‘ಕೊನೆಗೂ ಸಿಗಂದೂರು ಸೇತುವೆ ನಿರ್ಮಾಣಕ್ಕಿದ್ದ ಅಡೆತಡೆಗಳು ದೂರ, 30 ತಿಂಗಳಲ್ಲಿ ರೆಡಿಯಾಗಲಿದೆ ಅತ್ಯಾಧುನಿಕ ಬ್ರಿಡ್ಜ್’
ಶಿವಮೊಗ್ಗ ಲೈವ್.ಕಾಂ | 8 ಮಾರ್ಚ್ 2019 ಇನ್ನು 30 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು, ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಗಂದೂರು ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕಾಮಗಾರಿಯೂ ಶುರುವಾಗಲಿದೆ ಎಂದು ಸ್ಪಷ್ಟಪಡಿಸಿದರು. ಶರಾವತಿ ಹಿನ್ನೀರು ಭಾಗದ ಅಂಬರಗೋಡ್ಲು ಕಳಸವಳ್ಳಿ ನಡುವೆ ಸೇತುವೆ ನಿರ್ಮಾಣಕ್ಕೆ ಇದ್ದ ಅಡೆತಡೆಗಳು ನಿವಾರಣೆಯಾಗಿದೆ. ಆನ್’ಲೈನ್’ನಲ್ಲಿ ಅಧಿಕೃತವಾಗಿ ಟೆಂಡರ್ ಕರೆಯಲಾಗಿದ್ದು, ಮಾರ್ಚ್ 22ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಸ ಕಲ್ಪಿಸಲಾಗಿದೆ ಎಂದರು. ಹತ್ತು ವರ್ಷ … Read more