SHIVAMOGGA LIVE NEWS | 3 SEPTEMBER 2023
HOLEHONNURU : ಅರ್ಧ ಎಕರೆಯಲ್ಲಿ ನಾಟಿ ಮಾಡಿದ್ದ 300 ಅಡಿಕೆ (Areca Plant) ಗಿಡಗಳನ್ನು ನಾಶ ಪಡಿಸಲಾಗಿದೆ. ಲಕ್ಷಾಂತರ ರೂ. ನಷ್ಟ ಅನುಭವಿಸಿರುವ ರೈತ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಮಗೆ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆನವೇರಿಯ (Anaveri) ರೈತ ಲೋಕೇಶಪ್ಪ ಜಂಗರಮನಹಳ್ಳಿಯ ಅರ್ಧ ಎಕರೆ ಜಮೀನಿನಲ್ಲಿ 300 ಅಡಿಕೆ ಗಿಡಗಳನ್ನು (Areca Plant) ನೆಟ್ಟಿದ್ದರು. ಜಮೀನು ವಿವಾದದ ಹಿನ್ನೆಲೆ ರಫೀಕ್ ಮತ್ತು ಫಯಾಜ್ ಎಂಬುವವರು ಗಿಡಗಳನ್ನು ನಾಶ ಪಡಿಸಿದ್ದಾರೆ. ಇದರಿಂದ ತಮಗೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಲೋಕೇಶಪ್ಪ ದೂರಿನಲ್ಲಿ ಆಪಾದಿಸಿದ್ದಾರೆ.
ಇದನ್ನೂ ಓದಿ – ಮನೆ ಮೇಲೆ ಪೊಲೀಸ್ ದಾಳಿ, ಹಿತ್ತಲಲ್ಲಿ ಅಡಿಕೆ ಗಿಡಗಳ ಮಧ್ಯೆ ಶೋಧ, ಮಾಲೀಕನ ವಿರುದ್ಧ ದಾಖಲಾಯ್ತು ಕೇಸ್
ಗುರುವಾರ ರಾತ್ರಿ ಘಟನೆ ಸಂಭವಿಸಿದ್ದು ಇವರಿಬ್ಬರು ತಮಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200