ವಿದ್ಯುತ್ ಶಾಕ್’ಗೆ ಒಳಗಾಗಿದ್ದ ತಮ್ಮನನ್ನು ರಕ್ಷಿಸಿದ ಬಾಲಕಿ, ಸಮಯಪ್ರಜ್ಞೆ ಮೆರೆದ ಬಾಲಕಿಗೆ ಶಹಬ್ಬಾಸ್ ಎಂದ ಜನ

SORABA-NEWS

ಶಿವಮೊಗ್ಗ ಲೈವ್.ಕಾಂ | SORABA NEWS | 11 ನವೆಂಬರ್ 2021 ಶಾಲೆಯಲ್ಲಿ ಶಿಕ್ಷಕರು ಹೇಳಿಕೊಟ್ಟ ಪಾಠ ನೆನಪು ಮಾಡಿಕೊಂಡು ಸಮಯಪ್ರಜ್ಞೆ ಮೆರೆದ ಬಾಲಕಿ ತನ್ನ ತಮ್ಮನನ್ನು ರಕ್ಷಿಸಿದ್ದಾಳೆ. ವಿದ್ಯುತ್ ಶಾಕ್’ಗೆ ಒಳಗಾಗಿದ್ದ ತಮ್ಮನನ್ನು ಅಕ್ಕ ರಕ್ಷಣೆ ಮಾಡಿದ್ದು, ಜನರು ಬೆನ್ನು ತಟ್ಟಿದ್ದಾರೆ. ಸೊರಬ ತಾಲೂಕು ಉರುಗನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ತಮ್ಮ ಧನುಷ್’ಗೆ ವಿದ್ಯುತ್ ಶಾಕ್ ತಗುಲಿತ್ತು. ಆಕ್ಕ ಪ್ರಾರ್ಥನಾ ತಮ್ಮನನ್ನು ರಕ್ಷಿಸಿದ್ದಾಳೆ. ಹೇಗಾಯ್ತು ಘಟನೆ? ಮನೆಯಲ್ಲಿ ಟಿವಿಗೆ ಅಳವಡಿಸಿದ್ದ ವೈರ್ ತಗುಲಿ ತಮ್ಮ ಧನುಷ್’ಗೆ ವಿದ್ಯುತ್ … Read more

ಶಿವಮೊಗ್ಗ ಲೈವ್ – ಪೆಟ್ರೋಲ್ ಮತ್ತಷ್ಟು ದುಬಾರಿ | ಸಾಗರ ರಸ್ತೆಯಲ್ಲಿ ಅಪಘಾತ | ರಸ್ತೆ, ಸರ್ಕಲ್‌ಗೆ ಪುನೀತ್ ಹೆಸರು

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021 ಒಂದೇ ಕ್ಲಿಕ್’ನಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಸುದ್ದಿ ನೀಡುವ ಪ್ರಯತ್ನವಿದು. ಪ್ರತಿ ಸುದ್ದಿಯ ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ. ಬ್ಯಾಕ್ ಬಟನ್ ಒತ್ತಿದರೆ ಮತ್ತೆ ಇದೆ ಪೇಜ್’ಗೆ ಬರಬಹುದು. ಬಳಿಕ ಮತ್ತೊಂದು ಸುದ್ದಿಯನ್ನು ಓದಬಹುದು. ಸಮಗ್ರ ಶಿವಮೊಗ್ಗ ನಿಮ್ಮ ಬೆರಳ ತುದಿಯಲ್ಲೇ ಲಭ್ಯ. NEWS 1 ದೀಪಾವಳಿ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇವತ್ತು … Read more

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ, ಉತ್ತಮ ಸ್ಥಾನಮಾನದ ಬಗ್ಗೆ ಸುಳಿವು

231021 Siddaramaiah at Soraba kubatur at bangarappa house

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದರು. ಮಧು ಬಂಗಾರಪ್ಪ ಅವರು ಈಗ ಕಾಂಗ್ರೆಸ್ ಸೇರ್ಪಡೆ ಸೂಕ್ತ ನಿರ್ಧಾರವಾಗಿದೆ. ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ | ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ ಸೊರಬ ತಾಲೂಕು ಕುಬಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವಾಗ ಇದೆ ರೀತಿಯ … Read more

ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ

231021 Siddaramaiah at Soraba With Madhu Bangarappa

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೊರಬದಲ್ಲಿ ವಾಸ್ತವ್ಯ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನಿವಾಸದಲ್ಲಿ ರಾತ್ರಿ ತಂಗಿದ್ದ ಸಿದ್ಧರಾಮಯ್ಯ ಅವರು, ಬೆಳಗ್ಗೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದಾರೆ. ಹಾನಗಲ್ ವಿಧಾನಸಭೆ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ರಾತ್ರಿ ಸೊರಬದ ಕುಬಟೂರಿಗೆ ಬಂದಿದ್ದಾರೆ. ಬಂಗಾರಪ್ಪ ನಿವಾಸದಲ್ಲಿ ವಾಸ್ತವ್ಯ ಮಾಡಿದ್ದಾರೆ. ಬೆಳಗ್ಗೆ ಕುಬಟೂರಿನ ಮನೆ ಆವರಣದಲ್ಲಿ ಮಧು ಬಂಗಾರಪ್ಪ ಅವರೊಂದಿಗೆ ಸಿದ್ದರಾಮಯ್ಯ ವಾಕಿಂಗ್ ಮಾಡಿದ್ದಾರೆ. … Read more

ರಸ್ತೆ ಡಿವೈಡರ್’ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು

041021 Bike Accident At Anavatti City

ಶಿವಮೊಗ್ಗ ಲೈವ್.ಕಾಂ | ANAVATTI NEWS | 04 ಅಕ್ಟೋಬರ್ 2021 ರಸ್ತೆ ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ್ದಾನೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಘಟನೆ ಸಂಭವಿಸಿದೆ. ಸಮನವಳ್ಳಿ ಗ್ರಾಮದ ಕಾರ್ತಿಕ್ ಗುರಪ್ಪ (21) ಮೃತ ಬೈಕ್ ಸವಾರ. ಕೋಟಿಪುರದ ಕಡೆಯಿಂದ ಆನವಟ್ಟಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರ್ತಿಕ್ ಗುರಪ್ಪ ತಲೆಗೆ ತೀವ್ರ ಗಾಯವಾಗಿದೆ. ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಅಸುನೀಗಿದ್ದಾನೆ. ಕಾರ್ತಿಕ್, ಕರ್ನಾಟಕ ರಕ್ಷಣಾ ವೇದಿಕೆ … Read more

ಪ್ರೌಢಶಾಲೆ ಜಾಗ ಪರಭಾರೆ, ಬೀದಿಗಿಳಿದರು ಹನ್ನೊಂದು ಹಳ್ಳಿಯ ಜನ

300921 Udri Soraba People Protest

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ತಾಲೂಕಿನ ಉದ್ರಿ ಗ್ರಾಮದ ಪ್ರೌಢಶಾಲಾ ಕಟ್ಟಡ ನಿರ್ಮಾಣ ಹಾಗೂ ಅಭಿವೃದ್ಧಿಗೆಂದು ದಾನ ನೀಡಿದ ಜಾಗ ಪರಭಾರೆ ಆಗಿದೆ ಎಂದು ಆರೋಪಿಸಿ ಉದ್ರಿ ಗ್ರಾಪಂ ವ್ಯಾಪ್ತಿಯ ಜನರು ಗ್ರಾಮದ ಮುಖ್ಯ ರಸ್ತೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ, ನಂತರ ಶಾಲಾವರಣದಲ್ಲಿ ಸಭೆ ನಡೆಸಿದರು. ಭೂದಾನಿ, ಸಣ್ಣ ಬಸವಲಿಂಗಪ್ಪ ಮಾತನಾಡಿ, 45 ವರ್ಷಗಳ ಹಿಂದೆ ಉದ್ರಿ ಗ್ರಾಮದ ಪ್ರೌಢಶಾಲಾ ಕಟ್ಟಡ ನಿರ್ಮಾಣ ಹಾಗೂ ಅಭಿವೃದ್ಧಿಗೆಂದು ಹನುಮಂತ ರಾವ್ … Read more

ಶಿವಮೊಗ್ಗದಲ್ಲಿ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆ, ಹೆಚ್ಚುತ್ತಿದೆ ಆರೋಗ್ಯ ಸಮಸ್ಯೆ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕೆಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನು ಕೆಲವು ಕಡೆ ಮಳೆ, ಬಿಸಿಲಿನ ಕಣ್ಣಾ ಮುಚ್ಚಾಲೆ ಮುಂದುವರೆದಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 35.03 ಮಿ.ಮೀ ಮಳೆಯಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 9.60 ಮಿ.ಮೀ, ಭದ್ರಾವತಿಯಲ್ಲಿ 7.20 ಮಿ.ಮೀ, ತೀರ್ಥಹಳ್ಳಿಯಲ್ಲಿ 25. 80 ಮಿ.ಮೀ, ಸಾಗರದಲ್ಲಿ 17.40 ಮಿ.ಮೀ, ಶಿಕಾರಿಪುರದಲ್ಲಿ 7.40 ಮಿ.ಮೀ, … Read more

ಗ್ರಾಮ ಪಂಚಾಯಿತಿ ಬೀಗ ಒಡೆದು ಪಿಡಿಒ ಕೊಠಡಿಯಲ್ಲಿ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SORABA NEWS | 3 ಸೆಪ್ಟೆಂಬರ್ 2021 ಗ್ರಾಮ ಪಂಚಾಯಿತಿ ಕಟ್ಟಡವೊಂದರ ಬೀಗ ಒಡೆದ ಕಳ್ಳರು, ಕಂಪ್ಯೂಟರ್ ಉಪಕರಣಗಳನ್ನು ಕದ್ದೊಯ್ದಿದ್ದಾರೆ. ಸೊರಬ ತಾಲೂಕು ಮುಟಗುಪ್ಪೆ ಗ್ರಾಮ ಪಂಚಾಯಿತಯಲ್ಲಿ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯಿತಿ ಪಿಡಿಒ ಕಚೇರಿಯಲ್ಲಿದ್ದ ಕಂಪ್ಯೂಟರ್ ಮಾನಿಟರ್, ಕೀ ಬೋರ್ಡ್, ಮೌಸ್, ಕಬೋರ್ಡ್’ನಲ್ಲಿದ್ದ ವೆಬ್ ಕ್ಯಾಮರಾ, ಡಿಜಿ ಕ್ಯಾಮರಾ, ಆಡಳಿತಾಧಿಕಾರಿ ಕೊಠಡಿಯಲ್ಲಿದ್ದ ಕಂಪ್ಯೂಟರ್ ಮಾನಿಟರ್, ಕೀ ಬೋರ್ಡ್, ಮೌಸ್, ಸಿಸಿಟಿವಿಯ ಡಿವಿಆರ್ ಕಳ್ಳತನ ಮಾಡಲಾಗಿದೆ. ಕಳುವಾದ ವಸ್ತುಗಳ ಅಂದಾಜು ಮೌಲ್ಯ 50 … Read more

ಹೊಟ್ಟೆನೋವು ತಾಳಲಾರದೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 2 ಸೆಪ್ಟೆಂಬರ್ 2021 ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬರು ನೆಡುತೋಪಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಪತ್ಯಪ್ಪ (60) ಎಂಬುವವರು ಮೃತರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಗಣಪತ್ಯಪ್ಪ ಅವರ ಇತ್ತೀಚೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೂ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ನ್ಯಾರ್ಸಿ ಗ್ರಾಮದ ಹೊರವಲಯದ ನೆಡುತೋಪಿನಲ್ಲಿ ಗಣಪತ್ಯಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೊರಬ ಠಾಣೆಯಲ್ಲಿ … Read more

ಗಂಟಲು ನೋವು ತಾಳಲಾರದೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 29 ಆಗಸ್ಟ್ 2021 ಗಂಟಲು ನೋವು ತಾಳಲಾರದೆ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುನೀತಾ ಕೋಟ್ಯಪ್ಪ (25) ನೇಣಿಗೆ ಶರಣಾದ ಮಹಿಳೆ. ಸುನೀತಾ ಕೋಟ್ಯಪ್ಪ ಅವರು ಕೆಲ ಸಮಯದಿಂದ ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಹಾಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆದರೆ ನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ | ರಿಪ್ಪನ್ ಪೇಟೆ ಬಳಿ ಕಾಡಲ್ಲಿ … Read more