ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 21 ಫೆಬ್ರವರಿ 2022
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ಅವರು ಆದೇಶ ಹೊರಡಿಸಿದ್ದಾರೆ.
ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು ಮುಚ್ಚಬೇಕು, ಚಲನಚಿತ್ರ ಪ್ರದರ್ಶನ ನಿಷೇಧಿಸಲಾಗಿದೆ.
ಶಾಲೆಗಳಿಗೆ ರಜೆ ಘೋಷಣೆ
ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಫೆ.21ರಂದು 1 ರಿಂದ 10 ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷಗಳನ್ನು ಕೂಡ ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಪ್ರದೀಪ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಬೈಕ್ ಸಂಚಾರ ನಿಷೇಧ, ಅಂಗಡಿಗಳು ಬಂದ್ ಮಾಡಲು ಟೈಮ್ ಫಿಕ್ಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200