ದೀಪಾವಳಿ, ಪ್ರವಾಸಿಗರ ಸಂಖ್ಯೆ ಹೆಚ್ಚಳ, ಅ.21ರಂದೂ ಶಿವಮೊಗ್ಗ ಮೃಗಾಲಯ ಓಪನ್
ಶಿವಮೊಗ್ಗ: ದೀಪಾವಳಿ ಹಿನ್ನೆಲೆ ಸಾರ್ವಜನಿಕರು ಮೃಗಾಲಯ (Zoo) ವೀಕ್ಷಣೆಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ತ್ಯಾವರೆಕೊಪ್ಪದ ಹುಲಿ ಸಿಂಹಧಾಮದಲ್ಲಿ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ಅ.21 ಸಹ ತೆರೆದಿರುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರೀಶೀಲನೆ, ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ