ಶಿವಮೊಗ್ಗದ ಕಲ್ಲಗಂಗೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ

010921 Raid At Kallagangur by Excise Department

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಶಿವಮೊಗ್ಗದ ಕಲ್ಲಗಂಗೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೆಕ್ಕೆ ಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಕಲ್ಲಗಂಗೂರಿನ ಈಶ್ವರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆ ಜೋಳ ಬೆಳೆಯಲಾಗಿತ್ತು. ಇದರ ನಡುವೆ ಯಾರಿಗೂ ಕಾಣದ ಹಾಗೆ ಗಾಂಜಾ ಬೆಳೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30 … Read more

BREAKING NEWS | ಯುವತಿ ಅನುಮಾನಾಸ್ಪದ ಸಾವು, ರಿಪ್ಪನ್ ಪೇಟೆ ಬಳಿ ಸಿಕ್ತು ಮೃತದೇಹ

breaking news graphics

ಶಿವಮೊಗ್ಗ ಲೈವ್.ಕಾಂ | RIPPONPETE NEWS | 26 ಆಗಸ್ಟ್ 2021 ಕಾಡಿನಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಹಲವು ಅನುಮಾನ ಉಂಟಾಗಿದೆ. ರಿಪ್ಪನ್’ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಳಗಿ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇಲ್ಲಿನ ಹೊಸಕೆರೆ ಕೆರೆ ಬಳಿ ಯುವತಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾರದು ಯುವತಿ? ಸಾವಿಗೇನು ಕಾರಣ? ಮೃತ ಯುವತಿ ಭಟ್ಕಳ ಮೂಲದವಳು ಎಂದು ಹೇಳಲಾಗುತ್ತಿದೆ. ಈಕೆ ಸಾವಿಗೆ ನಿಖರ ಕಾರಣ ತಿಳಿದು … Read more

ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಗೃಹ ಸಚಿವರ ಪ್ರತಿಕ್ರಿಯೆ, ರಸ್ತೆಯಲ್ಲಿ ಸಸಿ ನೆಟ್ಟವರಿಗೆ ಖುಷಿ ಸುದ್ದಿ

Home Minister Araga jnanendra

ಶಿವಮೊಗ್ಗ ಲೈವ್.ಕಾಂ | BANGALORE / SHIMOGA NEWS | 25 ಆಗಸ್ಟ್ 2021 ಕೆಸರುಮಯ ರಸ್ತೆಯಲ್ಲಿ ಸಸಿ ನೆಟ್ಟು ದುರವಸ್ಥೆ ವಿರುದ್ಧ ಬೊಂಬಳಿಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಬೊಂಬಳಿಗೆ ಮೇಲುಕೊಪ್ಪದ ಮೂಲಕ ಒಂದು ರಸ್ತೆ ಇದೆ. ಕಾಲು ಸಂಕವನ್ನು ಕೂಡ ಮಾಡಿಸಿದ್ದೇವೆ. ಆದಷ್ಟು ಬೇಗ ಗ್ರಾಮಕ್ಕೆ ರಸ್ತೆ ಮಾಡಿಸುತ್ತೇವೆ ಎಂದು … Read more

ರಸ್ತೆಯಲ್ಲೇ ನಾಟಿ ಮಾಡಿದ ಗ್ರಾಮಸ್ಥರು, ಇಲ್ಲಿಂದ ‘ಸ್ವರ್ಗಕ್ಕೆ ಮೂರೇ ಗೇಣು’, ಗೃಹ ಸಚಿವರ ತವರಲ್ಲಿ ಕೇಳೋರಿಲ್ವಾ ಇವರ ಗೋಳು?

250821 Thirthahalli Bombale Villagers Protest for Road

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಆಗಸ್ಟ್ 2021 ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗ್ರಾಮಸ್ಥರು ಸಸಿ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಷ್ಟೆ ಅಲ್ಲ, ಗ್ರಾಮಸ್ಥರನ್ನು ಸಂಕಷ್ಟಕ್ಕೆ ದೂಡಿದ ಆಡಳಿತದ ವಿರುದ್ಧ ಆಕ್ರೋಶವು ವ್ಯಕ್ತವಾಗುತ್ತಿದೆ. ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಂಬಳಿಗೆ ಗ್ರಾಮದ ಸಂಪರ್ಕ ರಸ್ತೆ ಹದಗೆಟ್ಟು ಹೋಗಿದೆ. ರಸ್ತೆಗಳಲ್ಲಿ ಗುಂಡಿಗಳಿವೆಯೋ, ಗುಂಡಿಯ ನಡುವೆ ರಸ್ತೆ ನಿರ್ಮಾಣವಾಗಿದೆಯೋ ಅನ್ನುವುದು ಗೊತ್ತಾಗುವುದಿಲ್ಲ. ಅಷ್ಟೇ … Read more

ಹಾಡೋನಹಳ್ಳಿಯಲ್ಲಿ ಮನೆ ಬಾಗಿಲು ಮುರಿದ ಖದೀಮರು, ಚಿನ್ನಾಭರಣ, ನಗದು ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಆಗಸ್ಟ್ 2021 ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಚಿನ್ನಾಭರಣ ಮತ್ತು ಹಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹಾಡೋನಹಳ್ಳಿಯ ಮಂಜುಳಾ ಎಂಬುವವರು ತಮ್ಮ ಸಹೋದರಿಯ ಮನೆಗೆ ತೆರಳಿದ್ದರು. ಈ ವೇಳೆ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯ ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಜುಮುಕಿ, ಬಟನ್ಸ್, ಕಾಲುಚೈನ್, ಬೆಳ್ಳಿಯ ಗುಂಡು, ಅರಿಶಿಣ ಕುಂಕುಮದ ಬೆಳ್ಳಿ ಬಟ್ಟಲು, ಐದು ಸಾವಿರ ರೂ. … Read more

ಶಿವಮೊಗ್ಗದಲ್ಲಿ ಮನೆಗೆ ನುಗ್ಗಿ ದರೋಡೆ, ಮಗು ಸಾಯಿಸುವುದಾಗಿ ಬೆದರಿಸಿ ಹಣ, ಚಿನ್ನಾಭರಣ ದೋಚಿ ಪರಾರಿ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ಮಂಕಿ ಕ್ಯಾಪ್ ಧರಿಸಿಕೊಂಡು ಬಂದು ಮನೆಯೊಂದಕ್ಕೆ ನುಗ್ಗಿ ಹಾಡಹಗಲೆ ದರೋಡೆ ಮಾಡಲಾಗಿದೆ. ಮನೆಯಲ್ಲಿದ್ದ ಒಬ್ಬರಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಯಾರಾದರೂ ಕಿರುಚಾಡಿದರೆ ಮಗುವನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ, ಹಣ, ಚಿನ್ನಾಭರಣ ಕದ್ದೊಯ್ಯಲಾಗಿದೆ. ಶಿವಮೊಗ್ಗ ತಾಲೂಕು ಚಿಕ್ಕಮರಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜಯಣ್ಣಗೌಡ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ. ಮಂಕಿ ಕ್ಯಾಪ್ ಧರಿಸಿ, ಎರಡು ಬೈಕ್’ನಲ್ಲಿ ಬಂದ ನಾಲ್ವರು ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೇಗಾಯ್ತು … Read more

ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡು ಉಸಿರುಗಟ್ಟಿ ಬಾಲಕ ಸಾವು

HIVAMOGGA-NEWS- map

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮಕ್ಕಳ ಆಟಕ್ಕಾಗಿ ಕಟ್ಟಿದ್ದ ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡ ಪರಿಣಾಮ ಬಾಲಕನೊಬ್ಬ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಕಿಶೋರ್ (13) ಮೃತ ಬಾಲಕ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಕಿಶೋರ್, ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದವನು. ಹಾಡೋನಹಳ್ಳಿಯ ದೊಡ್ಡಮ್ಮ ಜಯಮ್ಮ ಎಂಬುವರ ಮನೆಯಲ್ಲಿದ್ದುಕೊಂಡು ಕಿಶೋರ್‌ ವಿದ್ಯಾಭ್ಯಾಸ ಮಾಡುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಣ್ಣ ಮಗುವಿಗಾಗಿ ಕಟ್ಟಿದ ಸೀರೆಯಲ್ಲಿ ಜೋಕಾಲಿ … Read more

ಹೊಳಲೂರು ಸುತ್ತಮುತ್ತ ಅಧಿಕಾರಿಗಳಿಂದ ದಿಢೀರ್ ದಾಳಿ, 25 ಕೇಸ್ ದಾಖಲು

HOLALURU NEWS 1

ಶಿವಮೊಗ್ಗ ಲೈವ್.ಕಾಂ | HOLALUR NEWS | 8 ಜುಲೈ 2021 ಹೊಳಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಅಧಿಕಾರಿಗಳು ಹಲವು ಕಡೆ ದಿಢೀರ್ ದಾಳಿ ನಡೆಸಿ, 25 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. 2500 ರೂ. ದಂಡವನ್ನು ಸಂಗ್ರಹಿಸಲಾಗಿದೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್  ಅರಸ್, ರವಿರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ ಮತ್ತು ಪೊಲೀಸರು ದಾಳಿಯಲ್ಲಿ ಭಾಗವಹಿಸಿದ್ದರು. (ಶಿವಮೊಗ್ಗ ಲೈವ್.ಕಾಂ … Read more

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

270621 Car Accident near Anandapuram 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 27 JUNE 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದಿದ್ದು, ಚಾಲಕನ ಕುತ್ತಿಗೆಗೆ ಪೆಟ್ಟಾಗಿದೆ. ಆನಂದಪುರ ಸಮೀಪದ ಪತ್ರೆಹೊಂಡೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರ ಬಸ್ ತಂಗುದಾಣದ ಪಕ್ಕದ ಚರಂಡಿಗೆ ಕಾರು ಬಿದ್ದಿತ್ತು.  ಚಾಲಕ ಶೇಖರ್  (34) ಗಾಯಗೊಂಡಿದ್ದಾರೆ. ಕುತ್ತಿಗೆ ಭಾಗಗಕ್ಕೆ ಪೆಟ್ಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಸೊರಬದ ಉಳಿವಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ … Read more

ತೀರ್ಥಹಳ್ಳಿಯಲ್ಲಿ ಕಾಡು ಹಂದಿ ದಾಳಿ, ಮಹಿಳೆಗೆ ಗಂಭೀರ ಗಾಯ

Thirthahalli Name Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಜೂನ್ 2021 ಕಾಡು ಹಂದಿ ದಾಳಿಗೆ ಮಹಿಳೆಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಬಂದ್ಯಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಲಲಿತಾ (39) ಕಾಡು ಹಂದಿ ದಾಳಿಗೆ ತುತ್ತಾದ ಮಹಿಳೆ. ಹುಲ್ಲು ಕೊಯ್ದುಕೊಂಡು ಬರಲು ಹೋದಾಗ ಘಟನೆ ಸಂಭವಿಸಿದೆ. ಭಾನುವಾರ ಸಂಜೆ ಹಂದಿ ದಾಳಿ ಮಾಡಿದೆ. ಲಲಿತಾ ಅವರ ಗಂಟಲು ಭಾಗಕ್ಕೆ ತಿವಿದಿದ್ದರಿಂದ ತೀವ್ರ ರಕ್ತಸ್ರಾವ ಉಂಟಾಗಿತ್ತು.‌ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಶಿವಮೊಗ್ಗದ … Read more