ಭರ್ತಿಯಾದ ಭದ್ರಾ ಜಲಾಶಯಕ್ಕೆ ರೈತ ಸಂಘದಿಂದ ಬಾಗಿನ, ನೀರು ಸದ್ಬಳಕೆಗೆ ಮನವಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಸೆಪ್ಟಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಭದ್ರಾ ಅಣೆಕಟ್ಟಿಗೆ ರೈತ ಸಂಘದ ವತಿಯಿಂದ ಬಾಗಿನ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ, ಭದ್ರಾ ಅಣೆಕಟ್ಟೆ ಸತತವಾಗಿ 3 ವರ್ಷ ತುಂಬಿದ್ದು ರೈತರಿಗೆ ಹರ್ಷ ತಂದಿದೆ. ನೀರು ಸದ್ಬಳಕೆ ಮಾಡಿ ಕೊಂಡರೆ ಮುಂದಿನ ಬೇಸಿಗೆ ಬೆಳೆಯನ್ನು ಸಹ ಬೆಳೆಯಬಹುದು ಎಂದರು.

ತುಂಗಾ ನದಿಯಿಂದ ಕಣಬೂರು ಮತ್ತು ಕುಸ್ಕೂರು ಹತ್ತಿರ ಪಂಪ್ ಹೌಸ್ ಕಾಮಗಾರಿ ಈಗ ಪ್ರಾರಂಭವಾಗಿದೆ. ಪೂರ್ಣಗೊಳ್ಳಲು 2 ವರ್ಷ ಬೇಕಾಗಬಹುದು. ಬಯಲು ಸೀಮೆಗೆ ನೀರು ಕೊಡಲು ನಮ್ಮ ತಕರಾರಿಲ್ಲ ಆದಷ್ಟು ಜಾಗ್ರತೆ ತುಂಗಾ ನದಿಯಿಂದ 17 ಟಿ.ಎಂ.ಸಿ ನೀರೆತ್ತಿ ಭದ್ರಾ ನದಿಯಿಂದ 6.5 ಟಿ.ಎಂ.ಸಿ ಸೇರಿ ಒಟ್ಟು 23.5ಟಿ.ಎಂ.ಸಿ ನೀರು ಕೊಡಲು ಸರ್ಕಾರದಿಂದ ಯೋಜನೆ ಮಂಜೂರಾಗಿದ್ದು ತುಂಗಾ ನದಿಯಿಂದ ನೀರೆತ್ತುವ ಕಾಮಗಾರಿ ಕೂಡಲೇ ಪೂರ್ಣಗೊಳ್ಳಬೇಕು ಎಂದು ಬಸವರಾಜಪ್ಪ ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಟಿ.ಎಂ.ಚಂದ್ರಪ್ಪ ಹಿಟ್ಟೂರು, ಈಶಣ್ಣ ಅರಬಿಳಚಿ, ಡಿ.ಹೆಚ್ ರಾಮಚಂದ್ರಪ್ಪ, ಜಿ.ಎನ್.ಪಂಚಾಕ್ಷರಿ, ಹಾಲಪ್ಪ, ಶೇಖರಪ್ಪ ಯಡೇಹಳ್ಳಿ, ಪರಮಶಿವಯ್ಯ ಇತರರು ಭಾಗವಹಿಸಿದ್ದರು.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment