ಕಮಲಾ ನೆಹರು ಕಾಲೇಜು ಬಳಿ ಪಾಲಿಕೆ ಜಾಗಕ್ಕೆ ಉಪ ಲೋಕಾಯುಕ್ತ ದಿಢೀರ್ ಭೇಟಿ, ಅಧಿಕಾರಿಗಳ ವಿರುದ್ಧ ಸಿಡಿಮಿಡಿ
ಶಿವಮೊಗ್ಗ : ನಗರದ ಕಮಲಾ ನೆಹರು ಮಹಿಳಾ ಕಾಲೇಜು ಪಕ್ಕದಲ್ಲಿ ಮಹಾನಗರ ಪಾಲಿಕೆಗೆ ಸೇರಿದ ಜಾಗಕ್ಕೆ ಶುಕ್ರವಾರ ಭೇಟಿ (VISIT) ನೀಡಿದ ಉಪಲೋಕಾಯುಕ್ತ ನ್ಯಾ.ಫಣೀಂದ್ರ ಅಲ್ಲಿನ ಅವ್ಯವಸ್ಥೆ ಸರಿಪಡಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಕಾಲೇಜಿಗೆ ಹೊಂದಿಕೊಂಡಿರುವ ಈ ಖಾಲಿ ಜಾಗದಲ್ಲಿ ತ್ಯಾಜ್ಯ, ಒಡೆದ ಮದ್ಯದ ಬಾಟಲಿಗಳು ತುಂಬಿದ್ದವು. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದರು. ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆ ಹಲವು ದೂರುಗಳನ್ನು ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಉಪಲೋಕಾಯುಕ್ತರು ಭೇಟಿ ನೀಡಿದರು. ತ್ಯಾಜ್ಯ, ಮದ್ಯದ ಬಾಟಲಿ ಕಂಡು ಅಸಮಾಧಾನ … Read more