SHIVAMOGGA LIVE NEWS | 2 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭದ್ರಾವತಿ : ಭದ್ರಾ ಜಲಾಶಯದ (Bhadra Dam) ಬಲದಂಡೆ ಕಾಲುವೆಗೆ ಗೇಟ್ ಅಳವಡಿಸುವ ಕ್ರೇನ್ನ ಕೇಬಲ್ ತುಂಡಾಗಿದ್ದರಿಂದ ನಾಲೆಗೆ ಒಂದು ದಿನ ಹೆಚ್ಚುವರಿಯಾಗಿ ನೀರು ಹರಿದಿದೆ. ಭಾನುವಾರ ಬೇರೊಂದು ಕ್ರೇನ್ ತರಿಸಿ ನಾಲೆಯ ಗೇಟ್ ಬಂದ್ ಮಾಡಲಾಗಿದೆ.
ನ.29ರಂದು ಭದ್ರಾ ಜಲಾಶಯದ ಬಲದಂಡೆ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರ (ಕಾಡಾ) ತಿಳಿಸಿತ್ತು. ಅಂದು ಗೇಟ್ ಬಂದ್ ಮಾಡುವಾಗ ಬೃಹತ್ ಕ್ರೇನ್ನ ಉಕ್ಕಿನ ಕ್ರೇನ್ನ ಕೇಬಲ್ ತುಂಡಾಗಿತ್ತು. ಹಾಗಾಗಿ ಬೇರೊಂದು ಕ್ರೇನ್ ತರಿಸಿಕೊಂಡು ನಾಲೆಯ ಗೇಟ್ ಬಂದ್ ಮಾಡಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ, ಇಡೀ ದಿನ ಮೋಡ ಕವಿದ ವಾತಾವರಣ ಸಾಧ್ಯತೆ
ಈ ಮೊದಲು ನ.26ರಂದು ಬಲದಂಡೆ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಲು ಉದ್ದೇಶಿಸಲಾಗಿತ್ತು. ಆದರೆ ಕೊನೆ ಭಾಗದ ಮಲೆಬೆನ್ನೂರು ಸುತ್ತಮುತ್ತಲ ರೈತರಿಗೆ ಮತ್ತು ದಾವಣಗೆರೆಗೆ ಕುಡಿಯುವ ನೀರು ಪೂರೈಸಲು ನ.29ರವರೆಗೆ ನೀರು ಹರಿಸಲು ನಿರ್ಧರಿಸಲಾಗಿತ್ತು. ಆದರೆ ಕ್ರೇನ್ನ ಉಕ್ಕಿನ ರೋಪ್ ತುಂಡಾಗಿದ್ದರ ಒಂದು ದಿನ ಹೆಚ್ಚುವರಿಯಾಗಿ ನೀರು ಹರಿದಿದೆ.
The Bhadra reservoir’s right bank canal received two extra days of water supply due to a technical issue. A crane’s steel cable broke, delaying the gate closure. The issue has been resolved, and the gate has been closed.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






