₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ: ವೀರಾಪುರ ಗ್ರಾಮದ ಬಳಿ ಅಡಿಕೆ (Areca Nut) ಸುಲಿಯುವ‌ ಶೆಡ್‌ನಲ್ಲಿ ಅಡಿಕೆ ಕಳ್ಳತನವಾಗಿದೆ. ಶ್ರೀರಾಮನಗರ ನಿವಾಸಿ ಬೈರೆಗೌಡ ಬೇರೆಯವರ ತೋಟವನ್ನು ಪಡೆದು ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದರು.

ವೀರಾಪುರ ಗ್ರಾಮದ ಪೆಟ್ರೋಲ್ ಬಂಕ್ ಪಕ್ಕದ ಶೆಡ್‌ನಲ್ಲಿ ಅಡಿಕೆ ಸಂಗ್ರಹಿಸಿಟ್ಟಿದ್ದರು. ಜನವರಿ 1ರ 25 ಚೀಲ ಸುಲಿದ ಹಸಿ ಅಡಿಕೆಯನ್ನು ಶೆಡ್‌ನಲ್ಲಿ ಇಟ್ಟು ಮನೆಗೆ ಹೋಗಿದ್ದರು. ಜನವರಿ 2ರ ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಶೆಡ್‌ನಲ್ಲಿದ್ದ 25 ಚೀಲಗಳ ಪೈಕಿ ಸುಮಾರು ₹1,20,000 ಮೌಲ್ಯದ 9 ಚೀಲ ಹಸಿ ಅಡಿಕೆ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನರಿಗೆ ಚಿಕನ್‌ ಬಿರಿಯಾನಿ, ಲಡ್ಡು ಹಂಚಿ ಸಂಭ್ರಮಾಚರಣೆ, ಕಾರಣವೇನು?

Crime-News-General-Image

Leave a Comment