ಹೊನ್ನಾವರದಿಂದ ಶಿವಮೊಗ್ಗ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಮರಳಿದ ಇಂಜಿನಿಯರ್ ಗೆ ಕಾದಿತ್ತು ಆಘಾತ

Ksrtc-bus-stand-front-views

SHIVAMOGGA LIVE NEWS | 1 APRIL 2023 SHIMOGA : ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ (parking) ಸ್ಥಳದಲ್ಲಿ ನಿಲ್ಲಿಸಿ ಹೋಗಿದ್ದ ಪಲ್ಸರ್ ಬೈಕ್ ಕಳ್ಳತನವಾಗಿದೆ. ಪಾರ್ಕಿಂಗ್ ನಿರ್ವಹಣೆ ಮಾಡುವ ಸಿಬ್ಬಂದಿಯ ನಿರ್ಲಕ್ಷ್ಯವೆ ಘಟನೆಗೆ ಕಾರಣ ಎಂದು ಆರೋಪಿಸಿ ಇಂಜಿನಿಯರ್ ಒಬ್ಬರು ದೂರು ನೀಡಿದ್ದಾರೆ. ಇಂಜಿನಿಯರ್ ಶಿವಶಂಕರ್ ಎಂಬುವವರು ಹೊನ್ನಾವರಕ್ಕೆ ತೆರಳಬೇಕಿತ್ತು. ತಮ್ಮ ಬೈಕನ್ನು ಶಿವಮೊಗ್ಗದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ (parking) ಸ್ಥಳದಲ್ಲಿ ನಿಲ್ಲಿಸಿ, ರಶೀದಿ ಪಡೆದು ತೆರಳಿದ್ದರು. ಹೊನ್ನಾವರದಿಂದ ಸಂಜೆ … Read more

ತೀರ್ಥಹಳ್ಳಿಗೆ ನುಗ್ಗಿದ್ದ ಕಾಡಾನೆ 3 ತಿಂಗಳ ಬಳಿಕ ‘ಅರೆಸ್ಟ್’, ಹೆಣ್ಣಾನೆ ಮೋಹಕ್ಕೆ ಬಿದ್ದ ಸಲಗ ‘ಹನಿ ಟ್ರ್ಯಾಪ್’

Wild-Elephant-Honey-trapped-in-Thirthahalli-Devangi

SHIVAMOGGA LIVE NEWS | 31 MARCH 2023 THIRTHAHALLI : ಪಟ್ಟಣದೊಳಗೆ ನುಗ್ಗಿ ಆತಂಕ ಮೂಡಿಸುತ್ತಿದ್ದ ಕಾಡಾನೆಯನ್ನು (Elephant) ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ತೀರ್ಥಹಳ್ಳಿ ತಾಲೂಕು ದೇವಂಗಿಯ ಮಳಲೂರು ಕಾಡಿನಲ್ಲಿ ಆನೆ ಸೆರೆ ಸಿಕ್ಕಿದೆ. ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿದ ಸಕ್ರೆಬೈಲು ಬಿಡಾರದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು (Elephant) ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆನೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಗೆ ಮತ್ತು ಬರುವ ಇಂಜೆಕ್ಷನ್ ಡಾರ್ಟ್ ಮಾಡಿ … Read more

ಕಾಡಿನ ಮಧ್ಯೆ ಮರಕ್ಕೆ ನೇಣು ಬಿಗದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ, ಪಕ್ಕದಲ್ಲಿ ಸಿಕ್ತು ಬೈಕ್

Youth-Found-hanging-in-Forest-in-Sagra-Ulluru.

SHIVAMOGGA LIVE NEWS | 31 MARCH 2023 SAGARA : ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ (Youth) ಮೃತದೇಹ ಪತ್ತೆಯಾಗಿದೆ. ಪಕ್ಕದಲ್ಲಿಯೇ ಆತನ ಬೈಕ್ ಕೂಡ ಸಿಕ್ಕಿದೆ. ಸಾಗರ ತಾಲೂಕು ಉಳ್ಳೂರಿನ ಜೋಗಿನಗದ್ದೆ ಬಳಿ ಕಾಡಿನಲ್ಲಿ ಯುವಕನೊಬ್ಬನ (Youth) ಮೃತದೇಹ ಪತ್ತೆಯಾಗಿದೆ. ಗುರುವಾರ ಕಾಡಿನಲ್ಲಿ ಬೈಕ್ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಪಕ್ಕದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ … Read more

ವಿವಿಧ ಚೆಕ್ ಪೊಸ್ಟ್ ಗಳಿಗೆ ರಾತ್ರಿ ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್ ಭೇಟಿ

DC-Dr-Selvamani-IAS-visit-Checkpost-in-Suttukote

SHIVAMOGGA LIVE NEWS | 31 MARCH 2023 SHIMOGA : ವಿಧಾನ ಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು (Check Post) ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ವಿವಿಧ ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಶಿವಮೊಗ್ಗ ತಾಲೂಕು ಸುತ್ತುಕೋಟೆಯಲ್ಲಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಭೇಟಿ ನೀಡಿದ್ದರು. ಚೆಕ್ ಪೋಸ್ಟ್ (Check Post) ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿರುವ ಪರಿಯನ್ನು ಪರಿಶೀಲಿಸಿದರು. ಅಲ್ಲದೆ ಚೆಕ್ … Read more

ಶಿವಮೊಗ್ಗದಲ್ಲಿ ರೈಲು ಹಳಿ ಪಕ್ಕದಲ್ಲಿ ಅಸ್ವಸ್ಥಳಾಗಿ ಬಿದ್ದ ಮಹಿಳೆ

Railway-Police-Rescue-a-woman-in-Shimoga

SHIVAMOGGA LIVE NEWS | 31 MARCH 2023 SHIMOGA : ರೈಲ್ವೆ ಟ್ರ್ಯಾಕ್ ಬಳಿ ಅಸ್ವಸ್ಥಳಾಗಿ ಬಿದ್ದಿದ್ದ ಮಹಿಳೆಯನ್ನು ರೈಲ್ವೆ ಪೊಲೀಸರು (Railway Police) ರಕ್ಷಣೆ ಮಾಡಿದ್ದಾರೆ. ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ರೈಲು ಹಳಿ ಪಕ್ಕದಲ್ಲಿ ಮಹಿಳೆಯೊಬ್ಬರು ಅಸ್ವಸ್ಥರಾಗಿ ಬಿದ್ದಿದ್ದರು. ಸುಮಾರು 52 ವರ್ಷ ವಯಸ್ಸಿನ ಮಹಿಳೆಯನ್ನು ಗಮನಿಸಿದ ರೈಲ್ವೆ ಪೊಲೀಸ್ (Railway Police) ಹೆಡ್ ಕಾನ್ಸ್ ಟೇಬಲ್ ಎಸ್.ಎನ್.ಲಮಾಣಿ ಅವರು ಆಕೆಯನ್ನು ರಕ್ಷಿಸಿದ್ದಾರೆ. ಆಂಬುಲೆನ್ಸ್ … Read more

ಬೆಳಗಿನ ಜಾವ ಎದುರು ಮನೆಯವರು ಕರೆ ಮಾಡಿದಾಗ ಮನೆ ಮಾಲೀಕನಿಗೆ ಶಾಕ್

Crime-News-General-Image

SHIVAMOGGA LIVE NEWS | 31 MARCH 2023 SHIMOGA : ಸಂಬಂಧಿಯೊಬ್ಬರ ಮನೆಯ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಗಂಧರ್ವ ನಗರದ ಮನೆಯೊಂದರಲ್ಲಿ ಕಳ್ಳತನವಾಗಿದೆ (theft). ಬಾಗಿಲಿನ ಇಂಟರ್ ಲಾಕ್ ಮುರಿದು ಒಳ ನುಗ್ಗಿರುವ ಕಳ್ಳರು ನಗದು ಕಳ್ಳತನ ಮಾಡಿದ್ದಾರೆ. ಗಂಧರ್ವ ನಗರದ ರೂಪೇಶ್ ಕುಮಾರ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (theft). ದಾವಣಗೆರೆಯಲ್ಲಿ ಮಾವನ ಮನೆಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ರೂಪೇಶ್ ಕುಮಾರ್ ಅವರು ತೆರಳಿದ್ದರು. ಈ ವೇಳೆ ಮನೆಯಲ್ಲಿ ಕಳ್ಳನತವಾಗಿದೆ. ಮನೆಯ ಬೀರುವಿನಲ್ಲಿದ್ದ … Read more

ಶಿವಮೊಗ್ಗ ಸಿಟಿಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಬೆಂಗಳೂರಿಗೆ ದೌಡು, ಯಾಕೆ? ಯಾರನ್ನೆಲ್ಲ ಭೇಟಿಯಾದರು?

Shimoga-Congress-Aspirants-meet-Siddaramaiah

SHIVAMOGGA LIVE NEWS | 30 MARCH 2023 BENGALURU : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ, ಶಿವಮೊಗ್ಗದ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆ ಮುನ್ನಲೆಗೆ ಬಂದಿದೆ. ಚರ್ಚೆ ದಟ್ಟವಾಗುತ್ತಿದ್ದಂತೆ ಶಿವಮೊಗ್ಗದ ಕಾಂಗ್ರೆಸ್ ಮುಖಂಡರು (Aspirants) ಬೆಂಗಳೂರಿಗೆ ದೌಡಾಯಿಸಿದ್ದಾರೆ. ಯಾರೆಲ್ಲ ಹೋಗಿದ್ದಾರೆ? ವಿಧಾನ ಸಭೆ ಚುನಾವಣೆಯ 11 ಆಕಾಂಕ್ಷಿಗಳು (Aspirants), ಮಹಾನಗರ ಪಾಲಿಕೆ ಸದಸ್ಯರು, ನಗರದ ನಾಯಕರು, ಪಕ್ಷದ ವಿವಿಧ ಜವಾಬ್ದಾರಿಯಲ್ಲಿರುವವರು ಬೆಂಗಳೂರಿಗೆ ತೆರಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ … Read more

ಮಲವಗೊಪ್ಪದಲ್ಲಿ ಹೆದ್ದಾರಿ ಮೇಲೆ ಟೈರ್ ಗೆ ಬೆಂಕಿ, ಗಾಡಿಕೊಪ್ಪದಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Banjara-Community-Protest-in-Shimoga-Malavagoppa.

SHIVAMOGGA LIVE NEWS | 30 MARCH 2023 SHIMOGA : ಒಳ ಮೀಸಲಾತಿ ವಿರುದ್ಧ ಶಿವಮೊಗ್ಗದಲ್ಲಿಯು ಬಂಜಾರ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಮಲವಗೊಪ್ಪದಲ್ಲಿ ಪ್ರತಿಭಟನೆ (Protest) ನಡೆಸಿದ ಬಂಜಾರ ಸಮುದಾಯದವರು, ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿದರು. ಮಲವಗೊಪ್ಪದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ (Protest) ನಡೆಸಿದರು. ಒಳ ಮಿಸಲಾತಿಯ ಶಿಫಾರಸು ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿರುವುದನ್ನು ರಾಜ್ಯ ಸರ್ಕಾರ ಕೂಡಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಗಾಡಿಕೊಪ್ಪದಲ್ಲಿಯು ಆಕ್ರೋಶ ಇನ್ನು, ಗಾಡಿಕೊಪ್ಪದಲ್ಲಿಯು … Read more

ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಅಪಘಾತ, ಭದ್ರಾವತಿಯ ಯುವಕನಿಗೆ ಗಂಭೀರ ಗಾಯ

Head-on-Between-College-bus-and-bike-at-machenahalli.

SHIVAMOGGA LIVE NEWS | 30 MARCH 2023 SHIMOGA : ಕಾಲೇಜು ಬಸ್ ಮತ್ತು ಬೈಕ್ (bike) ಮುಖಾಮುಖಿ ಡಿಕ್ಕಿಯಾಗಿದ್ದು ಭದ್ರಾವತಿಯ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಾಚೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಮದನ್, ಗಾಯಗೊಂಡಿರುವ ಬೈಕ್ (bike) ಸವಾರ. ತಲೆಗೆ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ. ಖಾಸಗಿ ಕಾಲೇಜಿನ ಬಸ್ ಶಿವಮೊಗ್ಗದ ಕಡೆಯಿಂದ ಬರುತ್ತಿತ್ತು. ಮದನ್ ಭದ್ರಾವತಿ ಕಡೆಯಿಂದ ಶಿವಮೊಗ್ಗದ ಕಾಲೇಜಿಗೆ ತೆರಳುತ್ತಿದ್ದ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ – ಚುನಾವಣೆ ಹೊತ್ತಲ್ಲಿ ಎಷ್ಟು ಹಣ ಕೊಂಡೊಯ್ಯಬಹುದು? … Read more

ಚುನಾವಣೆ ಹೊತ್ತಲ್ಲಿ ಎಷ್ಟು ಹಣ ಕೊಂಡೊಯ್ಯಬಹುದು? ಮದುವೆ ಮಾಡಲು ಬೇಕಾ ಅನುಮತಿ?

Dc-Dr-Selvamani-IAS-Mithun-Kumar-IPS

SHIVAMOGGA LIVE NEWS | 30 MARCH 2023 SHIMOGA : ವಿಧಾನಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು (Checkpost) ನಿರ್ಮಿಸಲಾಗಿದೆ. ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅಕ್ರಮವಾಗಿ ಹಣ ಮತ್ತು ಇತರೆ ವಸ್ತುಗಳನ್ನು ಕೊಂಡೊಯ್ಯುತ್ತಿರುವುದು ಕಂಡು ಬಂದಲ್ಲಿ ಕೂಡಲೆ ವಶಕ್ಕೆ ಪಡೆಯಲಾಗುತ್ತಿದೆ. ಚುನಾವಣೆ ಹೊತ್ತಲ್ಲಿ ಸಾರ್ವಜನಿಕರು ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದು ಕಂಡು ಬಂದಲ್ಲಿ ಅದನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು … Read more