ಸೊರಬದ ಭಾರಂಗಿ ಗ್ರಿಡ್‌ಗೆ ದಿಢೀರ್‌ ಮುತ್ತಿಗೆ ಹಾಕಿದ ರೈತರು, ಕಾರಣವೇನು?

020923-Farmers-protest-in-Soraba-Bharangi-MESCOM-Unite.webp

SHIVAMOGGA LIVE NEWS | 2 SEPTEMBER 2023 SORABA : ಸಮರ್ಪಕ ವಿದ್ಯುತ್‌ ಪೂರೈಕೆ ಮಾಡುವಂತೆ ಆಗ್ರಹಿಸಿ ರೈತರು (Farmers) ಭಾರಂಗಿ ವಿದ್ಯುತ್‌ ಗ್ರಿಡ್‌ಗೆ ದಿಢೀರ್‌ ಮುತ್ತಿಗೆ ಹಾಕಿದರು. ಸೊರಬ ತಾಲೂಕು ಆನವಟ್ಟಿ ಹೋಬಳಿಯ ಭಾರಂಗಿ ಗ್ರಿಡ್‌ನಿಂದ ತ್ರಿ ಫೇಸ್‌ ವಿದ್ಯುತ್‌ ಅನ್ನು ಸಮಪರ್ಕವಾಗಿ ಪೂರೈಕೆ ಮಾಡುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಮಳೆ ಇಲ್ಲದೆ ಬೆಳೆ ಒಣಗುತ್ತಿವೆ. ಈ ಮಧ್ಯೆ ಸರಿಯಾಗಿ ವಿದ್ಯುತ್‌ ಪೂರೈಕೆ (power supply) ಮಾಡದೆ ಹೊಲಕ್ಕೆ ನೀರು ಹಾಯಿಸಲು ಆಗುತ್ತಿಲ್ಲ. ಇದರಿಂದ … Read more

‘ಮೆಕ್ಕೆಜೋಳಕ್ಕೆ ಎಕರೆಗೆ 25 ಸಾವಿರ, ಭತ್ತಕ್ಕೆ 30 ಸಾವಿರ ಪರಿಹಾರ ಬೇಕು, ತಾಲೂಕು ಬರಪೀಡಿತ ಅಂತಾ ಘೋಷಿಸಬೇಕುʼ

020923-Soraba-Farmers-protest-in-front-of-Tahasildhar-office.webp

SHIVAMOGGA LIVE NEWS | 2 SEPTEMBER 2023 SORABA : ತಾಲೂಕನ್ನು ಬರಪೀಡಿತ (drought prone) ಪ್ರದೇಶವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ (Farmer) ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸೊರಬ ತಾಲೂಕಿನಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಹಾನಿಗೀಡಾಗಿದ್ದು, ರೈತರ ಬದುಕು ದುಸ್ತರವಾಗಿದೆ. ದೇಶಕ್ಕೆ ಅನ್ನ ನೀಡುವ ರೈತರನ್ನು ಸರ್ಕಾರಗಳು ಕೈ … Read more

ಚಂದ್ರಗುತ್ತಿ ರೇಣುಕಾಂಬ ದೇಗುಲದಲ್ಲಿ ನೂಲು ಹುಣ್ಣಿಮೆ, ಲಕ್ಷ ಲಕ್ಷ ಭಕ್ತರು ಭಾಗಿ, ಹೇಗಿತ್ತು ಪೂಜಾ ವೈಭವ?

010923-Nulu-Hunnime-at-Chandragutti-temple.webp

SHIVAMOGGA LIVE NEWS | 1 SEPTEMBER 2023 SORABA : ಶ್ರಾವಣ ಮಾಸದ ನೂಲು ಹುಣ್ಣಿಮೆ (Nulu Hunnime) ನಿಮಿತ್ತ ಗುರುವಾರ ಲಕ್ಷಾಂತರ ಭಕ್ತರು ಪುರಾಣ ಪ್ರಸಿದ್ಧ ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬೆ ದೇವಸ್ಥಾನಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಹೊರ ಜಿಲ್ಲೆಗಳಿಂದಲು ಭಕ್ತರ ದಂಡು ಸೊರಬ, ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಹಾವೇರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಸಿದ್ದಾಪುರ ಸೇರಿದಂತೆ ಉತ್ತರ ಕರ್ನಾಟಕ … Read more

ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ, ಎಲ್ಲೆಲ್ಲಿ ಹೇಗಿದೆ ಪೂಜೆ?

Nagara-Panchami-in-Shimoga-Ravindra-Nagara-Ganapathi-Temple

SHIVAMOGGA LIVE NEWS | 21 AUGUST 2023 SHIMOGA : ಶ್ರಾವಣ (Shravana) ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು (Nagara Panchami) ಶಿವಮೊಗ್ಗ ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ. ಭಕ್ತರು ನಾಗ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆ ಬೇಡುತ್ತಿದ್ದಾರೆ. ಶಿವಮೊಗ್ಗದ ರವೀಂದ್ರ ನಗರ (Ravindra Nagara) ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ನಾಗದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ನಾಗರಕಲ್ಲಿಗೆ ಹಾಲು ಎರೆದು, ನೈವೇದ್ಯ ಮಾಡಿ ಪೂಜೆ ಸಲ್ಲಿಸುತ್ತಿದಾರೆ. ಗೋಪಾಳದ … Read more

ಕಾಂಗ್ರೆಸ್‌ ಪಕ್ಷದಿಂದ 3 ಗ್ರಾಮ ಪಂಚಾಯಿತಿ ಸದಸ್ಯರು, ಇಬ್ಬರು ಕಾರ್ಯಕರ್ತರು, 6 ವರ್ಷ ಉಚ್ಛಾಟನೆ

-Congress-Party-Office-Shimoga

SHIVAMOGGA LIVE NEWS | 19 AUGUST 2023 SORABA : ಪಕ್ಷದ ಆದೇಶ ಧಿಕ್ಕರಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆ ಸೊರಬ ತಾಲೂಕಿನ ಮೂವರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರನ್ನು (Party workers) ಆರು ವರ್ಷ ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆ (Expelled) ಮಾಡಿ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಆದೇಶಿಸಿದ್ದಾರೆ. ಸೊರಬ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಉಳವಿ ಮತ್ತು ಕಾನಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಬ್ಲಾಕ್‌ ಕಾಂಗ್ರೆಸ್‌ … Read more

ಚಂದ್ರಗುತ್ತಿ ದೇವಸ್ಥಾನಕ್ಕೆ ಶಿವಮೊಗ್ಗ ಎಸ್‌ಪಿ ಭೇಟಿ, ಗ್ರಾಮಸ್ಥರೊಂದಿಗೆ ಸಭೆ, 6 ಪ್ರಮುಖ ಸಂಗತಿ ಪ್ರಸ್ತಾಪ

190823-SP-Mithun-Kumar-IPS-visit-Chandragutti-Temple-in-Soraba.

SHIVAMOGGA LIVE NEWS | 19 AUGUST 2023 SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿಯ  ಶ್ರೀ ರೇಣುಕಾಂಬ ದೇವಿ ದೇವಸ್ಥಾನಕ್ಕೆ (Chandragutti Renukamba Temple) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಭೇಟಿ ನೀಡಿದ್ದರು. ಈಚೆಗೆ ದೇವಸ್ಥಾನದಲ್ಲಿ ಕಳ್ಳತನ (Theft) ಯತ್ನ ನಡೆದಿತ್ತು. ಈ ಹಿನ್ನೆಲೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ಮಹತ್ವ ಪಡೆದಿತ್ತು. ಇನ್ನು, ಭೇಟಿ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಇದನ್ನೂ ಓದಿ- ಚಂದ್ರಗುತ್ತಿ ದೇವಸ್ಥಾನದಲ್ಲಿ … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಶ್ರಾವಣ ಪೂಜೆ, ಹೋಮ, ನವಗ್ರಹ ಪೂರ್ವಕ ಸಂಪ್ರೋಕ್ಷಣೆ

Special-Pooje-at-Chandragutti-temple-in-Soraba

SHIVAMOGGA LIVE NEWS | 18 AUGUST 2023 SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ (Special Rituals) ಪೂಜೆ ಹಾಗೂ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಹೋಮ ನೆರವೇರಿದವು. ಆ.2ರಂದು ದುಷ್ಕರ್ಮಿಗಳು ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಿ, ಕಳ್ಳತನ ಪ್ರಯತ್ನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶ್ರಾವಣ ಮಾಸದ ಮೊದಲನೇ ದಿನ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಕಾರ್ಯಕ್ರಮಗಳು ನಡೆದವು. ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ … Read more

ಮನೆ ಮೇಲೆ ಪೊಲೀಸ್‌ ದಾಳಿ, ಹಿತ್ತಲಲ್ಲಿ ಅಡಿಕೆ ಗಿಡಗಳ ಮಧ್ಯೆ ಶೋಧ, ಮಾಲೀಕನ ವಿರುದ್ಧ ದಾಖಲಾಯ್ತು ಕೇಸ್‌

Police-Raid-on-a-house-at-Kadasuru-In-soraba-taluk

SHIVAMOGGA LIVE NEWS | 14 AUGUST 2023 SORABA : ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ (Police Raid) ನಡೆಸಿದ ಪೊಲೀಸರು ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ್ದಾರೆ. 525 ಗ್ರಾಂ ತೂಕದ ಗಾಂಜಾ ಗಿಡಗಳು ಸಿಕ್ಕಿವೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೊರಬ ತಾಲೂಕು ಕಡಸೂರು (Kadasuru) ಗ್ರಾಮದ ರಾಮಚಂದ್ರಪ್ಪ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮನೆಯ ಹಿತ್ತಲಿನಲ್ಲಿ ಅಡಿಕೆ ಗಿಡಗಳ ಮಧ್ಯೆ ಸಿಮೆಂಟ್‌ ಚೀಲದಲ್ಲಿ ಮಣ್ಣು ತುಂಬಿ … Read more

ಚುನಾವಣೆ ಹಿಂದಿನ ದಿನ ಗ್ರಾಮ ಪಂಚಾಯಿತಿ ಸದಸ್ಯೆ ಕೊನೆಯುಸಿರು

140823 Soraba Barangi Grama panchayath memeber shashikala

SHIVAMOGGA LIVE NEWS | 14 AUGUST 2023 SORABA : ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನ ದಿನ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆಯೊಬ್ಬರು ಮೃತಪಟ್ಟಿದ್ದಾರೆ. ಶಶಿಕಲಾ ಸಾಹುಕಾರ (47) ಮೃತ ಗ್ರಾಮ ಪಂಚಾಯಿತಿ ಸದಸ್ಯೆ. ಅಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಲು ಇವರಿಗೆ ಅವಕಾಶವಿತ್ತು. ಆನವಟ್ಟಿ (Anavatti) ಹೋಬಳಿ ಭಾರಂಗಿ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆ ಶಶಿಕಲಾ ಸಾಹುಕಾರ ಅವರು ಅನಾರೋಗ್ಯದಿಂದ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನದಿಂದ ಶಶಿಕಲಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅವರನ್ನು … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌, ಮೂವರು ಅರೆಸ್ಟ್‌, ವಿಚಾರಣೆ ವೇಳೆ ಹೇಳಿದ್ದೇನು?

Three-Arrest-in-Chandragutti-Temple-Theft-Attempt

SHIVAMOGGA LIVE NEWS | 14 AUGUST 2023 CHANDRAGUTTI : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ (RENUKAMBA TEMPLE) ನಡೆದ ಕಳ್ಳತನ ಯತ್ನ (Theft Attempt) ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾರೆಲ್ಲ ಅರೆಸ್ಟ್‌ ಆಗಿದ್ದಾರೆ? ಆ.3ರಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಕಳ್ಳತನಕ್ಕೆ … Read more