ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಮುಂಭಾಗ ಬೇಕರಿಯಲ್ಲಿ (Bakery) ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬೇಕರಿಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಬೇಕರಿಯಲ್ಲಿ ರಾತ್ರಿ 3 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಯವರು, ಸ್ಥಳೀಯರು ಎಚ್ಚರವಾಗಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಬೇಕರಿ ಒಳಗಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಹೊತ್ತಿರುವ ಶಂಕೆ ಇದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕರೆಂಟ್ ಕಂಬಗಳ ತೆರವಿಗೆ ಒತ್ತಾಯ, ಡಿಸಿ ಕಚೇರಿ ಮುಂಭಾಗ ಹೋರಾಟ
Bakery
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






