ಅರಹತೊಳಲು, ಯಡೇಹಳ್ಳಿ ಸುತ್ತಮುತ್ತ ಮಾರ್ಚ್ 13ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

POWER-CUT-UPDATE-NEWs ELECTRICITY

SHIVAMOGGA LIVE NEWS | 11 ಮಾರ್ಚ್ 2022 ರಸ್ತೆ ಅಗಲೀಕರಣದ ಹಿನ್ನೆಲೆ ಮರಗಳ ಕಡಿತಲೆ ಮಾಡಲಾಗುತ್ತಿದೆ. ಆದ್ದರಿಂದ ಹೊಳೆಹೊನ್ನೂರು, ಯಡೇಹಳ್ಳಿ, ಕೈಮರ ಫೀಡರ್’ಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಆದ್ದರಿಂದ ವಿವಿಧೆಡೆ ಮಾರ್ಚ್ 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಂಚಿನಸಿದ್ದಾಪುರ, ಕೊಪ್ಪ, ಮೂಡಲ ವಿಠಲಾಪುರ, ಜಂಬರಘಟ್ಟಿ, ಕರೆಬೀರನಹಳ್ಳಿ, ಶ್ರೀನಿವಾಸಪುರ, ಸಿದ್ಧರ ಕಾಲೋನಿ, ಚಂದನಕರ, ಆರಹತೊಳಲು, ಹನುಮಂತಾಪುರ, ಯಡೇಹಳ್ಳಿ, ಆಗರದಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. … Read more

ಮನವಿ ಕೊಟ್ಟೂ ಕೊಟ್ಟೂ ಹೈರಾಣು, ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸತ್ಯಾಗ್ರಹ ಶುರು

Dasrakallahalli-Villagers-Protest-Suragitopu

SHIVAMOGGA LIVE NEWS | 11 ಮಾರ್ಚ್ 2022 ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಗ್ರಾಮಸ್ಥರು ಸತ್ಯಾಗ್ರಹ ಆರಂಭಿಸಿದ್ದಾರೆ. ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ. ಇಲ್ಲಿನ ಸುರಗಿತೋಪು ಗ್ರಾಮದ ನಿವಾಸಿಗಳು ಬೆಳಗ್ಗೆಯಿಂದ ಸತ್ಯಾಗ್ರಹ ನಡೆಸುತ್ತಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಮನಿವಿ ಕೊಟ್ಟಾಯ್ತು ಸುರಗಿತೋಪು ಗ್ರಾಮದ ಸರ್ವೆ ನಂಬರ್ 16ರಲ್ಲಿ ಸುಮಾರು 20 ಕುಟುಂಬಗಳಿವೆ. ಗುಡಿಸಲಿನಲ್ಲಿ ಇವರು ವಾಸವಾಗಿದ್ದಾರೆ. ಮನೆ ಮತ್ತು ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಹಲವು ವರ್ಷದಿಂದ ಈ … Read more

ಅರಲಗೋಡು ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮೇಲೆ ಬಿದ್ದ ಮರ

sagara graphics

SHIVAMOGGA LIVE NEWS | 7 ಮಾರ್ಚ್ 2022 ಸರ್ಕಾರಿ ವಸತಿ ಗೃಹದ ಮೇಲೆ ಮರ ಉರುಳಿ, ಮನೆ ಮತ್ತು ಅದರ ಮುಂದೆ ನಿಲ್ಲಸಿದ್ದ ಬೈಕ್ ಸಂಪೂರ್ಣ ಹಾನಿಗೀಡಾಗಿವೆ. ಸಾಗರ ತಾಲೂಕು ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಆರೋಗ್ಯ ಸಹಾಯಕಿ ಗೌರಮ್ಮ ಅವರ ಸರ್ಕಾರಿ ವಸತಿಗೃಹದ ಮೇಲೆ ಮರ ಬಿದ್ದಿದೆ. ಮನೆಯಲ್ಲಿ ಇದ್ದವರಿಗೆ ಯಾವುದೆ ಸಮಸ್ಯೆ ಆಗಿಲ್ಲ. ಮರ ಬಿದ್ದಿದ್ದರಿಂದ ಮನೆ ನೆಲಸಮವಾಗಿದೆ. ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್’ಗೆ ಹಾನಿಯಾಗಿದೆ. ಇನ್ನು, ವಿಚಾರ … Read more

ಅರಸಾಳು ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆ ಜಾಗ ಕಬಳಿಕೆ, ಹೋರಾಟಗಾರರಿಂದ ಪರಿಶೀಲನೆ

Lake-Survey-at-Arasalu-Village

SHIVAMOGGA LIVE NEWS | 6 ಮಾರ್ಚ್ 2022 ಕೆರೆ ಒಂದನ್ನು ಒತ್ತುವರಿ ಮಾಡಿ ಆ ಜಾಗದಲ್ಲಿ ಬೆಳೆ ಬೆಳೆಯುತ್ತಿರುವ ಆರೋಪದ ಹಿನ್ನೆಲೆ, ಇವತ್ತು ಪರಿಸರ ಪ್ರಿಯರ ತಂಡ ಪರಿಶೀಲನೆ ನಡೆಸಿತು. ಒತ್ತುವರಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡು ನೂರಾರು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪರಿಸರ ಪ್ರಿಯರು ಆಗ್ರಹಿಸಿದ್ದಾರೆ. ಹೊಸನಗರ ತಾಲೂಕು ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಗುಡ್ಡದ ತೋಟ ಎಂಬಲ್ಲಿ ಕೆರೆ ಒತ್ತುವರಿ ಆಗಿರುವ ಆರೋಪವಿದೆ. ಈ … Read more

ತಹಶೀಲ್ದಾರ್, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿ ನಾಲ್ವರ ವಿರುದ್ಧ ಶಿವಮೊಗ್ಗದಲ್ಲಿ ಕೇಸ್

crime name image

SHIVAMOGGA LIVE NEWS | 2 ಮಾರ್ಚ್ 2022 ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ದೂರು ನೀಡಿದೆ. ತಹಶೀಲ್ದಾರ್, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿ ನಾಲ್ಕು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಸುಳ್ಳು ಮಾಹಿತಿ ನೀಡಿ ವೈ.ಸಿ.ಶೇಷಪ್ಪ ಎಂಬುವವರು ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ಜಿಲ್ಲಾಧಿಕಾರಿ ಅವರು … Read more

ರಾತ್ರೋರಾತ್ರಿ ಅಡಕೆ, ಬಾಳೆ ತೋಟದ ಮೇಲೆ ಆನೆಗಳ ದಾಳಿ

Mandagadde Graphics by smg live

SHIVAMOGGA LIVE NEWS | 28 ಫೆಬ್ರವರಿ 2022 ಮಂಡಗದ್ದೆ ಸಮೀಪ ಕಾಡಾನೆಗಳ ಹಾವಳಿ ಶುರುವಾಗಿದೆ. ತೋಟಗಳಿಗೆ ದಾಳಿ ಮಾಡಿ ಅಡಕೆ, ಬಾಳೆ ಬೆಳೆಗೆ ಹಾನಿ ಮಾಡುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಆನೆಗಳ ಗುಂಪು ಮಂಡಗದ್ದೆ ಸಮೀಪದ ಕೀಗಡಿ, ಮೇಲಿನ ಕೀಗಡಿ, ಮೂಡ್ಲುಮನೆ ಭಾಗದಲ್ಲಿ ಓಡಾಡಿಕೊಂಡಿವೆ. ರಾತ್ರಿ ವೇಳೆ ತೋಟಗಳಿಗೆ ದಾಳಿ ಮಾಡುತ್ತಿರುವ ಆನೆಗಳು ಬೆಳೆ ಹಾನಿ ಮಾಡುತ್ತಿವೆ. ಆದ್ದರಿಂದ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಕೀಗಡಿಯ ಶೇಶಪ್ಪ, ಧರ್ಮಣ್ಣಪ್ಪ, ಹೇಮೇಶ್, ಉಪೇಂದ್ರ ಗೌಡ  ಅವರ ತೋಟಗಳಿಗೆ ಆನೆಗಳು … Read more

ಗ್ರಾಮ ಲೆಕ್ಕಾಧಿಕಾರಿಯನ್ನು ತಳ್ಳಾಡಿ, ಅವಾಚ್ಯವಾಗಿ ನಿಂದಿಸಿದ ಆರೋಪ, ಮೂವರ ವಿರುದ್ಧ ಕೇಸ್

Shimoga Map Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022 ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವ ಮಾಹಿತಿ ಹಿನ್ನೆಲೆ, ಪರಿಶೀಲನೆಗೆ ತೆರಳಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ತಳ್ಳಾಡಿ, ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಬಸವನಗಂಗೂರು ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ನಾಯ್ಕ್ ಅವರು ಪರಿಶೀಲನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಬಸವನಗಂಗೂರು ಗ್ರಾಮದ ಜಮೀನು ಒಂದರಲ್ಲಿ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿತ್ತು. ಈ ಕುರಿತು ಗ್ರಾಮ … Read more

ತೀರ್ಥಹಳ್ಳಿಯಲ್ಲಿ ದನದ ಕೊಟ್ಟಿಗೆಗೆ ಬೆಂಕಿ, ಅಪಾರ ಹಾನಿ

180122 Fire at Kottige in Thirthahalli

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 18 ಜನವರಿ 2022 ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ತೀರ್ಥಹಳ್ಳಿ ತಾಲೂಕಿನ ತ್ರಿಯಂಬಕಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಕ್ಲಾಪುರ ಗ್ರಾಮದ ಹಿತ್ತಲಸರದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ರಾಮಸ್ವಾಮಿ ಅವರ ಮನೆಯ ದನದ ಕೊಟ್ಟಿಗೆ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ ಒಣಹುಲ್ಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ … Read more

ಶಿವಮೊಗ್ಗದಲ್ಲಿ ಮತ್ತೆ ‘ಕೆಂಪು ಪೌಡರ್ ಗ್ಯಾಂಗ್’ ಪ್ರತ್ಯಕ್ಷ, ಮಹಿಳೆಗೆ ವಂಚನೆ

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS |  26 ಡಿಸೆಂಬರ್ 2021 ಚಿನ್ನಾಭರಣ ಹೊಳೆಯುವಂತೆ ಮಾಡುವುದಾಗಿ ನಂಬಿಸಿ, ವಂಚಿಸುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವೃದ್ಧೆಯೊಬ್ಬರಿಂದ ಒಂದು ಲಕ್ಷ ಮೌಲ್ಯದ ಚಿನ್ನದ ಸರವನ್ನು ಕದ್ದೊಯ್ಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ವಂಚಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಶಿವಮೊಗ್ಗ ತಾಲೂಕು ಹಾರನಹಳ್ಳಿ ಕೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸೀತಮ್ಮ (72) ಎಂಬುವವರ ಮಾಂಗಲ್ಯ ಸರವನ್ನು ಕಳವು ಮಾಡಲಾಗಿದೆ. ಕೆಂಪು ಪೌಡರ್ ಹಚ್ಚಿ ಯಾಮಾರಿಸಿದರು ಶನಿವಾರ ಮಧ್ಯಾಹ್ನ ಸೀತಮ್ಮ … Read more

ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದ ಸದಸ್ಯರ ಪೈಕಿ ಇಬ್ಬರ ಹೊರತು ಉಳಿದವರಿಂದ ವೋಟಿಂಗ್

291121 Naluru Village Election bahishkar vidhana parishad

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 10 ಡಿಸೆಂಬರ್ 2021 ಮತದಾನ ಬಹಿಷ್ಕಾರದ ನಿರ್ಧಾರ ಪ್ರಕಟಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಪೈಕಿ ಇಬ್ಬರ ಹೊರತು ಉಳಿದವರು ಮತದಾನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಲಾಗಿತ್ತು. ಮರಳು ಕ್ವಾರಿಗಳ ರಾಜಧನ ಬಿಡುಗಡೆ ಮಾಡಲು, ಸರ್ಕಾರ ವಿಳಂಬ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿಯ ಏಳು ಸದಸ್ಯರು ನಿರ್ಧರಿಸಿದ್ದರು. ಐವರು ಮತದಾನ ಮಾಡಿದರು … Read more