ತುಮಿಳುನಾಡಿನಿಂದ ಬಂದ ಲಾರಿ ಮೇಲೆ ಶಿವಮೊಗ್ಗ DySP ನೇತೃತ್ವದಲ್ಲಿ ದಾಳಿ, ಲಕ್ಷ ಲಕ್ಷದ ವಸ್ತುಗಳು ಸೀಜ್‌

Police-Van-in-Shimoga-City

ಶಿವಮೊಗ್ಗ: ಸಾರಿಗೆ ಅಧಿಕಾರಿಗಳಿಂದ ಪರವಾನಗಿ ಪಡೆಯದೆ, ಸುರಕ್ಷಿತ ಕ್ರಮ ಕೈಗೊಳ್ಳದೆ ಪಟಾಕಿ ಸಾಗಿಸುತ್ತಿದ್ದ ಲಾರಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ₹4,15,741 ಮೌಲ್ಯದ ಪಟಾಕಿ ಜಫ್ತಿ ಮಾಡಲಾಗಿದೆ. ತಮಿಳುನಾಡಿನ ಶಿವಾಕಾಶಿಯಿಂದ ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗೋಡೋನ್‌ಗಳಿಗೆ ಪಟಾಕಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಸಂಜೀವ್‌ ಕುಮಾರ್‌ ನೇತೃತ್ವದಲ್ಲಿ ವಿರೂಪಿನಕೊಪ್ಪ ಬಳಿ ದಾಳಿ ನಡೆಸಿದ ಪೊಲೀಸರು, ದಾಖಲೆಗಳ ಪರಿಶೀಲನೆ ನಡೆಸಿದರು. ಸ್ಪೋಟಕ ವಸ್ತುಗಳ ಸಾಗಣೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲ. ಲಾರಿಯಲ್ಲಿ ಅಗ್ನಿ ನಿರೋಧಕ ವಸ್ತುಗಳು … Read more

ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕನ ಮೇಲೆ ಹರಿದ ಲಾರಿ

Vidyanagara-Truck-and-Bike-incident - ಲಾರಿ

ಶಿವಮೊಗ್ಗ: ಹೆದ್ದಾರಿಯಲ್ಲಿ ಲಾರಿ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಲಾರಿ ನಿಲ್ಲಿಸದೆ ಪರಾರಿಯಾಗಿದೆ. ವಿದ್ಯಾನಗರದ ಎಸ್‌ಬಿಐ ಬ್ಯಾಂಕ್‌ ಮುಂಭಾಗ ಇಂದು ಸಂಜೆ ಘಟನೆ ಸಂಭವಿಸಿದೆ. ಮೃತರನ್ನ ಮಣಿ (21) ಎಂದು ಗುರುತಿಸಲಾಗಿದೆ. ಬೈಕ್‌ ಹಿಂಭಾಗ ನಜ್ಜುಗುಜ್ಜಾಗಿದೆ. ಟಿಲ್ಲರನ್ನು ಬೈಕ್‌ ಓವರ್‌ ಟೇಕ್‌ ಮಾಡುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು, ಅಪಘಾತದ ಬಳಿ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೂರ್ವ ಸಂಚಾರ ಠಾಣೆ … Read more

ರಾತ್ರೋರಾತ್ರಿ ಲಾರಿ ಕದ್ದು ಎಸ್ಕೇಪ್‌ ಆಗಿದ್ದ ಆರೋಪಿ ಅರೆಸ್ಟ್‌

soraba-News-Update

ಸೊರಬ: ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ನಿಲ್ಲಿಸಿದ್ದ ಲಾರಿ (Truck) ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾನುಕೇರಿ ಬಡಾವಣೆ ನಿವಾಸಿ ಇಬ್ರಾಹಿಂ ಅಹಮ್ಮದ್ (26) ಬಂಧಿತ. ಸೊರಬ ಪಟ್ಟಣದ ಪೆಟ್ರೋಲ್‌ ಬಂಕ್‌ ಮುಂಭಾಗ ಸಾಗರ ಪಟ್ಟಣದ ಗಾಂಧಿನಗರ ನಿವಾಸಿ ಆರೀಫ್ ಆಹ್ಮದ್ ಎಂಬುವರಿಗೆ ಸೇರಿದ ಲಾರಿ ಕಳ್ಳತನವಾಗಿತ್ತು. ಇದರ ಸಿಸಿಟಿವಿ ವಿಡಿಯೋಗಳು ವೈರಲ್‌ ಆಗಿದ್ದವು. ಕಳ್ಳತನದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಪಟ್ಟಣದ ಇಬ್ರಾಹಿಂ ಅಹಮ್ಮದ್‌ನನ್ನು ಬಂಧಿಸಿ, ಸುಮಾರು ₹4.90 ಲಕ್ಷದ ಲಾರಿಯನ್ನು ವಶಕ್ಕೆ … Read more

ಹಿಂದೆ ಬರುತ್ತಿದ್ದ ಪೊಲೀಸ್‌ ಜೀಪ್‌ ಕಂಡು ಲಾರಿ ನಿಲ್ಲಿಸಿ ಡ್ರೈವರ್‌ ಎಸ್ಕೇಪ್‌, ಕಾರಣವೇನು?

Police-jeep-in-Shimoga.

ಹೊಸನಗರ: ಪೊಲೀಸ್‌ ಜೀಪ್‌ (Police Vehicle) ಕಂಡು ಚಾಲಕನೊಬ್ಬ ಟಿಪ್ಪರ್‌ ಲಾರಿ ನಿಲ್ಲಿಸಿ ಪರಾರಿಯಾಗಿದ್ದಾನೆ. ಹೊಸನಗರ ತಾಲೂಕು ಮುಂಬಾರು ಸಮೀಪದ ದಿಬ್ಬಣಗಲ್ಲು ಸಮೀಪ ಘಟನೆ ಸಂಭವಿಸಿದೆ. ಹಿಂಬದಿಯಲ್ಲಿ ಪೊಲೀಸ್‌ ಜೀಪ್‌ ಬರುತ್ತಿರುವುದನ್ನು ಕಂಡು ಚಾಲಕ ಟಿಪ್ಪರ್‌ ಲಾರಿಯನ್ನು ವೇಗವಾಗಿ ಚಲಾಯಿಸಿದ್ದಾನೆ. ಸ್ವಲ್ಪ ದೂರದಲ್ಲಿ ಲಾರಿ ನಿಲ್ಲಿಸಿದ ಚಾಲಕ ಪರಾರಿಯಾಗಿದ್ದಾನೆ. ಅನುಮಾನಗೊಂಡು ಟಿಪ್ಪರ್‌ ಲಾರಿ ಪರಿಶೀಲಿಸಿದಾಗ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಲಾರಿ ಚಾಲಕ ಮತ್ತು ಮಾಲೀಕನ ವಿರುದ್ಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಕಾರಿನಲ್ಲಿ ಬಂದು ಹೆದ್ದಾರಿಯಲ್ಲಿ ಕ್ಯಾಂಟರ್‌ ಲಾರಿ ಅಡ್ಡಗಟ್ಟಿ ₹4 ಲಕ್ಷಕ್ಕೆ ಡಿಮಾಂಡ್‌, ಡ್ರೈವರ್‌ ಮೇಲೆ ಹಲ್ಲೆ

Police-Van-Jeep-at-Shimoga-Nehru-Road

ಸೊರಬ: ಅಕ್ಕಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ, ₹4 ಲಕ್ಷಕ್ಕೆ ಬೇಡಿಕೆ ಇಡಲಾಗಿದೆ. ಸೊರಬ ತಾಲೂಕು ಬಿಳುವಾಣಿ ಮತ್ತು ಗೇರುಕೊಪ್ಪ ಮಧ್ಯೆ ಘಟನೆ ನಡೆದಿದೆ. ಕ್ಯಾಂಟರ್‌ ಚಾಲಕ ಉಮೇಶ್‌ ಮೇಲೆ ಹಲ್ಲೆ ನಡೆಸಲಾಗಿದೆ. ಎರಡು ಕಾರುಗಳಲ್ಲಿ ಬಂದ 9 ಮಂದಿ ಕ್ಯಾಂಟರ್‌ ಲಾರಿಯನ್ನು ಅಡ್ಡಗಟ್ಟಿದ್ದರು. ₹4 ಲಕ್ಷ ಹಣ ಕೊಡಿಸುವಂತೆ ತಿಳಿಸಿದ್ದರು. ಅಲ್ಲದೆ ಚಾಲಕ ಉಮೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ತಪ್ಪಿಸಿಕೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ … Read more

BREAKING NEWS | ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ

Bus-Truck-Mishap-near-Gajanuru-in-Shimoga

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗಾಜನೂರು ಅಗ್ರಹಾರದ ಬಳಿ ಇಂದು ಬೆಳಗಿನ ಜಾವ ಅಪಘಾತ (Mishap) ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ಖಾಸಗಿ ಬಸ್ಸಿನ ನಿರ್ವಾಹಕ ಅಣ್ಣಪ್ಪ ಮೃತರಾಗಿದ್ದಾರೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು … Read more

ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

Truck-problem-at-Agumbe-Ghat

ತೀರ್ಥಹಳ್ಳಿ: ಕ್ಯಾಂಟರ್‌ ಲಾರಿಯ (Truck) ಆಕ್ಸಲ್‌ ತುಂಡಾಗಿ ಆಗುಂಬೆ ಘಾಟಿಯ ತಿರುವಿನಲ್ಲಿ ನಿಂತಿದ್ದರಿಂದ, ಈ ಭಾಗದಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕ್ಯಾಂಟರ್‌ ಲಾರಿಯ ಆಕ್ಸಲ್‌ ತುಂಡಾಗಿತ್ತು. ಹಾಗಾಗಿ ವಾಹನಗಳು ತಿರುವು ಪಡೆಯಲಾಗದೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಈ ಭಾಗದಲ್ಲಿ ದೊಡ್ಡ ಸಂಖ್ಯೆಯ ಪ್ರಯಾಣಿಕರು ಪರದಾಡುವಂತಾಗಿತ್ತು. ಸದ್ಯ ಕ್ಯಾಂಟರ್‌ ಲಾರಿ ತೆರವು ಮಾಡಲಾಗಿದ್ದು, ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಎಂದಿನಂತಿದೆ. ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ … Read more

ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿಯಲ್ಲಿ ಟಿಪ್ಪರ್‌, ಪಿಕ್‌ಅಪ್‌ ವಾಹನ ಡಿಕ್ಕಿ, ಟಿಪ್ಪರ್‌ ಪಲ್ಟಿ

Truck-and-pickup-mishap-at-gabadi-in-Thirthahalli-

ತೀರ್ಥಹಳ್ಳಿ: ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಬಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಪಿಕ್‌ಅಪ್ ವ್ಯಾನ್ ನಡುವೆ ಅಪಘಾತ (Collision) ಸಂಭವಿಸಿದೆ. ಈ ಘಟನೆಯಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಾಹನ ಮಗುಚಿ ಬಿದ್ದಿದೆ. ಅದರ ಮುಂಭಾಗದ ಚಕ್ರಗಳು ಚೆಲ್ಲಾಪಿಲ್ಲಿಯಾಗಿದೆ. ಪಿಕ್‌ಅಪ್ ವ್ಯಾನ್‌ನ ಮುಂಭಾಗಕ್ಕೂ ಹಾನಿಯಾಗಿದ್ದು, ಅದೃಷ್ಟವಶಾತ್ ಎರಡೂ ವಾಹನಗಳ ಚಾಲಕರು ಸೇರಿದಂತೆ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಇದನ್ನೂ ಓದಿ » ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗೆ ಮೆಸೇಜ್‌ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

ಕಾರು, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Car-and-Truck-mishap-near-hosanagara

ಹೊಸನಗರ: ಲಾರಿ ಮತ್ತು ಕಾರು ಡಿಕ್ಕಿಯಾಗಿ (Mishap) ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಸನಗರ ತಾಲ್ಲೂಕಿನ ನಗರ ಸಮೀಪದ ಶಾಂತಿಕೆರೆ ಬಳಿಯ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 766 ಸಿ ಮಾರ್ಗದಲ್ಲಿ ಡಿಕ್ಕಿ ಸಂಭವಿಸಿದೆ. ಕುಂದಾಪುರ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಕಾರಗಡಿಯಿಂದ ಚಕ್ಕಾರಿನೆಡೆ ಮದುವೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ತಲನೇರಿ ಶೇಖರಪ್ಪ ಗೌಡ ಮತ್ತು ನವೀನಾ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ … Read more

ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

Crime-News-General-Image

ಶಿವಮೊಗ್ಗ: ಲಕ್ಷಾಂತರ ರೂ. ಮೌಲ್ಯದ ಅಡಿಕೆ (Adike) ಹೊತ್ತು ಶಿವಮೊಗ್ಗದಿಂದ ಉತ್ತರ ಪ್ರದೇಶಕ್ಕೆ ತೆರಳಿದ್ದ ಲಾರಿ ನಾಪತ್ತೆಯಾಗಿದೆ. ಲಾರಿ ಮಾಲೀಕ ಮತ್ತು ಡ್ರೈವರ್‌ ತಮ್ಮ ಮೊಬೈಲ್‌ ಫೋನ್‌ಗಳನ್ನು ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಅಡಿಕೆ ಮಂಡಿಯೊಂದರಿಂದ 82 ಲಕ್ಷ ರೂ. ಮೌಲ್ಯದ 430 ಚೀಲ ಅಡಿಕೆಯನ್ನು ಉತ್ತರ ಪ್ರದೇಶದ ಕಾನ್ಪುರದ ಕಾರ್ಖಾನೆಯೊಂದಕ್ಕೆ ಕಳುಹಿಸಲಾಗಿತ್ತು. ಮೇ 13ರಂದು ಶಿವಮೊಗ್ಗದಿಂದ ಲಾರಿ ಹೊರಟಿದೆ. ಆದರೆ ಕಾನ್ಪುರದಲ್ಲಿ ಕಾರ್ಖಾನೆಗೆ ತಲುಪಿಲ್ಲ ಎಂದು ಆರೋಪಿಸಲಾಗಿದೆ. ಲಾರಿ ಚಾಲಕ ಮತ್ತು ಮಾಲೀಕನಿಗೆ … Read more