ಶಿವಮೊಗ್ಗ LIVE
ಭದ್ರಾವತಿ: ವೀರಾಪುರ ಗ್ರಾಮದ ಬಳಿ ಅಡಿಕೆ (Areca Nut) ಸುಲಿಯುವ ಶೆಡ್ನಲ್ಲಿ ಅಡಿಕೆ ಕಳ್ಳತನವಾಗಿದೆ. ಶ್ರೀರಾಮನಗರ ನಿವಾಸಿ ಬೈರೆಗೌಡ ಬೇರೆಯವರ ತೋಟವನ್ನು ಪಡೆದು ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದರು.
ವೀರಾಪುರ ಗ್ರಾಮದ ಪೆಟ್ರೋಲ್ ಬಂಕ್ ಪಕ್ಕದ ಶೆಡ್ನಲ್ಲಿ ಅಡಿಕೆ ಸಂಗ್ರಹಿಸಿಟ್ಟಿದ್ದರು. ಜನವರಿ 1ರ 25 ಚೀಲ ಸುಲಿದ ಹಸಿ ಅಡಿಕೆಯನ್ನು ಶೆಡ್ನಲ್ಲಿ ಇಟ್ಟು ಮನೆಗೆ ಹೋಗಿದ್ದರು. ಜನವರಿ 2ರ ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಶೆಡ್ನಲ್ಲಿದ್ದ 25 ಚೀಲಗಳ ಪೈಕಿ ಸುಮಾರು ₹1,20,000 ಮೌಲ್ಯದ 9 ಚೀಲ ಹಸಿ ಅಡಿಕೆ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನರಿಗೆ ಚಿಕನ್ ಬಿರಿಯಾನಿ, ಲಡ್ಡು ಹಂಚಿ ಸಂಭ್ರಮಾಚರಣೆ, ಕಾರಣವೇನು?
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






