ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020
ನಿಗದಿತ ಅಳತೆಗಿಂತಲೂ ಕಡಿಮೆ ಅಳತೆಯಲ್ಲಿ ರಸ್ತೆ ಅಗಲೀಕರಣ ಮಾಡುತ್ತಿರುವುದನ್ನು ಖಂಡಿಸಿ ಭದ್ರಾವತಿಯಲ್ಲಿ ವಕೀಲರು, ವಿವಿಧ ಸಂಘಟನೆಗಳು ಮತ್ತು ನಾಗರೀಕರು ಇವತ್ತು ಬೃಹತ್ ಪ್ರತಿಭಟನೆ ನಡೆಸಿದರು. ರಾಜಕೀಯ ಒತ್ತಡಕ್ಕೆ ಮಣಿದು ಸಮರ್ಪಕವಾಗಿ ರಸ್ತೆ ಅಗಲೀಕರಣ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾವತಿ ನ್ಯಾಯಾಲಯದಿಂದ ಅಂಬೇಡ್ಕರ್ ಸರ್ಕಲ್’ವರೆಗೆ ವಕೀಲರು ಮೆರವಣಿಗೆ ನಡೆಸಿದರು. ಇವರ ಜೊತೆಗೆ ನಾಗರೀಕರು ಮತ್ತು ವಿವಿಧ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ರಸ್ತೆ ಅಗಲೀಕರಣದಲ್ಲಿ ಆಗಿರುವ ತಾರತಮ್ಯವೇನು?
ಬಿ.ಹೆಚ್.ರಸ್ತೆಯ KSRTC ಬಸ್ ನಿಲ್ದಾಣದಿಂದ ಹೊಸ ಸೇತುವೆ ಮಾರ್ಗವಾಗಿ ತಾಲೂಕು ಕಚೇರಿ ಮುಂಭಾಗದವರೆಗೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಕೆಲವು ಕಡೆ ರಸ್ತೆ ವಿಸ್ತೀರ್ಣ ಕಿರಿದಾಗಿದೆ. ರಾಜಕಾರಣಿಗಳ ಒತ್ತಡಕ್ಕೆ ಮಣಿದು ಕಾಮಗಾರಿಯಲ್ಲಿ ತಾರತಮ್ಯ ನಡೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಕೀಲರು ಬೀದಿಗಿಳಿದಿದ್ದು ಏಕೆ?
ರಸ್ತೆಯ ಮಧ್ಯದಿಂದ ಎರಡು ಬದಿಯಲ್ಲಿ 12 ಮೀಟರ್’ನಷ್ಟು ಅಗಲೀಕರಣ ಮಾಡಬೇಕು ಎಂದು ತೀರ್ಮಾನಿಸಲಾಗಿದೆ. ಆದರೆ ಭದ್ರಾವತಿ ನ್ಯಾಯಾಲಯದ ಮುಂದೆಯೇ ರಸ್ತೆಯನ್ನು ಕಿರುದುಗೊಳಿಸಲಾಗಿದೆ. ಇದು ವಕೀಲರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ವಕೀಲರು ಬೀದಿಗಿಳಿದು ಪ್ರತಿಭಟಿಸಿದರು. ಇನ್ನು, ಅಗಲೀಕರಣಕ್ಕಾಗಿ ಹಲವರು ಮರಗಳನ್ನು ಕಡಿಯಲಾಗಿದ್ದು, ಆ ಭಾಗದಲ್ಲಿ ರಸ್ತೆ ಅಗಲೀಕರಣ ಮಾಡಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ವಕೀಲರ ಸಂಘದ ಅಧ್ಯಕ್ಷ ವಿ.ವೆಂಕಟೇಶ್, ಉಪಾಧ್ಯಕ್ಷ ಜಯರಾಮ್, ಕಾರ್ಯದರ್ಶಿ ರಾಜು, ಸಹಕಾರ್ಯದರ್ಶಿ ಮೋಹನ್, ಖಜಾಂಚಿ ರಂಗಪ್ಪ, ವಕೀಲರಾದ ಶ್ರೀಹರ್ಷ, ಚಂದ್ರೇಗೌಡ, ಹೆಚ್.ವಿಶ್ವನಾಥ್, ಆಮ್ ಆದ್ಮಿ ಪಕ್ಷದ ಮುಖಂಡ ರವಿಕುಮಾರ್, ರಾಜಾರಾಮ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






