ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿ ಸಾಮೂಹಿಕವಾಗಿ ಸಾವಿರ ಜನರಿಂದ ವಚನ ಗಾಯನ, ಹೇಗಿರುತ್ತೆ ಕಾರ್ಯಕ್ರಮ?
ಶಿವಮೊಗ್ಗ: ಬಸವೋತ್ಸವದ ಅಂಗವಾಗಿ ಇದೇ ಮೊದಲ ಬಾರಿ ಸಾವಿರ ಜನರಿಂದ ವಚನ (Vachana) ಪಠಿಸುವ ಸಾವಿರದ ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮೇ 9ರಂದು ಸಂಜೆ 5.30ರಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಆಚರಣಾ ಸಮಿತಿ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ಇದೇ ಮೊದಲು ಸಾವಿರಕ್ಕು ಹೆಚ್ಚು ಜನರು ವಚನ (Vachana) ಪಠಿಸುವ ಪ್ರಯತ್ನವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದ ವಿವಿಧ ಠಾಣೆ ಇನ್ಸ್ಪೆಕ್ಟರ್ಗಳ … Read more