ಶಿವಮೊಗ್ಗದ ನಡು ರಸ್ತೆಯಲ್ಲಿ ಒಲೆ ಹಚ್ಚಿದರು, ಪ್ರಧಾನಿ ಮುಖಕ್ಕೆ ಮಸಿ ಬಳಿದರು

Youth Congress Protest against petrol diesel price

SHIVAMOGGA LIVE NEWS |Petrol – Diesel Price | 9 ಏಪ್ರಿಲ್ 2022 ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಸೌದೆ ಒಲೆ ಹಚ್ಚಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಯಿತು. ಜನರ ಮೇಲೆ ನಿತ್ಯ ಬರೆ ಪ್ರತಿದಿನ ಅಡುಗೆ … Read more

‘ಶಾಸಕರಿಗೇಕೆ ಗನ್ ಮ್ಯಾನ್ ಬೇಕು, ಬ್ರಿಟೀಷ್ ಕಾನೂನುಗಳಿಂದ ನರಳುತ್ತಿದ್ದಾರೆ ಪೊಲೀಸರು’

Ayanru-Manjunath-And-Rudregowda-MLC

SHIVAMOGGA LIVE NEWS | GUN MAN  | 9 ಏಪ್ರಿಲ್ 2022 ರಾಜ್ಯದ ಎಲ್ಲಾ ಶಾಸಕರಿಗೆ ನೀಡಿರುವ ಗನ್ ಮನ್ ವ್ಯವಸ್ಥೆ ತೆಗೆದು ಹಾಕಬೇಕು. ಔರಾದ್ಕರ್ ವರದಿಯನ್ನು ಸರ್ಕಾರ ಮರು ವಿಮರ್ಶೆಗೆ ಒಳಪಡಿಸಬೇಕು. ಇಲ್ಲವಾದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪೊಲೀಸ್ ಇಲಾಖೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸು ಸರ್ಕಾರ ನೇಮಿಸಿದ ಔರಾದ್ಕರ್ ವರದಿಯಲ್ಲಿ ಸಾಕಷ್ಟು ನ್ಯೂನತೆಗಳಿವೆ ಎಂದರು. ನೌಕರ … Read more

ಕುಂಸಿ ಪೊಲೀಸ್ ಠಾಣೆಯಲ್ಲಿ ಗೃಹ ಸಚಿವರ ವಿರುದ್ಧ ದೂರು

Congress-Complaint-against-Home-minister-in-Kumsi.

SHIVAMOGGA LIVE NEWS | POLITICS | 9 ಏಪ್ರಿಲ್ 2022 ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂಸಿ ಠಾಣೆಗೆ ದೂರು ನೀಡಲಾಯಿತು. ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಚಂದ್ರು ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ … Read more

ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ವ್ಯಕ್ತಿ ಸಾವು

sagara graphics

SHIVAMOGGA LIVE NEWS | INSTAGRAM | 9 ಏಪ್ರಿಲ್ 2022 ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಣಿಕೆ ಗ್ರಾಮದ ಯಲ್ಲಪ್ಪ (55) ಎಂದು ಗುರುತಿಸಲಾಗಿದೆ. ಸಿಗಂದೂರು ಸಮೀಪದ ಹೊಳೆಬಾಗಿಲು ಸಮೀಪದ ಕಣಿಕೆ ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಯಲ್ಲಪ್ಪ ಮೀನು ಹಿಡಿಯಲು ತೆರಳಿದ್ದರು. ಮೀನು ಹಿಡಿಯುತ್ತಿದ್ದಾಗ ತೆಪ್ಪ ಮಗುಚಿಕೊಂಡು, ಯಲ್ಲಪ್ಪ ಮುಳುಗಿ ಸಾವನ್ನಪ್ಪಿದ್ದಾರೆ. ಯಲ್ಲಪ್ಪ ಅವರಿಗಾಗಿ ಶೋಧ ಕಾರ್ಯ ನಡೆಸಲಾಯಿತು. ಶುಕ್ರವಾರ ಅವರ ಮೃತದೇಹ ತೇಲಿ ಬಂದಿದೆ. ಸಾಗರ ಗ್ರಾಮಾಂತರ … Read more

ತೀರ್ಥಹಳ್ಳಿಯಲ್ಲಿ ಮತ್ತೊಬ್ಬರಿಗೆ KFD ಸೋಂಕು ಪಾಸಿಟಿವ್, ಈವರೆಗೂ ಸೋಂಕಿಗೆ ತುತ್ತಾದವರೆಷ್ಟು?

Thirrthahalli Taluk Graphics

SHIVAMOGGA LIVE NEWS | DISEASE  | 9 ಏಪ್ರಿಲ್ 2022 ತೀರ್ಥಹಳ್ಳಿಯಲ್ಲಿ ಕೃಷಿ ಕಾರ್ಮಿರೊಬ್ಬರಿಗೆ KFD (ಮಂಗನ ಕಾಯಿಲೆ) ಪಾಸಿಟಿವ್ ಬಂದಿದೆ. ಬೇಗುವಳ್ಳಿ ಗ್ರಾಮದ 60 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.   KFD ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕೃಷಿ ಕಾರ್ಮಿಕನನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆದಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಈವರೆಗೂ 25 ಜನರಿಗೆ ಸೋಂಕು ಕಾಣಿಸಿಕೊಂಡಿದೆ. 23 ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. DISEASE   ಇದನ್ನೂ … Read more

ಹಿಂದೂ ಹರ್ಷ ಹೆಸರಿನಲ್ಲಿ ಸಿದ್ಧವಾಯ್ತು ಟ್ರಸ್ಟ್, ಯಾರೆಲ್ಲ ಟ್ರಸ್ಟ್’ನಲ್ಲಿದ್ದಾರೆ? ಏನೆಲ್ಲ ಕೆಲಸ ಮಾಡಲಿದೆ?

Bajarangadal Worker Harsha Murdered

SHIVAMOGGA LIVE NEWS | TRUST| 9 ಏಪ್ರಿಲ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹೆಸರಲ್ಲಿ ಚಾರಿಟೇಬಲ್ TRUST ಸ್ಥಾಪನೆ ಮಾಡಲಾಗಿದೆ. ಹರ್ಷ ಸಹೋದರಿ ಅಶ್ವಿನಿ ಅವರು ಈ ಟ್ರಸ್ಟ್’ನ ಅಧ್ಯಕ್ಷೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರ್ಷ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ, ಹರ್ಷ ಸಾವಿನ ದುಃಖದಿಂದ ನಾವು ಹೊರಬಂದಿಲ್ಲ. ನಮ್ಮ ತಾಯಿ ಇನ್ನೂ ದುಃಖದಲ್ಲಿದ್ದಾರೆ. ತಂದೆಗೆ ಹುಷಾರಿಲ್ಲ. ಇವುಗಳ ಮಧ್ಯೆಯೇ ಸರ್ಕಾರ, ಸಂಘ -ಸಂಸ್ಥೆಗಳು, ಹಿಂದೂ ಧರ್ಮದ ಮುಖಂಡರು ನಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷನ … Read more

ಸಚಿವ ಈಶ್ವರಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ಕೇಸ್ ದಾಖಲು

SN-Channabasappa-KS-Eshwarappa

SHIVAMOGGA LIVE NEWS | POLITICS NEWS | 8 ಏಪ್ರಿಲ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಪೀಸ್ ಆರ್ಗನೈಸೇಷನ್ ಸಂಸ್ಥೆ ಮುಖ್ಯಸ್ಥ ರಿಯಾಜ್ ಅಹಮದ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ? ಫೆಬ್ರವರಿ 20ರಂದು … Read more

ಶಾರದಾ ಪೂರ್ಯಾನಾಯ್ಕ್, ಶ್ರೀಕಾಂತ್, ಬಳಿಗಾರ್ ಕಾಂಗ್ರೆಸ್ ಸೇರ್ಪಡೆ ನಿರೀಕ್ಷೆ

Madhu-Bangarappa-about-Sharada-Poorayanaik-Srikanth.

SHIVAMOGGA LIVE NEWS | POLITICS | 8 ಏಪ್ರಿಲ್ 2022 ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಎಂ.ಶ್ರೀಕಾಂತ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಶಿಕಾರಿಪುರದ ವಿ.ಪಿ.ಬಳಿಗಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಸೊರಬದಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾದರೆ ಜಿಲ್ಲೆಯಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದರು. ಹಿಂದುತ್ವದ ಹೆಸರಿನಲ್ಲಿ ಕಂದಕ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ … Read more