‘ಎಲೆಕ್ಷನ್ ಮುಗಿಸಿ ಪ್ಯಾಕೇಜ್ ಟೂರ್ ಹೋದರು, ಅಭ್ಯರ್ಥಿಯಾದ್ರೂ ಪ್ಯಾಕೇಜ್ ಬರುವವರೆಗೆ ನನ್ನ ತಮ್ಮ ಕ್ಷೇತ್ರಕ್ಕೇ ಬಂದಿರಲಿಲ್ಲ’

Kumar Bangarappa Photo 1

ಶಿವಮೊಗ್ಗ ಲೈವ್.ಕಾಂ | 03 ಏಪ್ರಿಲ್ 2019 ಕರೆಕ್ಟಾದ ಪ್ಯಾಕೇಜ್ ಬಾರದೆ ಇದ್ದಿದ್ದರಿಂದಲೇ, ಮುಖ್ಯಮಂತ್ರಿ ಶಿವಮೊಗ್ಗ ಭೇಟಿ ವೇಳೆ ನನ್ನ ತಮ್ಮ ಕಾಣಿಸಲಿಲ್ಲ. ಪ್ಯಾಕೇಜ್ ಕುರಿತು ಸ್ಪಷ್ಟತೆ ಸಿಗುವವರೆಗೂ ಅಭ್ಯರ್ಥಿಯಾಗಿ ಅವರು ಕ್ಷೇತ್ರಕ್ಕೆ ಬರಲಿಲ್ಲ. ಹೀಗಂತ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಸೊರಬ ತಾಲೂಕು ಕೋಟಿಪುರ ಗ್ರಾಮದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರ್ ಬಂಗಾರಪ್ಪ, ವಿಧಾನಸಭೆ ಚುನಾವಣೆ ಬಳಿಕ ಪ್ಯಾಕೇಜ್ ಟೂರ್ ಹೋದವರು, ಮಧ್ಯರಾತ್ರಿ ಮೂರು … Read more

ಚಂದ್ರಗುತ್ತಿಯಲ್ಲಿ ಮುಜರಾಯಿ ಇಲಾಖೆ ಆಡಳಿತ ಕಟ್ಟಡ ಉದ್ಘಾಟನೆ, ಸುಸಜ್ಜಿತ ಪ್ರವಾಸಿ ತಾಣವಾಗಿ ರೂಪಿಸಲು ಪ್ಲಾನ್

ಶಿವಮೊಗ್ಗ ಲೈವ್.ಕಾಂ | 15 ಡಿಸೆಂಬರ್ 2018 ಚಂದ್ರಗುತ್ತಿಯಲ್ಲಿನಿರ್ಮಿಸಿರುವ ಮುಜರಾಯಿ ಇಲಾಖೆಯ ಆಡಳಿತ ಕಟ್ಟಡವನ್ನು ಶಾಸಕ ಕುಮಾರ್ ಬಂಗಾರಪ್ಪ ಇವತ್ತು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಚಂದ್ರಗುತ್ತಿಗೆ ಸೌಕರ್ಯ ಒದಗಿಸುವ ಮೂಲಕ ಸುಸಜ್ಜಿತ ಪ್ರವಾಸಿ ತಾಣವಾಗಿ ರೂಪಿಸುವುದಾಗಿಭರವಸೆ ನೀಡಿದರು.  ಹಬ್ಬ ಮತ್ತು ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಅವರಿಗೆಮೂಲ ಸೌಕರ್ಯದ ಅಗತ್ಯವಿದೆ. ಮೊದಲ ಹಂತದಲ್ಲಿ ಮುಜರಾಯಿತ ಇಲಾಖೆ ಯಾತ್ರಿ ನಿವಾಸ, ಆಡಳಿತ ಕಚೇರಿ, ಕಲ್ಯಾಣಮಂಟಪ, ಮಳಿಗೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿದೆ ಎಂದರು. ಶಿವಮೊಗ್ಗ … Read more

ನೂರು ಕ್ವಿಂಟಾಲ್ ಜೋಳ ಧಗಧಗ, ಶಾರ್ಟ್ ಸರ್ಕಿಟ್’ಗೆ ಎರಡೂವರೆ ಎಕರೆ ಕಬ್ಬು ಭಸ್ಮ

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ಪ್ರತ್ಯೇಕ ಪ್ರಕರಣದಲ್ಲಿ ಕಬ್ಬು ಮತ್ತು ನೂರು ಕ್ವಿಂಟಾಲ್ ಜೋಳ ಬೆಂಕಿಗೆ ಆಹುತಿಯಾಗಿದೆ. ಇದರಿಂದ ರೈತರಿಗೆ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ನೂರು ಕ್ವಿಂಟಾಲ್ ಜೋಳಕ್ಕೆ ಬೆಂಕಿ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು ನೂರು ಕ್ವಿಂಟಾಲ್’ನಷ್ಟು, ಕಟಾವು ಮಾಡಿದ್ದ ಮೆಕ್ಕೆ ಜೋಳ ಸುಟ್ಟು ಹೋಗಿದೆ. ತಾಲೂಕಿನ ಹೆಗ್ಗೋಡು ಗ್ರಾಮದ ಮಲ್ಲಿಕಾರ್ಜುನಗೌಡ ಎಂಬುವವರಿಗೆ ಸೇರಿದ ಮೆಕ್ಕೆ ಜೋಳಕ್ಕೆ ಬೆಂಕಿ ತುಗಿಲಿದೆ. ನಾಲ್ಕು ಎಕರೆಯಲ್ಲಿ ಬೆಳೆದ ಮೆಕ್ಕೆ ಜೋಳವನ್ನು ಕಟಾವು ಮಾಡಿ, ರಾಶಿ … Read more