ಶಿವಮೊಗ್ಗದ ವಿವಿಧ ದೇಗುಲಕ್ಕೆ ಸಿಎಂ ಯಡಿಯೂರಪ್ಪ ಭೇಟಿ, ಯಾವೆಲ್ಲ ದೇವಸ್ಥಾನಕ್ಕೆ ತೆರಳಿದ್ದರು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MARCH 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಶಿವಮೊಗ್ಗದ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೇವರ ಆಶೀರ್ವಾದ ಪಡೆದರು. ಬಳಿಕ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನಕ್ಕೂ ಯಡಿಯೂರಪ್ಪ ಭೇಟಿ ನೀಡಿದರು. ಮಾರಿ ಗದ್ದುಗೆಗೆ ಮಂಗಳಾರತಿ ಬೆಳಗಿ, ದೇವಿಯ ಆಶೀರ್ವಾದ ಪಡೆದರು. ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ವೈಶಾಲಿ, … Read more