ತಂದೆಯ ಕುತ್ತು ಹಿಸುಕಿ ಹತ್ಯೆ ಮಾಡಿದ ಮಗ, ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ

ಹೊಳೆಹೊನ್ನೂರು: ಕೌಟುಂಬಿಕ ಕಲಹದ ವೇಳೆ ಮಗನೇ ತಂದೆಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಅರಿಶಿಣ ಘಟ್ಟ ತಾಂಡಾದಲ್ಲಿ ನಡೆದಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಗನಾಯ್ಕ (55) ಮೃತ ದುರ್ದೈವಿ. ಕಳೆದ ರಾತ್ರಿ ಕೌಟುಂಬಿಕ ಕಲಹದ ವೇಳೆ ಪುತ್ರ ಮಂಜುನಾಥ ನಾಯ್ಕ ಶಿವಗ ನಾಯ್ಕ ಅವರ ಕತ್ತು ಹಿಸುಕಿದ್ದಾನೆ. ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಶಿವಗ ನಾಯ್ಕ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

SP-B-Nikhil-visit-arishinagatta-tanda-inspected-the-scene

ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ

ಘಟನೆಯ ಮಾಹಿತಿ ತಿಳಿದು ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಇನ್ನು, ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಅವರು ಅರಿಶಿಣ ಘಟ್ಟ ತಾಂಡಾಗೆ ಭೇಟಿ ನೀಡಿ ತನಿಖಾಧಿಕಾರಿಗಳಿಂದ ಮಾಹಿತಿ ಪಡೆದರು.