ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOLEHONNURU, 25 AUGUST 2024 : ಕಳೆದ ಕೆಲವು ದಿನದಿಂದ ಆತಂಕ ಸೃಷ್ಟಿಸಿದ್ದ ಕರಡಿ (Bear) ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಟ್ಟೆಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕಳೆದ ರಾತ್ರಿ ಕರಡಿ ಸೆರೆ ಸಿಕ್ಕಿದೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಚೌಡಮ್ಮ ದೇವಸ್ಥಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ರಾತ್ರಿ 2.45ಕ್ಕೆ ದೇಗುಲದ ಬಳಿ ಬಂದ ಕರಡಿ ಬೋನಿಗೆ ಬಿದ್ದಿದೆ. ಈ ದೃಶ್ಯ ದೇಗುಲದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ವಿಷಯ ತಿಳಿದು ದೊಡ್ಡ ಸಂಖ್ಯೆ ಜನರು ದೇಗುಲದ ಬಳಿ ಜಮಾಯಿಸಿದ್ದರು.

ಸುತ್ತಮುತ್ತಲ ಗ್ರಾಮದಲ್ಲಿ ಆತಂಕ ಮೂಡಿಸಿತ್ತು
ಕರಡಿ ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಉಂಟಾಗಿತ್ತು. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಕಾಣಿಸುತ್ತಿತ್ತು. ಜಮೀನು ಕೆಲಸಕ್ಕೆ ತೆರಳಲು ರೈತರು, ಕಾರ್ಮಿಕರು ಹಿಂದೇಟು ಹಾಕುತ್ತಿದ್ದರು. ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡಲು ಹೆದರುತ್ತಿದ್ದರು.

ಇದನ್ನೂ ಓದಿ ⇒ MLA ಪುತ್ರನ ಹತ್ಯೆಗೆ ಸ್ಕೆಚ್, ಎಸ್ಪಿ ಮೊದಲ ರಿಯಾಕ್ಷನ್ – 3 ಫಟಾಫಟ್ ನ್ಯೂಸ್
ವ್ಯಕ್ತಿ ಮೇಲೆ ದಾಳಿ ನಡೆಸಿತ್ತು
ಎಮ್ಮೆಹಟ್ಟಿ ಗ್ರಾಮದ ಆನಂದಪ್ಪ ಎಂಬುವರ ಮೇಲೆ ಕೆಲ ದಿನಗಳ ಹಿಂದೆ ಕರಡಿ ದಾಳಿ ನಡೆಸಿತ್ತು. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ಸಂದರ್ಭ ಏಕಾಏಕಿ ದಾಳಿಗೆ ಆನಂದಪ್ಪ ಗಾಯಗೊಂಡಿದ್ದರು. ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು. ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿತ್ತು.

ಇದನ್ನೂ ಓದಿ ⇒ ಶಿವಮೊಗ್ಗ ನಗರದ ಸಮೀಪ ಆನೆ ದಾಳಿಗೆ ವ್ಯಕ್ತಿ ಬಲಿ
ಗ್ರಾಮಸ್ಥರ ಆತಂಕದ ನಡುವೆ ಮಾವಿನಕಟ್ಟೆ ವಲಯ ಅರಣ್ಯ ಅಧಿಕಾರಿಗಳು ಕರಡಿಯ ಚಲನವಲನ ಗಮನಿಸಿ ಬೋನ್ ಇರಿಸಿದ್ದರು. ಆರ್ಎಫ್ಒ ಜಗದೀಶ ಮಾರ್ಗದರ್ಶನದಲ್ಲಿ ಬೋನ್ ಇರಿಸಿದ್ದು, ಇವತ್ತು ಕರಡಿ ಸೆರೆಯಾಗಿದೆ. ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















