ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022
ತಾಳಗುಪ್ಪ – ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಅರಸೀಕೆರೆವರೆಗೆ ಸೀಮಿತಗೊಳಿಸಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಫೆ.16 ರಿಂದ ಫೆ.25ರವರೆಗೆ ತಾಳಗುಪ್ಪದಿಂದ ಹೊರಡುವ ರೈಲು ಅರಸೀಕೆರೆವರೆಗೆ ಮಾತ್ರ ಸಂಚಾರ ಮಾಡಲಿದೆ.
ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 5.15ಕ್ಕೆ ಹೊರಡಲಿದೆ. ರೈಲು ಸಾಗರಕ್ಕೆ ರೈಲ್ವೆ ನಿಲ್ದಾಣಕ್ಕೆ 5.30ಕ್ಕೆ ತಲುಪುತ್ತದೆ. ಬೆಳಗ್ಗೆ 7 ಗಂಟೆಗೆ ಶಿವಮೊಗ್ಗಕ್ಕೆ ಬರಲಿದೆ. ಭದ್ರಾವತಿಗೆ 7.25ಕ್ಕೆ ತಲುಪುತ್ತದೆ. ಬೆಳಗ್ಗೆ 8.55ಕ್ಕೆ ಅರಸೀಕೆರೆ ತಲುಪಲಿದೆ.