ಕಣದಲ್ಲಿ ಒಣಗಿಸಲು ಹಾಕಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ
SHIVAMOGGA LIVE NEWS | 1 ಮಾರ್ಚ್ 2022 ಮನೆಯ ಕಣದಲ್ಲಿ ಒಣಗಿಸಲು ಹಾಕಿದ್ದ ಅಡಕೆ ರಾತ್ರೋರಾತ್ರಿ ನಾಪತ್ತೆ ಆಗಿದೆ. 1.50 ಲಕ್ಷ ಮೌಲ್ಯದ ಅಡಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ನಾಗರಾಜ ಎಂಬುವವರಿಗೆ ಸೇರಿದ ಅಡಕೆ ಕಳ್ಳತನವಾಗಿದೆ. ತಮ್ಮ ತೋಟದಲ್ಲಿ ಬೆಳೆದ ಸಿಪ್ಪೆಗೋಟು ಅಡಕೆಯನ್ನು ಅವರು ಮನೆ ಹಿಂಭಾಗದ ಕಣದಲ್ಲಿ ಒಣಗಿಸಿದ್ದರು. ಕಳೆದ ಶುಕ್ರವಾರ ಸಂಜೆ ಒಣಗಿಸಿದ್ದ ಅಡಕೆಯನ್ನ ನಾಗರಾಜ ಅವರು ನೋಡಿಕೊಂಡು ಬಂದಿದ್ದರು. ಅದನ್ನು ಸರಿ ಮಾಡಿಟ್ಟು ಬಂದಿದ್ದರು. … Read more