ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021
ಮಾಜಿ ಶಾಸಕ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳದಲ್ಲಿ, ಅವರ ಪುತ್ಥಳಿಯನ್ನು ಇವತ್ತು ಅನಾವರಣ ಮಾಡಲಾಯಿತು.
ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದಲ್ಲಿರುವ ಶಕ್ತಿಧಾಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಅದನ್ನು ಇವತ್ತು ಅನಾವರಣ ಮಾಡಿ, ಪ್ರಥಮ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು.
ಹೇಗಿದೆ ಅಪ್ಪಾಜಿಗೌಡರ ಪ್ರತಿಮೆ?
ಅಮೃತ ಶಿಲೆಯಲ್ಲಿ ಅಪ್ಪಾಜಿಗೌಡ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಯು ನಾಲ್ಕೂವರೆ ಅಡಿ ಉದ್ದ, ಮೂರೂವರೆ ಅಡಿ ಅಗಲವಿದೆ. ಅಪ್ಪಾಜಿಗೌಡ ಅವರು ಕುರ್ಚಿಯೊಂದರ ಮೇಲೆ ಕುಳಿತ ರೀತಿಯಲ್ಲಿ ಈ ಪುತ್ಥಳಿಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಗೆ ನೆರಳು ನೀಡಲು ವಜ್ರಾಕೃತಿಯ ಮಂಟಪವನ್ನು ನಿರ್ಮಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಪ್ಪಾಜಿಗೌಡ ಅವರ ಪ್ರತಿಮೆ ಅನಾವರಣ ಮಾಡಿದರು. ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ, ಬಸವಕೇಂದ್ರದ ಶ್ರೀ ಡಾ.ಬಸವ ಮರಳಸಿದ್ಧ ಸ್ವಾಮೀಜಿ, ಕನಕಪೀಠದ ಶ್ರೀ ಈಶ್ವರಾನಂದ ಸ್ವಾಮೀಜಿ, ಮಾಜಿ ಶಾಸಕ ವೈ.ಎಸ್.ವಿ.ದತ್ತ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಜೆಡಿಎಸ್ ತಾಲೂಕು ಅಧ್ಯಕ್ಷ ಕರುಣಾಮೂರ್ತಿ, ಶಾರದಾ ಅಪ್ಪಾಜಿಗೌಡ, ಅಜಿತ್ ಗೌಡ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.







(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






