ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 FEBRURARY 2023
BHADRAVATHI : ವಿಐಎಸ್ಎಲ್ ಉಳಿವಾಗಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ 30 ದಿನ ಪೂರೈಸಿದೆ. ಈವರೆಗು ಪೆಂಡಾಲ್ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರು, ಈಗ ವಿಭಿನ್ನ ರೀತಿಯಲ್ಲಿ ಕಾರ್ಖಾನೆಯೊಂದಿಗಿನ ತಮ್ಮ ಸಂಬಂಧವನ್ನು ಜಗತ್ತಿಗೆ ಸಾರುವ ಪ್ರಯತ್ನ ಮಾಡಿದರು. ಪಟ್ಟಣದಲ್ಲಿ ಕಾರ್ಖಾನೆಯನ್ನು ಅಪ್ಪಿಕೋ ಚಳವಳಿ (Appiko Chalavali) ನಡೆಸಲಾಯಿತು.

ಶುಕ್ರವಾರ ಮಧ್ಯಾಹ್ನ ಕಾರ್ಮಿಕರು ವಿಐಎಸ್ಎಲ್ ಗೇಟ್, ಕಾಂಪೌಂಡ್ ಸುತ್ತುವರೆದು, ಅಪ್ಪಿಕೊಂಡರು. ‘ಕಾರ್ಖಾನೆಯೊಂದಿಗೆ ತಮಗೆ ಅವಿನಾಭಾವ ಸಂಬಂಧವಿದೆ. ಇದು ತಾಯಿ ಮಕ್ಕಳ ಸಂಬಂಧ. ಕಾರ್ಖಾನೆ ಮುಚ್ಚಿ ಹೋದರೆ ಕಾರ್ಮಿಕರು ಬೀದಿಗೆ ಬೀಳುತ್ತಾರೆ. ಹಾಗಾಗಿ ತಾಯಿಯ ರಕ್ಷಣೆಗಾಗಿ ಆಕೆಯನ್ನು ಅಪ್ಪಿಕೊಂಡಿದ್ದೇವೆ’ ಎಂದು ಕಾರ್ಮಿಕರು ತಿಳಿಸಿದರು.
ಇದನ್ನೂ ಓದಿ – ಭದ್ರಾವತಿಯಿಂದ ಬೈಕ್ ಜಾಥಾ, ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ, ಕಾರ್ಮಿಕರ ಆಕ್ರೋಶ
ಈವರೆಗೂ ಕಾರ್ಖಾನೆ ಮುಂಭಾಗ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ವಿಐಎಸ್ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ಈಗ ವಿಭಿನ್ನ ಮತ್ತು ಭಾವನಾತ್ಮಕ ರೀತಿಯಲ್ಲಿ ಆಗ್ರಹ ವ್ಯಕ್ತಪಡಿಸಿದ್ದಾರೆ.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



