SHIVAMOGGA LIVE NEWS | 3 SEPTEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOLEHONNURU : ಅರ್ಧ ಎಕರೆಯಲ್ಲಿ ನಾಟಿ ಮಾಡಿದ್ದ 300 ಅಡಿಕೆ (Areca Plant) ಗಿಡಗಳನ್ನು ನಾಶ ಪಡಿಸಲಾಗಿದೆ. ಲಕ್ಷಾಂತರ ರೂ. ನಷ್ಟ ಅನುಭವಿಸಿರುವ ರೈತ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಮಗೆ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆನವೇರಿಯ (Anaveri) ರೈತ ಲೋಕೇಶಪ್ಪ ಜಂಗರಮನಹಳ್ಳಿಯ ಅರ್ಧ ಎಕರೆ ಜಮೀನಿನಲ್ಲಿ 300 ಅಡಿಕೆ ಗಿಡಗಳನ್ನು (Areca Plant) ನೆಟ್ಟಿದ್ದರು. ಜಮೀನು ವಿವಾದದ ಹಿನ್ನೆಲೆ ರಫೀಕ್ ಮತ್ತು ಫಯಾಜ್ ಎಂಬುವವರು ಗಿಡಗಳನ್ನು ನಾಶ ಪಡಿಸಿದ್ದಾರೆ. ಇದರಿಂದ ತಮಗೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಲೋಕೇಶಪ್ಪ ದೂರಿನಲ್ಲಿ ಆಪಾದಿಸಿದ್ದಾರೆ.
ಇದನ್ನೂ ಓದಿ – ಮನೆ ಮೇಲೆ ಪೊಲೀಸ್ ದಾಳಿ, ಹಿತ್ತಲಲ್ಲಿ ಅಡಿಕೆ ಗಿಡಗಳ ಮಧ್ಯೆ ಶೋಧ, ಮಾಲೀಕನ ವಿರುದ್ಧ ದಾಖಲಾಯ್ತು ಕೇಸ್
ಗುರುವಾರ ರಾತ್ರಿ ಘಟನೆ ಸಂಭವಿಸಿದ್ದು ಇವರಿಬ್ಬರು ತಮಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






