ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಸೆಪ್ಟಂಬರ್ 2020
ಆಮ್ ಆದ್ಮಿ ಪಕ್ಷದ ವತಿಯಿಂದ ಭದ್ರಾವತಿಯಲ್ಲಿ ಎಎಪಿ ಕೇರ್ಸ್ ಮತ್ತು ಆಕ್ಸಿಮಿತ್ರ ಯೋಜನೆಗೆ ಚಾಲನೆ ನೀಡಲಾಗಿದೆ. ಕರೋನ ಕುರಿತು ಜಾಗೃತಿ ಮೂಡಿಸಲು ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿಗೆ ತಂದಿರುವ ಈ ಯೋಜನೆಯನ್ನು ಸ್ಥಳೀಯವಾಗಿಯೂ ಜಾರಿಗೊಳಿಸಲಾಗುತ್ತಿದೆ.
ಭದ್ರಾವತಿ ರಂಗಪ್ಪ ಸರ್ಕಲ್ನಲ್ಲಿ ಎಎಪಿ ಕೇರ್ಸ್ ಮತ್ತು ಆಕ್ಸಿಮಿತ್ರಗೆ ಚಾಲನೆ ನೀಡಲಾಯಿತು. ಕರೋನ ಸೋಂಕು ವ್ಯಾಪಕಾಗಿ ಹರಡುತ್ತಿದ್ದು, ಅದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ತಿಳಿವಳಿಕೆ ಮೂಡಿಸಲಾಯಿತು. ಜನರಿಗೆ ಥರ್ಮಲ್ ಸ್ಕ್ಯಾನಿಂಗ್ ಮತ್ತು ಆಕ್ಸಿಜನ್ ಪ್ರಮಾಣ ಪರಿಶೀಲಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ಎಎಪಿ ಜಿಲ್ಲಾಧ್ಯಕ್ಷ ಹೆಚ್.ರವಿಕುಮಾರ್, ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಖಾನ್, ಪರಮೇಶ್ವರಾಚಾರ್, ಪರಮೇಶ್ ನಾಯ್ಕ್, ಜೋಸೆಫ್, ಮುಳ್ಕೆರೆ ಲೋಕೇಶ್ ಸೇರಿದಂತೆ ಹಲವರು ಇದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200