
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎಲ್ಲರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸುವುದಾದರೆ ಭದ್ರಾವತಿಯಲ್ಲಿ ಸರ್ಕಾರಿ ಆಸ್ಪತ್ರೆ ಯಾಕೆ ಬೇಕು. ಸರ್ಕಾರ ಇಷ್ಟೊಂದು ಹಣವನ್ನೇಕೆ ಖರ್ಚು ಮಾಡಬೇಕು. ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಹೀಗಂತ ಸದಸ್ಯ ಕುಮುರಿ ಧರ್ಮೇಗೌಡ ಪ್ರಶ್ನೆ ಮಾಡಿದ್ದಾರೆ.
ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಿದ್ದರು ಚಿಕಿತ್ಸೆಗಾಗಿ ಗರ್ಭಿಣಿಯರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಧರ್ಮೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಇತರೆ ಸದಸ್ಯರು ಧ್ವನಿಗೂಡಿಸಿದರು. ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಪ್ರಶ್ನೆ ಮಾಡಿದರು.
ಉತ್ತರ ನೀಡಿದ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಮಲ್ಲಪ್ಪ, ಅನಸ್ತೇಶಿಯಾ ವೈದ್ಯರು ಇರದಿದ್ದ ಕಾರಣಕ್ಕೆ ಗರ್ಭಿಣಿಯರನ್ನು ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಬೇರಾವುದೆ ಸಮಸ್ಯೆಯಿಲ್ಲ. ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.
ಅಂಗನವಾಡಿ ಕಟ್ಟಡ ನಿರ್ಮಾಣ
ಕೂಡ್ಲಿಗೆರೆ ಗ್ರಾಮದಲ್ಲಿ ಹೊಸ ಅಂಗನವಾಡಿ ಕಟ್ಟಡ, ಈ ಮಳೆಗಾಲದಲ್ಲಿ ಸೋರುತ್ತಿದೆ. ಕೂಡಲೆ ಸಮಸ್ಯೆ ಬಗೆಹರಿಸಬೇಕು ಎಂದು ಸದಸ್ಯೆ ಗೀತಾ ಜಗದೀಶ್ ಆಗ್ರಹಿಸಿದರು. ಇದೆ ವೇಳೆ ಸಿಡಿಪಿಒ ಅವರು ತಾಲೂಕಿನಲ್ಲಿ ಹೊಸ ಅಂಗನವಾಡಿ ನಿರ್ಮಾಣಕ್ಕೆ 16 ಲಕ್ಷ, ಶೌಚಾಲಯ ದುರಸ್ಥಿತಿಗೆ 12 ಲಕ್ಷ ಬಿಡುಗಡೆಯಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು





