ಡೆವಿಲ್‌ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು

Bike-and-rajahamsa-bus-mishap-near-ranjadakatte-in-shimoga

ತೀರ್ಥಹಳ್ಳಿ: ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ (Rajahamsa bus) ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿ ತಾಲೂಕು ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಡೆವಿಲ್‌ ಮೇನಿಯಾ, ದರ್ಶನ್‌ ಅಭಿಮಾನಿಗಳ ಅಬ್ಬರ, ಹೇಗಿದೆ ಸಂಭ್ರಮಾಚರಣೆ? ಮೀನುಗುಂದ ಗ್ರಾಮದ ಪುನೀತ್‌ (26) ಮೃತ ದುರ್ದೈವಿ. ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್‌ ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ರಾಜಹಂಸ ಬಸ್‌ ಡಿಕ್ಕಿಯಾಗಿ … Read more

ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ದಿನಾಂಕ ಪ್ರಕಟ, ಯಾವ್ಯಾವ ದಿನ ಏನೇನು ನಡೆಯಲಿದೆ?

Thirthahalli ellamavasye Teppotsava

ತೀರ್ಥಹಳ್ಳಿ: ಪುರಾಣ ಪ್ರಸಿದ್ದ ಎಳ್ಳಮಾವಾಸ್ಯೆ ಜಾತ್ರೆಗೆ (Ellemavasya Jatre) ಎಲ್ಲ ಸಿದ್ಧತೆ ಮಾಡಲಾಗುತ್ತಿದೆ. ಡಿ.19ರಿಂದ ಮೂರು ದಿನ ಜಾತ್ರೆ ನಡೆಯಲಿದೆ ಎಂದು ಶ್ರೀ ರಾಮೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಹಾಲಿಗೆ ನಾಗರಾಜ್ ಹೇಳಿದರು. ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ದೇವಸ್ಥಾನದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಿಗೆ ನಾಗರಾಜ್‌, ಡಿ.19ರಂದು ತುಂಗಾನದಿಯಲ್ಲಿ ತೀರ್ಥಸ್ನಾನ, ಡಿ.20ರಂದು ರಾಮೇಶ್ವರ ದೇವರ ರಥೋತ್ಸವ ಹಾಗೂ ಡಿ.21ರಂದು ಸಂಜೆ ತುಂಗಾನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ ಎಂದು ತಿಳಿಸಿದರು. ಸುಮಾರು … Read more

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಪ್ರಭಾರ ಅಧ್ಯಕ್ಷರು

Geetha-Ramesh-New-president-of-Thirthahalli-Pattana-Panchayath

ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಕಾರ್ಯನಿರ್ವಹಿಸಲಿದ್ದಾರೆ. ಹಾಲಿ ಉಪಾಧ್ಯಕ್ಷರಾ ಗಿರುವ ಗೀತಾ ರಮೇಶ್ ಸೋಮವಾರ ಪಟ್ಟಣ ಪಂಚಾಯಿತಿದಲ್ಲಿ ಪ್ರಭಾರ ಅಧ್ಯಕ್ಷರಾಗಿ (Acting President) ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು? ಕೆಲವು ದಿನಗಳ ಹಿಂದೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ರಹಮತುಲ್ಲಾ ಅಸಾದಿ ವಿರುದ್ಧ ಮಂಡನೆ ಆಗಿದ್ದ ಅವಿಶ್ವಾಸ ನಿರ್ಣಯ ಹೈಕೋರ್ಟ್ ಆದೇಶದ ಅನ್ವಯ ಸ್ವೀಕೃತಗೊಂಡ ಹಿನ್ನೆಲೆ ಅಧ್ಯಕ್ಷ ಸ್ಥಾನ ತೆರವಾಗಿದೆ.

ಮಂಡಗದ್ದೆ ಬಳಿ ಅರಣ್ಯ ಇಲಾಖೆ ದಿಢೀರ್‌ ಕಾರ್ಯಾಚರಣೆ, ಇಬ್ಬರು ಆರೋಪಿಗಳು ಅರೆಸ್ಟ್‌

Mandagadde Graphics by smg live

ತೀರ್ಥಹಳ್ಳಿ: ಅಕ್ರಮವಾಗಿ ಶ್ರೀಗಂಧ (Sandal Wood) ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾ‌ರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ, ಸೋಮವಾರ ಬಂಧಿಸಿದೆ. ಕಣಗಲಕೊಪ್ಪ ಗಸ್ತು ವಿಭಾಗದಲ್ಲಿ 33 ಕೆ.ಜಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಡಿಎಫ್‌ಒ ಅಜ್ಜಯ್ಯ, ಎಸಿಎಫ್ ಮಧುಸೂದನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಮೇಲಿನಪಟ್ರೊಳ್ಳಿ ಗ್ರಾಮದ ಸ.ನಂ.06ರಲ್ಲಿ ಶ್ರೀಗಂಧ ಮರ ಕಡಿತಲೆ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟ ತುಂಡುಗಳ ಜತೆಗೆ ಆರೋಪಿಗಳಾದ ಕಣಗಲಕೊಪ್ಪ ಗ್ರಾಮದ ಸತೀಶ್ … Read more

ಬೈಕ್‌ಗೆ ಡಿಕ್ಕಿ ಹೊಡೆದು ಎಳೆದೊಯ್ದ ಖಾಸಗಿ ಬಸ್‌, ಸವಾರನ ಸ್ಥಿತಿ ಗಂಭೀರ, ಎಲ್ಲಿ? ಹೇಗಾಯ್ತು ಘಟನೆ?

Incident-Near-Kushavathi-in-Thirthahalli.

ತೀರ್ಥಹಳ್ಳಿ: ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ (Bus Rams Bike) ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ತೀರ್ಥಹಳ್ಳಿಯ ಕುಶಾವತಿಯಲ್ಲಿ ಘಟನೆ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿತ್ತು. ಕುಶಾವತಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಬೈಕ್‌ ಮೇಲೆ ಹತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ … Read more

ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

KONANDUR-THIRTHAHALLI-NEWS

ಕೋಣಂದೂರು: ಸಮೀಪದ ಹೊಸಕೇರಿ ನಿವಾಸಿ ನಾಗರಾಜ (52) ಡೆತ್ ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಟ್ ಫಂಡ್ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ದಾಖಲೆ ಪತ್ರಗಳನ್ನು ಸಂಬಂಧಿಕರೊಬ್ಬರಿಗೆ ಕೊಟ್ಟು ಜಾಮೀನಿಗೆ ಸಹಿ ಮಾಡಿದ್ದರು.  ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ ಈ ಕಾರಣಕ್ಕೆ ಚಿಟ್ ಫಂಡ್‌ನವರು ಕಿರುಕುಳ ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದಲ್ಲಿ ಚಳಿ ಜೋರು, ಎಲ್ಲೆಲ್ಲು ತಂಪು ತಂಪು ವಾತಾವರಣ, ತಾಲೂಕುಗಳಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಥಂಡಿ ಜೋರಾಗಿದೆ. ದಟ್ಟ ಮಂಜು, ಮೈ ಕೊರೆಯುವ ಚಳಿ ಆವರಿಸಿದೆ. ಇದರ ಜೊತೆಗೆ ಬಿಸಿಲಿನ ಅಬ್ಬರವು ಜೋರಾಗಿದೆ. ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ಸಂಜೆಯಿಂದಲೆ ವಾತಾವರಣ ತಂಪೇರುತ್ತಿದ್ದು ಬೆಳಗ್ಗೆ ಬಹು ಹೊತ್ತಿನವರೆಗೆ ಇದೇ ವಾತಾವರಣ ಇರುತ್ತದೆ. ಇನ್ನ, ಬಿಸಿಲು ಕೂಡ ಜೊರಾಗಿದೆ. ಇದರಿಂದ ಮಧ್ಯಾಹ್ನದ ವೇಳೆ ಶಿವಮೊಗ್ಗ ನಗರದಲ್ಲಿ ಜನ ಸಂಚಾರವೇ ಕಡಿಮೆಯಾಗುತ್ತಿದೆ. ಇದನ್ನು ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? … Read more

ಲಾರಿ ಚಕ್ರದಡಿ ಸಿಲುಕಿದ ಬೈಕ್‌, ಇಬ್ಬರು ಸವಾರರು ಸ್ಥಳದಲ್ಲೆ ಸಾವು

Bike-and-Lorry-mishap-at-thirthahalli

ತೀರ್ಥಹಳ್ಳಿ: ಲಾರಿ ಮತ್ತು ಬೈಕ್‌ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಆರ್‌.ಎಂ.ಸಿ ಯಾರ್ಡ್‌ ಬಳಿ ತಡರಾತ್ರಿ ಅಪಘಾತವಾಗಿದೆ. ಬೈಕ್‌ ಸವಾರರಾದ ಸುದೀಪ್‌ (25), ಸುಧೀಶ್‌ (30) ಮೃತರು. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್‌ ನಜ್ಜುಗುಜ್ಜಾಗಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಮೃತರು ತೀರ್ಥಹಳ್ಳಿಯ ಯಡೇಹಳ್ಳಿ ಮತ್ತು ಇಂದಿರಾನಗರಕ್ಕೆ ಸೇರಿದವರು. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಅಗರದಹಳ್ಳಿ ಕ್ಯಾಂಪ್‌ನ ವ್ಯಕ್ತಿಗೆ … Read more

ಟ್ಯಾಂಕರ್‌ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?

Tanker-and-TVS-two-wheeler-mishap-at-Thirthahalli.

ತೀರ್ಥಹಳ್ಳಿ: ಶಿವಮೊಗ್ಗ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಸಂಜೆ ಟ್ಯಾಂಕರ್, ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ವೆಂಕಟೇಶ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುವಳ್ಳಿ ಗ್ರಾಮದ ಹಿರೇಬೈಲು ವಾಸಿ ವೆಂಕಟೇಶ್, ಮಂಡಗದ್ದೆ ವಲಯಾರಣ್ಯ ವಿಭಾಗದಲ್ಲಿ ಅರಣ್ಯ ಕಾವಲುಗಾರರಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

Thirthahalli-College-Student-breathed-last.

ತೀರ್ಥಹಳ್ಳಿ: ಪದವಿ ವಿದ್ಯಾರ್ಥಿನಿಯೊಬ್ಬರು ಮನೆ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ದಬ್ಬಣಗದ್ದೆ ಸಮೀಪದ ಬಚ್ಚನಕೊಡಿಗೆ ಘಟನೆ ಸಂಭವಿಸಿದೆ. ರಮೇಶ್‌ ಆಚಾರ ಅವರ ಪುತ್ರಿ ಪ್ರಾಪ್ತಿ (21) ಮೃತಳು. ಇಂದು ಬೆಳಗಿನ ಜಾವ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಾಪ್ತಿ ಪತ್ತೆಯಾಗಿದ್ದಾಳೆ. ಬಾಳೆಬೈಲಿನ ಪದವಿ ಕಾಲೇಜಿನಲ್ಲಿ ಪ್ರಾಪ್ತಿ ತೃತೀಯ ವರ್ಷದ ಬಿಬಿಎ ಪದವಿ ಓದುತ್ತಿದ್ದರು. ಇದನ್ನೂ ಓದಿ » ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ … Read more