ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಭದ್ರಾವತಿಯಲ್ಲಿ ಖಂಡನೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮೆರವಣಿಗೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 06 ಜುಲೈ 2019

ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ, ಭದ್ರಾವತಿಯಲ್ಲಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿತು. ಇನ್ನು, ಈ ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಎಬಿವಿಪಿ ಸಂಘಟನೆ ಹೆಸರಿಗೆ ಕಳಂಕ ತರುವಂತೆ ಮೆಸೇಜ್ ಪ್ರಕಟಿಸುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ತಹಶೀಲ್ದಾರ್ ಕಚೇರಿ ಮುಂದೆ ಇವತ್ತು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲೇ ಬಂಧಿಸಿದ್ದಾರೆ. ಈ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಗೂ ಮೊದಲು ಭದ್ರಾವತಿಯ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಎಬಿವಿಪಿ ಪ್ರಮುಖರಾದ ಧನುಷ್, ರೇಷ್ಮ, ಸುಹಾಸಿನಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

Leave a Comment