ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

Shivamogga Rain General Image DVS Road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಶಿವಮೊಗ್ಗದ ಜಿಲ್ಲೆಯ ವಿವಿಧೆಡೆ ಇವತ್ತು ಮಳೆ ಪ್ರಮಾಣ ತಗ್ಗಿದೆ. ತಂಡಿ ಗಾಳಿ ಬೀಸುತ್ತಿದ್ದು, ಆಗಾಗ ಜಿಟಿಜಿಟಿ ಮಳೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 13.21 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 3.80 ಮಿ.ಮೀ, ಭದ್ರಾವತಿಯಲ್ಲಿ 5.60 ಮಿ.ಮೀ, ತೀರ್ಥಹಳ್ಳಿಯಲ್ಲಿ 46.80 ಮಿ.ಮೀ, ಸಾಗರದಲ್ಲಿ 17.40 ಮಿ.ಮೀ, ಶಿಕಾರಿಪುರದಲ್ಲಿ 3.70 ಮಿ.ಮೀ, ಸೊರಬದಲ್ಲಿ 15.20 ಮಿ.ಮೀ, ಹೊಸನಗರದಲ್ಲಿ 98.80 ಮಿ.ಮೀ ಮಳೆಯಾಗಿದೆ. ತಗ್ಗಿದ … Read more

ಪೊಲೀಸ್ ಬಲೆಗೆ ಬಿತ್ತು ಅತ್ತೆ, ಅಳಿಯ ಜೋಡಿ, ವಿಚಾರಣೆ ವೇಳೆ ಬಯಲಾಯ್ತು ಹಳೆ ಕೇಸ್, ಹೊಸ ಪ್ಲಾನ್

140721 Soraba Theft Case Two Arrested 1

ಶಿವಮೊಗ್ಗ ಲೈವ್.ಕಾಂ | SORABA NEWS | 14 ಜುಲೈ 2021 ಮನೆಯಲ್ಲಿ ಯಾರು ಇಲ್ಲದ ವೇಳೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರವಾಡ ಗ್ರಾಮದ ಮರಿಯಪ್ಪ ಗೋಪಿನಾಯ್ಕ್ ಹಾಗೂ ಕಮಲಮ್ಮ ನಿಂಗಬಸಪ್ಪ ಬಂಧಿತ ಆರೋಪಿಗಳು. ಇವರಿಂದ 37 ಗ್ರಾಂ ಬಂಗಾರ ಮತ್ತು 200 ಗ್ರಾಂ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ … Read more

ಸಾಲ ಬಾಧೆ, ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Farmer Suicide General Image 1

ಶಿವಮೊಗ್ಗ ಲೈವ್.ಕಾಂ | SORABA NEWS | 11 ಜುಲೈ 2021 ಸಾಲ ಬಾಧೆಯಿಂದ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ಭೈರೆಕೊಪ್ಪದಲ್ಲಿ ಘಟನೆ ಸಂಭವಿಸಿದೆ. ರವಿಗೌಡ (50) ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನು ಹೊಂದಿರುವ ರವಿಗೌಡ ಅವರು ಕೃಷಿ ಚಟುವಟಿಕೆ ನಡೆಸುತ್ತಿದ್ದರು. ರಾಷ್ಟ್ರೀಕೃತ ಬ್ಯಾಂಕ್ ಒಂದರಿಂದ ಪಡೆದಿದ್ದ ಸಾಲ ಹಿಂತಿರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ … Read more

ಸ್ವಸಹಾಯ ಸಂಘದ ಸಾಲ ತೀರಿಸಲು ಮನೆ ಬೀಗ ಒಡೆದ, ಕೊನೆಗೆ ತೀರಿಸಿದ ಸಾಲವೇ ಸಾಕ್ಷಿಯಾಗಿ ಪೊಲೀಸರಿಗೆ ಸಿಕ್ಕಿಬಿದ್ದ

040721 Theif Arrest in Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 4 ಜುಲೈ 2021 ಸ್ವಸಹಾಯ ಸಂಘದಲ್ಲಿ ಮಾಡಿದ ಸಾಲ ತೀರಿಸಲು ಮನೆಯ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಚಿನ್ನಾಭರಣ ಸಮೇತ ಸೊರಬ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಾಲ್ಲೂಕಿನ ಛತ್ರದಹಳ್ಳಿ ಗ್ರಾಮದ ಚಂದ್ರಪ್ಪ ಗಣೇಶಪ್ಪ (30) ಬಂಧಿತ ಆರೋಪಿ. ಸಾಲ ತೀರಿಸಲು ಕಳವು ಮಾಡಿದ್ದ ಚಂದ್ರಪ್ಪ, ಅದೆ ಸಾಲ ತೀರಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಆರಿದ್ರ ಮಳೆಗೆ ಹಬ್ಬಕ್ಕೆ ಹೋದಾಗ ಕಳ್ಳತನ ಜೂನ್‍  29ರಂದು ಛತ್ರದಹಳ್ಳಿಯ ರಮೇಶ್ … Read more

ವಿಧಾನಸೌಧದ ಮುಂದೆ ಬಸವಣ್ಣನ ಪುತ್ಥಳಿ, ಜಡೆ ಸಂಸ್ಥಾನ ಮಠದ ಶ್ರೀಗಳಿಂದ ಹೇಳಿಕೆ ಬಿಡುಗಡೆ

soraba map graphics

ಶಿವಮೊಗ್ಗ ಲೈವ್.ಕಾಂ | SORABA NEWS | 27 JUNE 2021 ವಿಧಾನಸೌಧದ ಆವರಣದಲ್ಲಿ ಶ್ರೀ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಸ್ವಾಗತಿಸಿದ್ದಾರೆ. 12ನೇ ಶತಮಾನದ ಅವಧಿಯಲ್ಲಿ ವಚನಕಾರ ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ್ದಾರೆ. ಸಮಾನತೆಯ ಹರಿಕಾರರಾದ ಶ್ರೀ ಬಸವೇಶ್ವರರ ಪುತ್ಥಳಿಯನ್ನು ರಾಜ್ಯದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಕುಟಪ್ರಾಯವಾಗುತ್ತದೆ ಎಂದು ಮುಖ್ಯಮಂತ್ರಿಗಳು … Read more

ಎತ್ತುಗಳಿಗೆ ನೀರು ಕುಡಿಸಲು ಹೋದ ಯುವಕ ನೀರು ಪಾಲು

250621 soraba youth drowned in varada river 1

ಶಿವಮೊಗ್ಗ ಲೈವ್.ಕಾಂ | SORABA NEWS | 25 JUNE 2021 ಎತ್ತುಗಳಿಗೆ ನೀರು ಕುಡಿಸಲು ಹೋದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಭದ್ರಾಪುರ ಸಮೀಪದ ವರದಾ ನದಿಯಲ್ಲಿ ನಡೆದಿದೆ. ಭದ್ರಾಪುರ ಗ್ರಾಮದ ನಿವಾಸಿ ಮಹೇಶ ಈರಪ್ಪ ದೊಡ್ಡ ಕುಂಬಾರ ಮನೆ ( 24) ಮೃತ ದುರ್ದೈವಿ. ಈತ ವರದಾ ನದಿಗೆ ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಆಕಸ್ಮಿಕವಾಗಿ ಜಾರಿ ನದಿಗೆ ಬಿದ್ದಿದ್ದಾನೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸತತ‌ ಪ್ರಯತ್ನದಿಂದ ಇವತ್ತು … Read more

ಭಾರಿ ಮಳೆಯಾಗುತ್ತಿದ್ದರೂ ಸೊರಬದ ಈ ವಾರ್ಡ್ ಜನರು ಟ್ಯಾಂಕರ್ ನೀರಿಗೆ ಕಾಯಬೇಕು

160621 Soraba Tanker Water Supply 1

ಶಿವಮೊಗ್ಗ ಲೈವ್.ಕಾಂ | SORABA NEWS | 16 JUNE 2021 ಭಾರಿ ಮಳೆಯಾಗುತ್ತಿದ್ದರೂ ಈ ಏರಿಯಾದ ಜನರು ಟ್ಯಾಂಕರ್‍ ನೀರಿಗೆ ಕಾದು ಕೂರುವಂತಾಗಿದೆ. ಸೊರಬ ಪಟ್ಟಣದ 10ನೇ ವಾರ್ಡ್‍ ನಿವಾಸಿಗಳು ಈ ದುಸ್ಥಿತಿ ಇದೆ. ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಆದರೆ, 10 ನೇ ವಾರ್ಡ್ ನಿವಾಸಿಗಳು ಕುಡಿಯುವ ನೀರಿಗೆ ಪುರಸಭೆಯಿಂದ ಪೂರೈಸುತ್ತಿರುವ ಟ್ಯಾಂಕರ್ ನೀರಿಗೆ ಕಾಯುವ ಸ್ಥಿತಿ ನಿರ್ಮಾಣವಾಗಿರುವುದು ದುರ್ದೈವ. ಓಂ ಶಾಂತಿ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಮಾರ್ಕೆಟ್ ರಸ್ತೆಯ … Read more

ದೇವಸ್ಥಾನದ ಹುಂಡಿ ಒಡೆದು ನೋಟುಗಳನ್ನಷ್ಟೆ ಕದ್ದೊಯ್ದ ಕಳ್ಳರು

ಶಿವಮೊಗ್ಗ ಲೈವ್.ಕಾಂ | ANAVATTI NEWS | 14 JUNE 2021 ದೇವಸ್ಥಾನದ ಹುಂಡಿ ಒಡೆದ ಕಳ್ಳರು ನೋಟುಗಳನ್ನಷ್ಟೆ ಕದ್ದೊಯ್ದಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೆ ಮಾರ್ಕೆಟ್ ಸರ್ಕಲ್ ಬಳಿ ಇರುವ ಬಾನಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದಿದ್ದಾರೆ. ಚಿಲ್ಲರೆ ಹಣವನ್ನು ಬಿಟ್ಟು ನೋಟುಗಳನ್ನು ಮಾತ್ರ ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಕಳ್ಳತನಕ್ಕೆ ಬ್ರೇಕ್ ಹಾಕಲು ಈ ಭಾಗದಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ಮುಂದೆ ಕರೋನ ಪರೀಕ್ಷೆ … Read more

ಸೊರಬ ತಾಲೂಕಿನಲ್ಲಿ ಕರೋನ ಪಾಸಿಟಿವ್, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕೇಸ್? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಸೊರಬ ತಾಲೂಕಿನ ಹಳ್ಳಿ ಹಳ್ಳಿಗೂ ಕರೋನ ವ್ಯಾಪಿಸಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೆಲವು ಕಡೆ ಲಾಕ್ ಡೌನ್ ಮಾಡಲಾಗಿದೆ. ಸೊರಬ ತಾಲೂಕಿನ ಗ್ರಾಮೀಣ ಭಾಗದಲ್ಲಿ 590ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಸೊರಬ ತಾಲೂಕಿನ ಹಳೆ ಸೊರಬದಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು, ಆನವಟ್ಟಿ, ತತ್ತೂರು ಯಲ್ಲಿ ಮೂವತ್ತಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಭಾರಂಗಿ, ಚಂದ್ರಗುತ್ತಿ, … Read more

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 124 ಮಂದಿಗೆ ಕರೋನ, ಭದ್ರಾವತಿಯಲ್ಲೆ ಹೆಚ್ಚು, ಯಾವ್ಯಾವ ತಾಲೂಕಲ್ಲಿ ಎಷ್ಟಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021 ಒಂದೇ ವಾರದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಬಾರಿಗೆ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಶುಕ್ರವಾರ ಶಿವಮೊಗ್ಗ ಜಿಲ್ಲೆಯಲ್ಲಿ 124 ಮಂದಿಗೆ ಸೋಂಕು ತಗುಲಿದೆ. ಇನ್ನೊಬ್ಬ ಸೋಂಕಿತ ಸಾವನ್ನಪ್ಪಿದ್ದು, ಎರಡನೆ ಅಲೆಗೆ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಶುಕ್ರವಾರ 2965 ಮಂದಿಯ ಸ್ವ್ಯಾಬ್ ಪಡೆದುಕೊಳ್ಳಲಾಗಿದೆ. ಈ ಪೈಕಿ 2326 ಮಂದಿಗೆ ನೆಗೆಟಿವ್ ಬಂದಿದೆ. 124 ಮಂದಿಗೆ ಪಾಸಿಟಿವ್ ಬಂದಿದೆ. ಮತ್ತೊಂದೆಡೆ 50 ಮಂದಿ ಗುಣವಾಗಿದ್ದು, … Read more