ಇನ್ನೂ ಆರೇಳು ತಿಂಗಳು ಕರೋನದೊಂದಿಗೆ ಬದುಕಲು ಸಿದ್ಧವಾಗಿ, ಶಿವಮೊಗ್ಗದಲ್ಲಿ ಆರೋಗ್ಯ ಸಚಿವರ ಎಚ್ಚರಿಕೆ
ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರೋನಾ ಜಿಲ್ಲೆಗೆ ಕಾಲಿರಿಸಿಲ್ಲ. ಆದರೆ ಈ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಕರೋನಾ ವಿರುದ್ಧ ದೀರ್ಘಕಾಲೀನ ಹೋರಾಟ ನಡೆಸಬೇಕಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಾ ಇನ್ನೂ 6-7 ತಿಂಗಳ ಕಾಲ ಕರೋನಾದೊಂದಿಗೆ ಬದುಕಲು ಮಾನಸಿಕವಾಗಿ ಸನ್ನದ್ಧರಾಗಬೇಕಿದೆ ಎಂದು ಸಚಿವರು ಹೇಳಿದರು. ಕರೋನ ನಿಯಂತ್ರಣ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಕರೋನಾ ಚಿಕಿತ್ಸೆಗೆ … Read more