ಭದ್ರಾ ನದಿಗೆ ರೈತರಿಂದ ಬಾಗಿನ, ರೈತ ಸಂಘದ ರಾಜ್ಯಾಧ್ಯಕ್ಷರಿಂದ ರೈತರು, ಸರ್ಕಾರಕ್ಕೆ 3 ಪಾಯಿಂಟ್‌ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಹೆಚ್‌.ಆರ್.ಬಸವರಾಜಪ್ಪ ನೇತೃತ್ವದಲ್ಲಿ ರೈತರು ಭದ್ರಾ ನದಿಗೆ (Bhadra River) ಭಾನುವಾರ ಬಾಗಿನ ಅರ್ಪಿಸಿದರು. 

ಬಸವರಾಜಪ್ಪ ಏನೆಲ್ಲ ಹೇಳಿದರು? 3 ಪಾಯಿಂಟ್‌

Point 1 F1F1F1ಉತ್ತಮ ಮಳೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ದೂರವಾಗಿದೆ. ಈ ವರ್ಷವೂ ಬೇಸಿಗೆ ಬೆಳೆ ಬೆಳೆಯಲು ರೈತರು ಆತಂಕಪಡುವ ಅಗತ್ಯವಿಲ್ಲ.

Point 2 F1F1F1ನೀರನ್ನು ಸದ್ಬಳಕೆ ಮಾಡಿಕೊಂಡು ಅಚ್ಚುಕಟ್ಟು ಭಾಗದ ಕೊನೆ ಭಾಗದ ರೈತರಿಗೂ ನೆರವಾಗಬೇಕು. ಎರಡೂವರೆ ಲಕ್ಷ ಎಕರೆ ಪ್ರದೇಶದಲ್ಲಿ ರೈತರು ಅಡಿಕೆ, ತೆಂಗು, ಭತ್ತ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

Point 3 F1F1F1ಭದ್ರಾ ಅಚ್ಚಕಟ್ಟು ವ್ಯಾಪ್ತಿಯ ನಾಲಾ, ಗೇಟ್‌ಗಳ ದುರಸ್ತಿ ಮಾಡದೇ ನೀರು ವ್ಯರ್ಥವಾಗುತ್ತಿದೆ. ಈ ನೀರನ್ನು ತಡೆಯಲು ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು

Bagina-to-Bhadra-river-by-HR-Basavarajappa
ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ನೇತೃತ್ವದಲ್ಲಿ ಭದ್ರಾ ನದಿಗೆ ಬಾಗಿನ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಏನಿದೆ ಅಲರ್ಟ್‌? ಇಲ್ಲಿದೆ ರಿಪೋರ್ಟ್‌

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಹಿಟ್ಟೂರು ರಾಜು, ಪ್ರಮುಖರಾದ ಟಿ.ಎಂ. ಚಂದ್ರಪ್ಪ, ಮುನಿಯಪ್ಪ, ಚಿಕ್ಕಬ್ಬಿಗೆರೆ ನಾಗರಾಜ್, ಭಾಗ್ಯಾ ರಾಘವೇಂದ್ರ, ಮರುಳಸಿದ್ದಯ್ಯ, ಮಲ್ಲಿಕಾರ್ಜುನ, ಕುಮಾರಯ್ಯ, ಪುಷ್ಪಾ, ಕೆ. ರಾಘವೇಂದ್ರ, ಹುಲಿಮಟ್ಟಿ ಜಯಣ್ಣ, ಪಿ.ಶೇಖರಪ್ಪ, ಎಂ.ಡಿ. ನಾಗರಾಜ್, ಜಿ.ಎನ್. ಪಂಚಾಕ್ಷರಿ, ಉಪಾಧ್ಯಕ್ಷ ಬಿ.ಆರ್.ಪಿ ಹಾಲಪ್ಪ, ರಾಜಶೇಖರ್, ಅಕ್ಕಿ ರಾಜು, ಮೂರ್ತಿ ಭಾಗವಹಿಸಿದ್ದರು.

Bagina to Bhadra River

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment