ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ?

Tunga-Dam-Gajanuru.

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಇವತ್ತು ಇಳಿಕೆಯಾಗಿದೆ. ಗಾಜನೂರಿನ ತುಂಗಾ ಜಲಾಶಯಕ್ಕೆ ಇವತ್ತು 39,188 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇಂದು 38,239 ಕ್ಯೂಸೆಕ್‌ ಹೊರಹರಿವು ಇದೆ. ತುಂಗಾ ಜಲಾಶಯದಲ್ಲಿ ಸದ್ಯ 2.101 ಟಿಎಂಸಿ ನೀರಿನ ಸಂಗ್ರಹವಿದೆ. ನೀರಿನ ಮಟ್ಟ 587.69 ಮೀಟರ್‌ನಷ್ಟಿದೆ. ಇದನ್ನೂ ಓದಿ … Read more

ತೀರ್ಥಹಳ್ಳಿಯಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡರು ಸಾವಿರ ಸಾವಿರ ಜನ

Thirthahalli-teppotsava-at-tunga-river.

SHIVAMOGGA LIVE NEWS, 2 JANUARY 2025 ತೀರ್ಥಹಳ್ಳಿ : ತುಂಗಾ ನದಿ ದಂಡೆ ಮೇಲೆ ಎಳ್ಳಮವಾಸ್ಯೆಯ ತೆಪ್ಪೋತ್ಸವ (Teppotsava) ವಿಜೃಂಭಣೆಯಿಂದ ನೆರವೇರಿತು. ತೆಪ್ಪೋತ್ಸವ ಸಂದರ್ಭ ಬಾನಂಗಳದಲ್ಲಿ ಸಿಡಿಮದ್ದುಗಳ ಆಕರ್ಷಕ ಚಿತ್ತಾರ ಜನರ ಕಣ್ಮನ ಸೆಳೆಯಿತು. ತುಂಗಾ ನದಿಯಲ್ಲಿ ಶ್ರೀರಾಮೇಶ್ವರ ದೇವರ ಉತ್ಸವಮೂರ್ತಿಯ ಆಕರ್ಷಕ ತೆಪ್ಪೋತ್ಸವ ನಡೆಯಿತು. ದೇವರ ತೆಪ್ಪವನ್ನು ವಿಭಿನ್ನವಾಗಿ ಅಲಂಕರಿಸಲಾಗಿತ್ತು. ತೆಪ್ಪೋತ್ಸವ ಆರಂಭಾಗುತ್ತಿದ್ದಂತೆ ಜನರು ಭಕ್ತಿಯಿಂದ ದೇವರಿಗೆ ನಮಿಸಿದರು. ಎಲ್ಲೆಲ್ಲೂ ಜನವೋ ಜನ ಶ್ರೀರಾಮೇಶ್ವರ ದೇವರ ಜಾತ್ರೆಯ ಪ್ರಮುಖ ಆಕರ್ಷಣೆ ತೆಪ್ಪೋತ್ಸವ ಮತ್ತು ಸಿಡಿಮದ್ದು … Read more

ತುಂಗಾ ನದಿ ಸೇತುವೆ ಕೆಳಗೆ ಮನುಷ್ಯನ ಅಸ್ಥಿಪಂಜರ ಪತ್ತೆ

bone-found-in-tunga-river-near-bridge-at-thirthahalli

SHIMOGA NEWS, 27 NOVEMBER 2024 ತೀರ್ಥಹಳ್ಳಿ : ತುಂಗಾ ನದಿ ಸೇತುವೆಯ ಕೆಳಗೆ ಮಾನವನ ಅಸ್ಥಿಪಂಜರ (Bone) ಪತ್ತೆಯಾಗಿದೆ. ಕೈ, ಕಾಲು, ಬುರುಡೆ ಪ್ರತ್ಯೇಕವಾಗಿದೆ. ಮೀನುಗಾರರ ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ತೀರ್ಥಹಳ್ಳಿಯ ತುಂಗಾ ನದಿ ಸೇತುವೆಯ ಕಂಬದ ಬಳಿ ಮೂಳೆಗಳು ಪತ್ತೆಯಾಗಿವೆ. ಪೊಲೀಸರು ಅವುಗಳನ್ನು ವಶಕ್ಕೆ ಪಡೆದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಒಂದೊಂದು ಮೂಳೆ ಒಬ್ಬಬ್ಬ ವ್ಯಕ್ತಿಯದ್ದು ಎಂದು ಪರೀಕ್ಷೆ ವೇಳೆ ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. … Read more

ತುಂಗಾ ನದಿಯಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಶವವಾಗಿ ಪತ್ತೆ

Bank-Manager-found-in-tunga-river-at-thirthahalli

THIRTHAHALLI NEWS, 20 NOVEMBER 2024 : ಮೊಬೈಲ್‌ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಬ್ಯಾಂಕ್‌ ಮ್ಯಾನೇಜರ್‌ (Manager) ಶವವಾಗಿ ಪತ್ತೆಯಾಗಿದ್ದಾರೆ. ತುಂಗಾ ನದಿಯಲ್ಲಿ ಅವರ ಮೃತದೇಹ ಸಿಕ್ಕಿದೆ. ತೀರ್ಥಹಳ್ಳಿ ತಾಲೂಕು ಅರಳಸುರಳಿಯ ಯುನಿಯನ್‌ ಬ್ಯಾಂಕ್‌ ಮ್ಯಾನೇಜರ್‌ ಶ್ರೀವತ್ಸ (38) ಮೃತರು. ತುಂಗಾ ನದಿ ದಡದಲ್ಲಿ ಮೊಬೈಲ್‌ ಮತ್ತು ಚಪ್ಪಲಿ ಪತ್ತೆಯಾಗಿತ್ತು. ಮೊಬೈಲ್‌ ಪರಿಶೀಲಿಸಿದಾಗ ಶ್ರೀವತ್ಸ ಅವರಿಗೆ ಸೇರಿದ್ದು ಎಂದು ಗೊತ್ತಾಗಿತ್ತು. ಚಪ್ಪಲಿ ಮತ್ತು ಮೊಬೈಲ್‌ ದಡದ ಮೇಲೆ ಬಿಟ್ಟು ತುಂಗಾ ನದಿಯಲ್ಲಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿತ್ತು. … Read more

ತುಂಗಾ ನದಿಯಲ್ಲಿ ಬ್ಯಾಂಕ್‌ ಮ್ಯಾನೇಜರ್‌ಗಾಗಿ ಶೋಧ

Thirthahalli-Tunga-Bridge

THIRTHAHALLI NEWS, 19 NOVEMBER 2024 : ತೀರ್ಥಹಳ್ಳಿಯಲ್ಲಿ ತುಂಗಾ ನದಿಯಲ್ಲಿ ಬ್ಯಾಂಕ್‌ ಮ್ಯಾನೇಜರ್‌ (Manager) ಒಬ್ಬರು ಕಣ್ಮರೆಯಾಗಿರುವ ಶಂಕೆ ವ್ಯಕ್ತವಾಗಿದೆ. ಅವರ ಚಪ್ಪಲಿ ಮತ್ತು ಮೊಬೈಲ್‌ ಫೋನ್‌ ನದಿ ದಂಡೆ ಮೇಲೆ ಪತ್ತೆಯಾಗಿದೆ. ತೀರ್ಥಹಳ್ಳಿಯ ತುಂಗಾ ನದಿ ಸೇತುವೆ ಸಮೀಪ ದಂಡೆ ಮೇಲೆ ಚಪ್ಪಲಿ ಮತ್ತು ಮೊಬೈಲ್‌ ಪತ್ತೆಯಾಗಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೊಬೈಲ್‌ ಪರಿಶೀಲಿಸಿದಾಗ ಅದು ಬ್ಯಾಂಕ್‌ ಮ್ಯಾನೇಜರ್‌ಗೆ ಒಬ್ಬರಿಗೆ ಸೇರಿದ್ದು ಎಂದು ಗೊತ್ತಾಗಿದೆ. ಹಾಗಾಗಿ ಅಗ್ನಿಶಾಮಕ ಸಿಬ್ಬಂದಿ ತುಂಗಾ ನದಿಯಲ್ಲಿ ಶೋಧ … Read more

ತುಂಗಾ ನದಿ, ಹಸು ಮೈ ತೊಳೆಯಲು ಹೋದ ವ್ಯಕ್ತಿ ನಾಪತ್ತೆ

-Bhadrapura-tunga-river-emergency-rescue-team.

BHADRAVATHI NEWS, 18 NOVEMBER 2024 : ತುಂಗಭದ್ರಾ ನದಿಯಲ್ಲಿ (River) ಹಸುಗಳ ಮೈ ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದಾರೆ. ಭದ್ರಾವತಿ ತಾಲೂಕು ಭದ್ರಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅಶ್ರಫ್‌ (42) ಎಂಬುವವರು ಹಸುಗಳ ಮೈ ತೊಳೆಯಲು ನದಿ ಬಳಿ ತೆರಳಿದ್ದರು. ಕಾಣೆಯಾದ ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ 15ಕ್ಕೂ ಹೆಚ್ಚು ಬಸ್‌ಗಳ ಮೇಲೆ ದಾಳಿ

ಶಿವಮೊಗ್ಗದಲ್ಲಿ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ ವ್ಯಕ್ತಿ

rescue-operation-at-tunga-river-in-shimoga

SHIMOGA NEWS, 9 OCTOBER 2024 : ತುಂಗಾ ನದಿ (RIVER) ಮಧ್ಯೆ ಬಂಡೆ ಮೇಲೆ ಸಿಲುಕಿದ್ದ ವ್ಯಕ್ತಿಯೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಹಳೆ ಸೇತುವೆ ಪಕ್ಕದಲ್ಲಿರುವ ಬಂಡೆ ಮೇಲೆ ವ್ಯಕ್ತಿ ಸಿಲುಕಿದ್ದ. ಗೋಪಾಲ್‌ (35) ಎಂಬಾತ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಕುಳಿತಿದ್ದ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ರಾತ್ರಿ ಅಲ್ಲೇ ಮಲಗಿದ್ದ ಗೋಪಾಲ್‌ ಕಳೆದ ರಾತ್ರಿ ತುಂಗಾ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ … Read more

ಶಿವಮೊಗ್ಗದಲ್ಲಿ ವೈವಭದ ತೆಪ್ಪೋತ್ಸವ, ಕಣ್ತುಂಬಿಕೊಂಡ ಜನಸಾಗರ, ಇಲ್ಲಿದೆ 12 ಫೋಟೊಗಳು

Shimoga-Tunga-River-Teppotsava-Kote-Temple

SHIVAMOGGA LIVE NEWS | 28 DECEMBER 2023 SHIMOGA : ಸೀತಾ ಕಲ್ಯಾಣೋತ್ಸವದ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ ಇವತ್ತು ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮೂರ್ತಿಗಳನ್ನು ತೆಪ್ಪದಲ್ಲಿ ಇರಿಸಿ, ತುಂಗಾ ನದಿಯಲ್ಲಿ ಉತ್ಸವ ನೆರವೇರಿಸಲಾಯಿತು. ಇದನ್ನೂ ಓದಿ – ಕುಪ್ಪಳಿಯಲ್ಲಿ ರಾಷ್ಟ್ರಕವಿಯ ಜನ್ಮದಿನೋತ್ಸವ, ಬಂಗಾಳಿ ಸಾಹಿತಿಗೆ ಪ್ರಶಸ್ತಿ ಪ್ರದಾನ, … Read more

ತುಂಗಾ ನದಿ, ‘5 ವರ್ಷ ಒಂದು ದಿನವು ಸ್ವಚ್ಛತೆ ಚರ್ಚೆಯಿಲ್ಲ, ಕೊನೆ ದಿನ ಕಾಟಾಚಾರದ ಮಾತು’

011223-AAP-Press-Meet-in-Shimoga-about-Tunga-River.webp

SHIVAMOGGA LIVE NEWS | 1 DECEMBER 2023 SHIMOGA : ತುಂಗಾ ನದಿ (Tunga River) ಮಲಿನ ವಾಗುತ್ತಿದ್ದರೂ ಅದನ್ನು ತಡೆಯಲು ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕಳೆದ 5 ವರ್ಷ ಪಾಲಿಕೆಯಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಒಂದು ದಿನವೂ ನದಿಯ ಸ್ವಚ್ಛತೆ ಬಗ್ಗೆ ಧ್ವನಿ ಎತ್ತಲಿಲ್ಲ. ಆದರೆ ತನ್ನ ಅವಧಿ ಮುಗಿಯುವ ಕೊನೆ ದಿನ ಕಾಟಾಚಾರಕ್ಕಾಗಿ ತುಂಗಾ ನದಿ (Tunga River) ಸ್ವಚ್ಛತೆ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ ಎಂದು ಎಎಪಿ … Read more

ತುಂಗಾ ನದಿಯಲ್ಲಿ ಹಾಲು ವ್ಯಾಪಾರಿಯ ಮೃತದೇಹ ಪತ್ತೆ

Thirthahalli-Tunga-Bridge

SHIVAMOGGA LIVE NEWS | 27 OCTOBER 2023 THIRTHAHALLI : ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ತುಂಗಾ ನದಿಯಲ್ಲಿ (Tunga River) ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ ಗಾಯತ್ರಿ ಮಂದಿರ ಸಮೀಪದ ನಿವಾಸಿ ದೇವರಾಜ್ (52) ಮೃತದೇಹ ಪಟ್ಟಣದ ತುಂಗಾನದಿಯಲ್ಲಿ ಪತ್ತೆಯಾಗಿದೆ.  ಮನೆಗಳಿಗೆ ಹಾಲು ಹಾಕುವ ವ್ಯಾಪಾರ ಮಾಡುತ್ತಿದ್ದರು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಕೇಕ್‌ ತಯಾರಿಕೆಗೆ ಒಂದು … Read more