದೇವತೆ, ಕಾಲಭೈರವ, ಪರಶುರಾಮ, ಮಾತಂಗಿ, ತ್ರಿಶೂಲ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಮಹಾಮಂಗಳಾರತಿ ನಡೆಯಲಿದೆ. ಸಂಜೆ … Read more

ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ, ಮಿನಿಸ್ಟರ್‌ ಸಲಹೆ, ಏನಿದು ಲಸಿಕೆ?

Cattle-Vaccination-at-anavatti

ಆನವಟ್ಟಿ: ರಾಷ್ಟ್ರೀಯ ಜಾನುವಾರು (Cattles)ರೋಗಗಳ ನಿಯಂತ್ರಣ ಯೋಜನೆಯಡಿ ಜಾನುವಾರುಗಳಿಗೆ ನೀಡುತ್ತಿರುವ ಉಚಿತ ಲಸಿಕೆ ಸೌಲಭ್ಯವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾಲುಬಾಯಿ ರೋಗ ಮುಕ್ತ ರಾಜ್ಯವನ್ನಾಗಿಸುವ ಸಂಕಲ್ಪ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದರು. ಆನವಟ್ಟಿ ಸಮೀಪದ ಗಿಣಿವಾಲ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ರೋಗ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಲಸಿಕಾದಾರರು ನಿಮ್ಮ ಮನೆ ಬಾಗಿಲಿಗೆ … Read more

ರಾತ್ರೋರಾತ್ರಿ ಲಾರಿ ಕದ್ದು ಎಸ್ಕೇಪ್‌ ಆಗಿದ್ದ ಆರೋಪಿ ಅರೆಸ್ಟ್‌

soraba-News-Update

ಸೊರಬ: ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ನಿಲ್ಲಿಸಿದ್ದ ಲಾರಿ (Truck) ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾನುಕೇರಿ ಬಡಾವಣೆ ನಿವಾಸಿ ಇಬ್ರಾಹಿಂ ಅಹಮ್ಮದ್ (26) ಬಂಧಿತ. ಸೊರಬ ಪಟ್ಟಣದ ಪೆಟ್ರೋಲ್‌ ಬಂಕ್‌ ಮುಂಭಾಗ ಸಾಗರ ಪಟ್ಟಣದ ಗಾಂಧಿನಗರ ನಿವಾಸಿ ಆರೀಫ್ ಆಹ್ಮದ್ ಎಂಬುವರಿಗೆ ಸೇರಿದ ಲಾರಿ ಕಳ್ಳತನವಾಗಿತ್ತು. ಇದರ ಸಿಸಿಟಿವಿ ವಿಡಿಯೋಗಳು ವೈರಲ್‌ ಆಗಿದ್ದವು. ಕಳ್ಳತನದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಪಟ್ಟಣದ ಇಬ್ರಾಹಿಂ ಅಹಮ್ಮದ್‌ನನ್ನು ಬಂಧಿಸಿ, ಸುಮಾರು ₹4.90 ಲಕ್ಷದ ಲಾರಿಯನ್ನು ವಶಕ್ಕೆ … Read more

ಪೊಲೀಸ್‌ ಕಂಡು ಎಸ್ಕೇಪ್‌ ಆಗಲು ಯತ್ನ, ಹಿಡಿದು ವಿಚಾರಿಸಿದಾಗ ಹೊರಬಿತ್ತು ಸಾಲು ಸಾಲು ಕೇಸ್‌ಗಳ ವಿಷಯ

Soraba-Police-nab-temple-theif

ಸೊರಬ: ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ 7 ಕಡೆ ದೇವಸ್ಥಾನಗಳಲ್ಲಿನ ಕಳ್ಳತನ (Temple) ಪ್ರಕರಣ ಬಯಲಿಗೆ ಬಂದಿದೆ. ಈತನಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸವಳಂಗದ ಅಯ್ಯಪ್ಪ ನಗರದ ಸಂದೀಪ.ಕೆ (24) ಬಂಧಿತ. ಸೊರಬದ ಪುರಸಭೆ ವೃತ್ತದಲ್ಲಿ ಗಸ್ತು ನಡೆಸುತ್ತಿದ್ದ ಪೊಲೀಸರನ್ನು ಕಂಡು ಸಂದೀಪ ಪರಾರಿಯಾಗಲು ಯತ್ನಿಸಿದ. ಅನುಮಾನದ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸೊರಬ ಪೊಲೀಸ್‌ ಠಾಣೆ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧೆಡೆ … Read more

Villagers Rescue Deer, Hand it Over to Forest Department

Deer-rescued-by-tavanandi-villagers-in-Soraba

Soraba: Villagers rescued a deer that had strayed from the forest into human habitation in search of food and handed it over to the Forest Department officials. An incident occurred in Tavanandi village of the Taluk. A female deer, estimated to be about four years old, had headed towards the village in search of food … Read more

ಜಿಂಕೆ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

Deer-rescued-by-tavanandi-villagers-in-Soraba

ಸೊರಬ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು (Deer) ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷದ ಹೆಣ್ಣು ಜಿಂಕೆಯೊಂದು ಆಹಾರ, ನೀರು ಅರಸಿ ಗ್ರಾಮದತ್ತ ಮುಖ ಮಾಡಿತ್ತು. ಅಷ್ಟರಲ್ಲಿಯೇ ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಲು ಬೆನ್ನತ್ತಿದ್ದವು. ಕೂಡಲೇ ಗ್ರಾಮಸ್ಥರು, ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ … Read more

ಕೋಣ ತಿವಿದು ಗಂಭೀರ ಗಾಯ, ಸ್ಥಳದಲ್ಲೆ ವ್ಯಕ್ತಿ ಸಾವು

SORABA-NEWS-UPDATE

ಸೊರಬ: ಕೋಣ (buffalo) ತಿವಿದು ತೀವ್ರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ಓಟೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮಂಚಪ್ಪ (60) ಸಾವಿಗೀಡಾದವರು. ಸಾಕಿದ್ದ ಕೋಣವನ್ನು ಮೇಯಿಸಲು ಹೊಲಕ್ಕೆ ಕರೆದೊಯ್ದಾಗ ಅದು ತಿವಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.  ಇದನ್ನೂ ಓದಿ » ಫ್ಯಾನಿಗೆ ನೇಣು ಬಿಗಿದುಕೊಳ್ಳಲು ರೆಡಿಯಾಗಿದ್ದ ವ್ಯಕ್ತಿ, ಅಷ್ಟರಲ್ಲಿ ಮನೆಗೆ ಬಂದರು ಪೊಲೀಸ್‌, ಆಗಿದ್ದೇನು? buffalo

ಸೊರಬದಲ್ಲಿ ಮಂಜಮ್ಮ ಅಂತ್ಯಕ್ರಿಯೆ, ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿ ಹಲವರಿಂದ ಅಂತಿಮ ದರ್ಶನ

BY-Vijayendra-Araga-Jnanendra-Payed-last-respects-to-Haratalu-Halappa-Mother

ಸೊರಬ: ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ನಿವಾಸದಲ್ಲಿ ಶನಿವಾರ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದ್ದು, ಸ್ವಗ್ರಾಮ ಸೊರಬ ತಾಲೂಕಿನ ಹೊಳೆಕೊಪ್ಪದಲ್ಲಿ ಭಾನುವಾರ ಸಕಲ ವಿಧಿಗಳೊಂದಿಗೆ ಅಂತ್ಯ ಸಂಸ್ಕಾರ (Last Rites) ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಸೊರಬ, ಸಾಗರ, ಹೊಸನಗರ ಕ್ಷೇತ್ರದ ರಾಜಕೀಯ ಗಣ್ಯರು ಮತ್ತು ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತಾಪ ಸೂಚಿಸಿದರು. ಇದನ್ನೂ … Read more